ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಅರಬ್ಬಿ ಮೂಲಕ ಅಣ್ಣಾಮಲೈ ಚಿತ್ರ ರಂಗ ಪ್ರವೇಶ ಮಾಡಲಿದ್ದಾರೆ ಎನ್ನಲಾಗಿದೆ.
ಕರ್ನಾಟಕದ ಸಿಂಗಂ ಎಂಬ ಹೆಸರಿನಿಂದ ಜನಪ್ರಿಯರಾಗಿದ್ದ ದಕ್ಷ ಐ.ಪಿ.ಎಸ್. ಅಧಿಕಾರಿ ಅಣ್ಣಾಮಲೈ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಅದೊಂದು ದೊಡ್ಡ ಶಾಕ್ ಎಂದೇ ಹೇಳಬಹುದು. ಆದರೆ ತಮ್ಮ ಕುಟುಂಬಕ್ಕೆ ಸಮಯ ನೀಡಬೇಕು, ಸಮಾಜ ಸೇವಾ ಕಾರ್ಯಗಳನ್ನು ಮಾಡಬೇಕೆಂಬ ಸದುದ್ದೇಶದಿಂದ ಅಣ್ಣಾ ಮಲೈ ಅವರು ರಾಜೀನಾಮೆ ನೀಡಿ ತಮ್ಮ ಊರಿಗೆ ಮರಳಿದ್ದರು. ಇದಾದ ನಂತರ ಅಣ್ಣಾಮಲೈ ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಕೂಡಾ ಹರಿದಾಡಿತ್ತು. ಆದರೆ ಇದೀಗ ಅಣ್ಣಾಮಲೈ ಅವರು ಚಿತ್ರರಂಗಕ್ಕೆ ಪ್ರವೇಶ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಿನಿಮಾದಲ್ಲಿ ಅಣ್ಣಾಮಲೈ ಅವರು ವಿಶ್ವಾಸ್ ಅವರ ಕೋಚ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಅಲ್ಲದೆ ವಿಶ್ವಾಸ್ ಪಾತ್ರದಲ್ಲಿ ಸ್ವತಃ ವಿಶ್ವಾಸ್ ಅವರೇ ನಟಿಸುತ್ತಿದ್ದಾರೆ. ಇನ್ನು ಈ ಸಿನಿಮಾಕ್ಕಾಗಿ ಅಣ್ಣಾಮಲೈ ಅವರು ಪಡೆದ ಸಂಭಾವನೆ ಎಷ್ಟು ಎಂಬುದು ಮತ್ತಷ್ಟು ಆಸಕ್ತಿಕರವಾಗಿದೆ. ಏಕೆಂದರೆ ಅವರು ಈ ಸಿನಿಮಾದ ತಮ್ಮ ಪಾತ್ರಕ್ಕಾಗಿ 1 ರೂಪಾಯಿ ಸಂಭಾವನೆ ಪಡೆದಿದ್ದಾರಂತೆ. ಅಣ್ಣಾಮಲೈ ಅವರು ಸಿನಿಮಾದಲ್ಲಿ ನಟಿಸುವ ಸುದ್ದಿ, ಅವರ ಅಭಿಮಾನಿಗಳಲ್ಲಿ ಕುತೂಹಲವನ್ನು ಮೂಡಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….