ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು ನಡೆಸಿದ ಹಲವು ಸಂಶೋಧನೆಗಳು ಈ ಬಗ್ಗೆ ಸತ್ಯ ಹೇಳಿದೆ. ಹಾಗಾದರೆ ಅಳುವುದರಿಂದ ದೇಹದಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಅಳುವುದರಿಂದ ಈ ಐದು ಅರೋಗ್ಯ ಸಮಸ್ಯೆಯನ್ನು ದೂರಮಾಡಬಹುದು ಎಂದು ಈ ಅಧ್ಯಯನ ತಿಳಿಸಿದೆ, ಸಮಾಜವು ಸಾಮಾನ್ಯವಾಗಿ ಅಳುವುದನ್ನು ದೌರ್ಬಲ್ಯದ ಸಂಕೇತವಾಗಿ ನೋಡುತ್ತದೆ ಆದರೆ ನೀವು ಅಳಬೇಕು ಎಂದು ನಿಮಗೆ ಅನಿಸಿದರೆ ನಿಮ್ಮ ಕಣ್ಣೀರನ್ನು ತಡೆಹಿಡಿಯಬೇಡಿ ಮತ್ತು ಇದು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅಳುವಿನ ಈ ರಹಸ್ಯದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಮೊದಲನೆಯದಾಗಿ ಹೆಚ್ಚು ಸ್ಟ್ರೆಸ್ ಅಥವಾ ಒತ್ತಡದ ಸಂದರ್ಭದಲ್ಲಿ ಅಳುವುದು ಬಹಳ ಒಳ್ಳೆಯು ಎನ್ನಬಹುದು, ಒತ್ತಡದ ಸಂದರ್ಭದಲ್ಲಿ ಕಣ್ಣೀರು ಸುರಿಸುವುದರಿಂದ ರಿಲ್ಯಾಕ್ಸ್ ಆಗಬಹುದು ಎಂದು ಸಂಶೋಧನೆ ತಿಳಿಸಿದೆ ಮತ್ತು ಆ ಕ್ಷಣಕ್ಕೆ ಇದರ ಪರಿಣಾಮ ತಿಳಿಯದಿದ್ದರೂ ಸ್ವಲ್ಪ ಸಮಯದ ನಂತರ ದೇಹ ವಿಶ್ರಾಂತಿ ಪಡೆಯಲು ಅಳು ಸಹಕಾರಿ.

ಸಂಶೋಧಕರ ಪ್ರಕಾರ ಅಳುವುದು ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು (ಪಿಎನ್ಎಸ್) ಸಕ್ರಿಯಗೊಳಿಸುತ್ತದೆ, ಸಕ್ರಿಯಗೊಳಿಸಿದಾಗ ಪಿಎನ್ಎಸ್ ಮೆದುಳಿನ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಬೀರುತ್ತದೆ. ಎರಡನೆಯದಾಗಿ ಅಧಿಕ ರಕ್ತದೊತ್ತಡವು ಪಾರ್ಶ್ವವಾಯು, ಹೃದಯಾಘಾತ, ಹೃದಯ ವೈಫಲ್ಯ, ಬುದ್ಧಿಮಾಂದ್ಯತೆ ಮತ್ತು ಮೂತ್ರಪಿಂಡದ ವೈಫಲ್ಯದಂತಹ ಹಲವಾರು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು, ಆದರೆ ಒಳ್ಳೆಯ ಸುದ್ದಿ ಏನೆಂದರೆ ಹಲವಾರು ಅಧ್ಯಯನಗಳ ಪ್ರಕಾರ, ಅಳುವುದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಅಳುವುದು ನಾಡಿಯನ್ನು ಸ್ಥಿರಗೊಳಿಸುತ್ತದೆ. ಮೂರನೆಯದಾಗಿ ಸಂಶೋಧನೆಗಳ ಪ್ರಕಾರ ಭಾವನಾತ್ಮಕವಾಗಿ ಬರುವಂತಹ ಕಣ್ಣೀರಿನಲ್ಲಿ ಕೆಲವೊಂದು ವಿಷಕಾರಿ ಅಂಶಗಳು ಇರುತ್ತದೆ ಇದರಿಂದ ಅಳು ದೇಹದಲ್ಲಿರುವ ವಿಷವನ್ನು ಹೊರಹಾಕುತ್ತದೆ.

ಇಷ್ಟೇ ಅಲ್ಲದೆ ಅಳುವಾಗ ನಿಮ್ಮ ಕಣ್ಣಿನಿಂದ ಹರಿಯುವ ಕಣ್ಣೀರು ಕಣ್ಣುಗಳಿಂದ ಹೊಗೆ ಮತ್ತು ಧೂಳಿನಂತಹ ಅಂಶಗಳನ್ನು ತೆಗೆದುಹಾಕುತ್ತದೆ, ಇದರಿಂದಾಗಿ ಹಗುರವಾದ ಮನಸ್ಥಿತಿ ಉಂಟಾಗುತ್ತದೆ. ನಾಲ್ಕನೆಯದಾಗಿ ಅಳುವುದರಿಂದ ಸಿಗುವ ಮತ್ತೊಂದು ಉಪಯೋಗ ಎಂದರೆ ಅಳುವ ಮತ್ತೊಂದು ಆರೋಗ್ಯ ಲಾಭವೆಂದರೆ ಅದು ಕಣ್ಣಿಗೆ ತೇವಾಂಶವನ್ನು ನೀಡುತ್ತದೆ, ಅಳುವುದರಿಂದ ಕಣ್ಣು ಒಣಗುವುದು, ಕೆಂಪಾಗುವುದು ಮತ್ತು ತುರಿಕೆಯನ್ನು ತಡೆಯುವಲ್ಲಿ ಸಹಕರಿಸುತ್ತದೆ. ಕೊನೆಯದಾಗಿ ನೋವನ್ನು ಕಡಿಮೆ ಮಾಡಲು ಅಳು ಸಹಕಾರಿ ಎಂದು ಸಂಶೋಧನೆ ಹೇಳುತ್ತದೆ, ನಾವು ದೈಹಿಕವಾಗಿ ನೋವಲ್ಲಿದ್ದಾಗ ಕೂಡ ಕೆಲವೊಮ್ಮೆ ಕಣ್ಣೀರು ಹೊರಬರುತ್ತದೆ ಮತ್ತು ನೋವು ಸಂವೇದನೆಯನ್ನು ಕಡಿಮೆ ಮಾಡುವ ದೇಹದ ವಿಧಾನ ಇದು. ಹೀಗೆ ಅಳುವುದಂದ ಕಣ್ಣೀರು ಸುರಿಸುವುದರಿಂದ ಆಕ್ಸಿಟೋಸಿನ್ ಮತ್ತು ಎಂಡಾರ್ಫಿನ್ಗಳು ಬಿಡುಗಡೆಯಾಗುತ್ತವೆ. ಇವುಗಳು ಮನಸ್ಸನ್ನು ಹಗುರಗೊಳಿಸಿ ಮನಸ್ಥಿತಿಯನ್ನು ಸುಧಾರಿಸುತ್ತದೆ, ದಯವಿಟ್ಟು ಈ ಉತ್ಮ ವಿಷಯವನ್ನು ಎಲ್ಲರಿಗು ತಿಳಿಸುವ ಜವಾಬ್ದಾರಿ ನಿಮ್ಮದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
![]()
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…