ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’ ಬಗ್ಗೆ ಇದುವರೆಗೆ ಹೆಚ್ಚಿನ ಜನರು ತಿಳಿದುಕೊಳ್ಳುವುದಾಗಲೀ, ಅದರ ಪ್ರಯೋಜನಗಳನ್ನು ಪಡೆಯುವು ದಾಗಲೀ ಮಾಡಿಲ್ಲ. ಆದರೆ ‘ವಿಟಮಿನ್ ಡಿ’ಮಹತ್ವ ಅರಿತವರು ಮಾರಕ ಕಾಯಿಲೆಗಳಿಂದ ಪಾರಾಗಿದ್ದಾರೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಹಾಗಾದರೆ ‘ವಿಟಮಿನ್ ಡಿ’ಅಂದರೆ ಏನು?,ಇದರ ಕೊರತೆಯಾದರೆ ಏನಾಗುತ್ತದೆ? ‘ವಿಟಮಿನ್ ಡಿ’ಇರುವ ಆಹಾರ ಪದಾರ್ಥಗಳು ಯಾವುವು? ಈ ಎಲ್ಲದರ ಬಗ್ಗೆ ವಿಶೇಷ ಮಾಹಿತಿ ಇಲ್ಲಿದೆ.

‘ವಿಟಮಿನ್ ಡಿ’ಪಡೆಯಲು ಮಾರ್ಗಗಳು
‘ವಿಟಮಿನ್ ಡಿ’ಬೇರೆಲ್ಲೋ ಇಲ್ಲ. ಅದು ನಮ್ಮ ಆಹಾರದಲ್ಲಿ, ಸೂರ್ಯನ ಬೆಳಕಿನಲ್ಲಿ ಇರುತ್ತದೆ. ಮೈ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಅಥವಾ ನೀವು ಹೊರಾಂಗಣದಲ್ಲಿ ಸಾಕಷ್ಟು ಸಮಯ ಕಳೆಯದಿದ್ದರೆ,‘ವಿಟಮಿನ್ ಡಿ’ಕೊರತೆಯನ್ನು ನೀಗಿಸಲು ಸಾಕಷ್ಟು ಆಹಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ವಯಸ್ಕರಲ್ಲಿ ಲಕ್ಷಣಗಳು ಹೀಗಿರುತ್ತವೆ
ವಿಟಮಿನ್ ಡಿ ಕೊರತೆಯಾದಾಗ ಮೆಟ್ಟಿಲುಗಳನ್ನು ಏರಲು ಅಥವಾ ನೆಲದಿಂದ ಅಥವಾ ಕುರ್ಚಿಯಿಂದ ಎದ್ದೇಳಲು ತೊಂದರೆಯುಂಟಾಗಬಹುದು. ಮೂಳೆಗಳು ಮಧ್ಯಮ ಒತ್ತಡದಿಂದ ನೋವನ್ನು ಅನುಭವಿಸಬಹುದು. ಮೂಳೆ ನೋವು ಕೆಳ ಬೆನ್ನು, ಸೊಂಟ, ತೊಡೆ ಮತ್ತು ಪಾದಗಳಲ್ಲಿಯೂ ಕಂಡುಬರುತ್ತದೆ.
ವಿಟಮಿನ್ ಡಿ ಕೊರತೆಗೆ ಕಾರಣಗಳು
ಸೂರ್ಯನ ಬೆಳಕು ಮೈ ಮೇಲೆ ಬೀಳದಿರುವುದು ವಿಟಮಿನ್ ಡಿ ಕೊರತೆಗೆ ಪ್ರಮುಖ ಮತ್ತು ಸಾಮಾನ್ಯ ಕಾರಣವಾಗಿದೆ. ಕೆಲವು ವೈದ್ಯಕೀಯ ಸಮಸ್ಯೆಗಳು ವಿಟಮಿನ್ ಡಿ ಹೀರಿ ಕೊಳ್ಳುವಿಕೆಯನ್ನು ಸಹ ತಡೆಯುತ್ತವೆ. ಕ್ರೋನ್ಸ್, ಸಿಸ್ಟಿಕ್ ಫೈಬ್ರೋಸಿಸ್ ಮತ್ತು ಉದರದ ಕಾಯಿಲೆಗಳು ಇದ್ದರೆ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಡಿ ಪಡೆಯಲು ಸಾಧ್ಯವಾಗುವುದಿಲ್ಲ. ದೇಹದ ಅನೇಕ ಪ್ರಮುಖ ಕಾರ್ಯಗಳಲ್ಲಿ ವಿಟಮಿನ್ ಡಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಕೊರತೆಯಾದಾಗ ಅದನ್ನು ತಡೆಗಟ್ಟುವುದಕ್ಕಿಂತ ಗುಣಪಡಿಸುವುದು ಉತ್ತಮ.

ವಿಟಮಿನ್ ಡಿ ಕೊರತೆ ತಡೆಯುವುದು ಹೇಗೆ?
*ಗರ್ಭಿಣಿಯರು ಮತ್ತು ಸ್ತನ್ಯಪಾನ ಮಾಡುವ ಮಹಿಳೆಯರು ಪ್ರತಿದಿನ
10 ಮೈಕ್ರೊಗ್ರಾಂ ವಿಟಮಿನ್ ಡಿ ಇರುವ ಆಹಾರ ಪದಾರ್ಥಗಳನ್ನು, ಫುಡ್ ಸಪ್ಲಿಮೆಂಟ್ ಅನ್ನು ತೆಗೆದುಕೊಳ್ಳಬೇಕು.
*6 ತಿಂಗಳಿಂದ ಐದು ವರ್ಷ ವಯಸ್ಸಿನ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ವಿಟಮಿನ್ ಡಿ ಇರುವ ಆಹಾರಗಳು ಖಡ್ಡಾಯ.
*65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಸೂರ್ಯನ ಕಿರಣಗಳಿಗೆ ಮೈಯ್ಯನ್ನು ಹೆಚ್ಚು ಒಡ್ಡದಿರುವುದರಿಂದ 10 *ಮೈಕ್ರೊಗ್ರಾಂ ವಿಟಮಿನ್ ಡಿ ಹೊಂದಿರುವ ಫುಡ್ ಸಪ್ಲಿಮೆಂಟ್ ತೆಗೆದುಕೊಳ್ಳಬೇಕು.
*ಕರುಳು, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಕಾಯಿಲೆ ಇರುವವರಿಗೆ ದಿನನಿತ್ಯ ಫುಡ್ ಸಪ್ಲಿ ಮೆಂಟ್ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಬಹುದು.
*ವಿಟಮಿನ್ ಡಿ ಸೇವನೆಯಿಂದ ತ್ವಚೆ, ಕೂದಲು ಮತ್ತು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.

ವಿಟಮಿನ್ ಡಿ ತೆಗೆದುಕೊಳ್ಳುವುದರಿಂದ ಪ್ರಯೋಜನಗಳು
ಇದು ಕರುಳು ಪೋಷಕಾಂಶಗಳು, ಕ್ಯಾಲ್ಸಿಯಂ ಮತ್ತು ರಂಜಕ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಬಲವಾದ ಮೂಳೆ ಪಡೆಯಲು ಸಹಾಯ ಮಾಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ವಿಟಮಿನ್ ಡಿ ಆಸ್ಟಿಯೋಮಲೇಶಿಯಾ ತಡೆಯುತ್ತದೆ (ವಿಟಮಿನ್ ಡಿ ಕೊರತೆಯಿರುವ ವಯಸ್ಕರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…