News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅಮ್ಮನಿಗೆ ವರ ಬೇಕಿದೆ, ಷರತ್ತುಗಳು ಅನ್ವಯ. ಫೇಸ್ಬುಕ್ ನಲ್ಲಿ ಮಗನ ಪೋಸ್ಟ್ ವೈರಲ್.

86

ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ  ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್‍ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೌರವ್, ನನ್ನ ತಂದೆ ಕುಲ್ಟಿಯಲ್ಲಿ ನೌಕರಿ ಮಾಡುತ್ತಿದ್ದರು. 2014ರಲ್ಲಿ ತಂದೆಯ ನಿಧನದ ಬಳಿಕ ಅಮ್ಮ ಮನೆಯಲ್ಲಿ ಏಕಾಂಗಿಯಾಗಿದ್ದಾರೆ ಎಂಬುವುದು ನನ್ನ ಅಭಿಪ್ರಾಯ. ನಾನು ಬೆಳಗ್ಗೆ ಏಳು ಗಂಟೆಗೆ ಕೆಲಸಕ್ಕಾಗಿ ಮನೆಯಿಂದ ಹೋದರೆ ರಾತ್ರಿ ಹಿಂದಿರುಗುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಓರ್ವ ಗೆಳೆಯನ ಅವಶ್ಯಕತೆ ಇರುತ್ತದೆ. ಮದುವೆ ಬಗ್ಗೆ ಅಮ್ಮನ ಜೊತೆ ಮಾತನಾಡಿದ್ದೇನೆ. ಅಮ್ಮ ಸಹ ಈ ಕುರಿತು ಯೋಚನೆ ಮಾಡುತ್ತಿದ್ದಾರೆ. ಏಕಾಂಗಿಯಾಗಿರುವ ಅಮ್ಮನಿಗೆ ಸಂಗಾತಿ ಹುಡುಕುವುದು ನಮ್ಮ ಕರ್ತವ್ಯ. ಹಾಗಾಗಿ ಪೋಸ್ಟ್ ಮಾಡಿದ್ದೇನೆ ಎಂದು ಹೇಳುತ್ತಾರೆ. ಇದನ್ನೂ ಓದಿ

ಜನರು ಬೆನ್ನ ಹಿಂದೆ ನೂರು ಮಾತನಾಡಬಹುದು. ಯಾರಿಗೂ ನನ್ನ ಮುಂದೆ ಮಾತನಾಡಲ್ಲ. ಸಮಾಜದಲ್ಲಿ ಮಾಡುವ ಪ್ರತಿಯೊಂದು ಕೆಲಸಗಳಿಗೆ ಕೊಂಕು ಮಾತನಾಡುವ ಜನ ಇರುತ್ತಾರೆ. ಹಾಗಾಗಿ ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ಕೆಲವರು ಪ್ರಚಾರ ಪಡೆದುಕೊಳ್ಳಲು ಈ ರೀತಿಯ ಪೋಸ್ಟ್ ಮಾಡಿದ್ದೇನೆ ಎಂದು ಮಾತನಾಡಿಕೊಂಡಿದ್ದಾರೆ. ಮುಂದೆ ಮಾತನಾಡದೇ ಇರುವ ಜನರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕೆಲವರು ಸಮಾಜಕ್ಕೆ ಹೆದರಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಾರೆ ಎಂದು ಗೌರವ್ ಬೇಸರ ವ್ಯಕ್ತಪಡಿಸುತ್ತಾರೆ.

ಫೇಸ್‍ಬುಕ್ ನಲ್ಲಿ ನನ್ನ ಮನವಿ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಎಂಜಿನಿಯರ್, ಡಾಕ್ಟರ್ ಮತ್ತು ಶಿಕ್ಷಕರು ಸೇರಿದಂತೆ ಹಲವರು ತಮ್ಮ ಬಯೋಡೇಟಾ ಕಳುಹಿಸಿದ್ದಾರೆ. ಇವುಗಳಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡುವ ಜವಾಬ್ದಾರಿ ನನ್ನ ಮೇಲಿದೆ ಎಂದು ಗೌರವ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ