ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’ ಬಗ್ಗೆ ಇದುವರೆಗೆ ಹೆಚ್ಚಿನ ಜನರು ತಿಳಿದುಕೊಳ್ಳುವುದಾಗಲೀ, ಅದರ ಪ್ರಯೋಜನಗಳನ್ನು ಪಡೆಯುವು ದಾಗಲೀ ಮಾಡಿಲ್ಲ. ಆದರೆ ‘ವಿಟಮಿನ್ ಡಿ’ಮಹತ್ವ ಅರಿತವರು ಮಾರಕ ಕಾಯಿಲೆಗಳಿಂದ ಪಾರಾಗಿದ್ದಾರೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಹಾಗಾದರೆ ‘ವಿಟಮಿನ್ ಡಿ’ಅಂದರೆ ಏನು?,ಇದರ ಕೊರತೆಯಾದರೆ ಏನಾಗುತ್ತದೆ? ‘ವಿಟಮಿನ್ ಡಿ’ಇರುವ ಆಹಾರ ಪದಾರ್ಥಗಳು ಯಾವುವು? ಈ ಎಲ್ಲದರ ಬಗ್ಗೆ ವಿಶೇಷ ಮಾಹಿತಿ ಇಲ್ಲಿದೆ.

‘ವಿಟಮಿನ್ ಡಿ’ಪಡೆಯಲು ಮಾರ್ಗಗಳು
‘ವಿಟಮಿನ್ ಡಿ’ಬೇರೆಲ್ಲೋ ಇಲ್ಲ. ಅದು ನಮ್ಮ ಆಹಾರದಲ್ಲಿ, ಸೂರ್ಯನ ಬೆಳಕಿನಲ್ಲಿ ಇರುತ್ತದೆ. ಮೈ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಅಥವಾ ನೀವು ಹೊರಾಂಗಣದಲ್ಲಿ ಸಾಕಷ್ಟು ಸಮಯ ಕಳೆಯದಿದ್ದರೆ,‘ವಿಟಮಿನ್ ಡಿ’ಕೊರತೆಯನ್ನು ನೀಗಿಸಲು ಸಾಕಷ್ಟು ಆಹಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ವಯಸ್ಕರಲ್ಲಿ ಲಕ್ಷಣಗಳು ಹೀಗಿರುತ್ತವೆ
ವಿಟಮಿನ್ ಡಿ ಕೊರತೆಯಾದಾಗ ಮೆಟ್ಟಿಲುಗಳನ್ನು ಏರಲು ಅಥವಾ ನೆಲದಿಂದ ಅಥವಾ ಕುರ್ಚಿಯಿಂದ ಎದ್ದೇಳಲು ತೊಂದರೆಯುಂಟಾಗಬಹುದು. ಮೂಳೆಗಳು ಮಧ್ಯಮ ಒತ್ತಡದಿಂದ ನೋವನ್ನು ಅನುಭವಿಸಬಹುದು. ಮೂಳೆ ನೋವು ಕೆಳ ಬೆನ್ನು, ಸೊಂಟ, ತೊಡೆ ಮತ್ತು ಪಾದಗಳಲ್ಲಿಯೂ ಕಂಡುಬರುತ್ತದೆ.
ವಿಟಮಿನ್ ಡಿ ಕೊರತೆಗೆ ಕಾರಣಗಳು
ಸೂರ್ಯನ ಬೆಳಕು ಮೈ ಮೇಲೆ ಬೀಳದಿರುವುದು ವಿಟಮಿನ್ ಡಿ ಕೊರತೆಗೆ ಪ್ರಮುಖ ಮತ್ತು ಸಾಮಾನ್ಯ ಕಾರಣವಾಗಿದೆ. ಕೆಲವು ವೈದ್ಯಕೀಯ ಸಮಸ್ಯೆಗಳು ವಿಟಮಿನ್ ಡಿ ಹೀರಿ ಕೊಳ್ಳುವಿಕೆಯನ್ನು ಸಹ ತಡೆಯುತ್ತವೆ. ಕ್ರೋನ್ಸ್, ಸಿಸ್ಟಿಕ್ ಫೈಬ್ರೋಸಿಸ್ ಮತ್ತು ಉದರದ ಕಾಯಿಲೆಗಳು ಇದ್ದರೆ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಡಿ ಪಡೆಯಲು ಸಾಧ್ಯವಾಗುವುದಿಲ್ಲ. ದೇಹದ ಅನೇಕ ಪ್ರಮುಖ ಕಾರ್ಯಗಳಲ್ಲಿ ವಿಟಮಿನ್ ಡಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಕೊರತೆಯಾದಾಗ ಅದನ್ನು ತಡೆಗಟ್ಟುವುದಕ್ಕಿಂತ ಗುಣಪಡಿಸುವುದು ಉತ್ತಮ.

ವಿಟಮಿನ್ ಡಿ ಕೊರತೆ ತಡೆಯುವುದು ಹೇಗೆ?
*ಗರ್ಭಿಣಿಯರು ಮತ್ತು ಸ್ತನ್ಯಪಾನ ಮಾಡುವ ಮಹಿಳೆಯರು ಪ್ರತಿದಿನ
10 ಮೈಕ್ರೊಗ್ರಾಂ ವಿಟಮಿನ್ ಡಿ ಇರುವ ಆಹಾರ ಪದಾರ್ಥಗಳನ್ನು, ಫುಡ್ ಸಪ್ಲಿಮೆಂಟ್ ಅನ್ನು ತೆಗೆದುಕೊಳ್ಳಬೇಕು.
*6 ತಿಂಗಳಿಂದ ಐದು ವರ್ಷ ವಯಸ್ಸಿನ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ವಿಟಮಿನ್ ಡಿ ಇರುವ ಆಹಾರಗಳು ಖಡ್ಡಾಯ.
*65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಸೂರ್ಯನ ಕಿರಣಗಳಿಗೆ ಮೈಯ್ಯನ್ನು ಹೆಚ್ಚು ಒಡ್ಡದಿರುವುದರಿಂದ 10 *ಮೈಕ್ರೊಗ್ರಾಂ ವಿಟಮಿನ್ ಡಿ ಹೊಂದಿರುವ ಫುಡ್ ಸಪ್ಲಿಮೆಂಟ್ ತೆಗೆದುಕೊಳ್ಳಬೇಕು.
*ಕರುಳು, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಕಾಯಿಲೆ ಇರುವವರಿಗೆ ದಿನನಿತ್ಯ ಫುಡ್ ಸಪ್ಲಿ ಮೆಂಟ್ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಬಹುದು.
*ವಿಟಮಿನ್ ಡಿ ಸೇವನೆಯಿಂದ ತ್ವಚೆ, ಕೂದಲು ಮತ್ತು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.

ವಿಟಮಿನ್ ಡಿ ತೆಗೆದುಕೊಳ್ಳುವುದರಿಂದ ಪ್ರಯೋಜನಗಳು
ಇದು ಕರುಳು ಪೋಷಕಾಂಶಗಳು, ಕ್ಯಾಲ್ಸಿಯಂ ಮತ್ತು ರಂಜಕ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಬಲವಾದ ಮೂಳೆ ಪಡೆಯಲು ಸಹಾಯ ಮಾಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ವಿಟಮಿನ್ ಡಿ ಆಸ್ಟಿಯೋಮಲೇಶಿಯಾ ತಡೆಯುತ್ತದೆ (ವಿಟಮಿನ್ ಡಿ ಕೊರತೆಯಿರುವ ವಯಸ್ಕರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.