ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ.
ಹೃದಯಾಘಾತದ ಸಾಧ್ಯತೆ
ಜಾಮಾ ಅಧ್ಯಯನದ ಪ್ರಕಾರ, ಬೆಳಗಿನ ಉಪಹಾರವನ್ನು ತ್ಯಜಿಸುವ ಪುರುಷರಲ್ಲಿ ಹೃದಯಾಘಾತದ ಸಾಧ್ಯತೆ ಶೇ.27ಕ್ಕಿಂತ ಹೆಚ್ಚಿರುತ್ತದೆ. ಈ ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ. ಲೇಹ್ ಕಾಹಿಲ್, ನೀವು ಆರೋಗ್ಯಕರವಾದ ಉಪಹಾರ ಸೇವಿಸಿದರೆ ಹೃದಯಾಘಾತದ ಅಪಾಯ ತಡೆಯಬಹುದು. ಬೆಳಗಿನ ಉಪಾಹಾರವನ್ನು ತ್ಯಜಿಸಿದರೆ ಜನರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.
ತೂಕ ಹೆಚ್ಚಾಗುತ್ತದೆ
ಬೆಳಗಿನ ಸಮಯದಲ್ಲಿ ಉಪಹಾರವನ್ನು ಸೇವಿಸದಿರುವವರ ಕುರಿತು ನಡೆಸಿದ ಅಧ್ಯಯನಗಳ ಪ್ರಕಾರ, ಬೆಳಗ್ಗೆ ತಿಂಡಿ ತಿನ್ನದವರು ಕ್ರಮೇಣ ತೂಕವನ್ನು ಹೆಚ್ಚಿಸಿಕೊಂಡಿದ್ದರು. ಹಸಿವಿನ ಮಟ್ಟ ಹೆಚ್ಚಾದಷ್ಟೂ ಆಹಾರ ಸೇವನೆಯ ಪ್ರಮಾಣ ಹೆಚ್ಚಾಗುತ್ತದೆ. ತಿಂಡಿ ತ್ಯಜಿಸುವ ನಿರಂತರ ಅಭ್ಯಾಸವು ಅಂತಿಮವಾಗಿ ತೂಕ ಹೆಚ್ಚಾಗಲು ಕಾರಣವಾಗುತ್ತದೆ ಹೊರತು ತೂಕ ನಷ್ಟಕ್ಕೆ ಕಾರಣವಾಗುವುದಿಲ್ಲ ಎನ್ನುವುದನ್ನು ಮರೆಯಬೇಡಿ.
ದೇಹದ ಶಕ್ತಿ ಕುಗ್ಗುತ್ತದೆ
1999 ರಲ್ಲಿ ಫಿಸಿಯೋಲಾಜಿಕಲ್ ಬಿಹೇವಿಯರ್ ಎಂಬ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಉಪಹಾರವನ್ನು ತ್ಯಜಿಸುವುದರಿಂದ ದೇಹದ ಶಕ್ತಿ ಮತ್ತು ಮನಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಕ್ಯಾನ್ಸರ್ ಬರಬಹುದು!!
ಬೆಳಗಿನ ಸಮಯದಲ್ಲಿ ಉಪಹಾರ ತ್ಯಜಿಸಿ, ಆ ನಂತರ ಆಹಾರವನ್ನು ಅತಿಯಾಗಿ ಸೇವಿಸಿದರೆ ಸ್ಥೂಲಕಾಯತೆ ಬರಲು ದಾರಿ ಮಾಡಿ ಕೊಟ್ಟಂತಾಗುತ್ತದೆ. ಕ್ಯಾನ್ಸರ್ ರಿಸರ್ಚ್ ಯುಕೆ ನಡೆಸಿದ ಸಂಶೋಧನೆಯ ಪ್ರಕಾರ, ಅಧಿಕ ತೂಕ ಅಥವಾ ಬೊಜ್ಜು ಹೊಂದಿರುವ ವ್ಯಕ್ತಿಗೆ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ತಿಳಿದುಬಂದಿದೆ.
ವಿಶುಯಲ್ ಸರ್ಚ್ ಟೆಸ್ಟ್
12 ರಿಂದ 15 ವರ್ಷದೊಳಗಿನ ಮಕ್ಕಳ ಮೇಲೆ ಒಂದು ಅಧ್ಯಯನ ನಡೆಸಲಾಯಿತು. ಮೊದಲನೆ ಪ್ರಯೋಗದಲ್ಲಿ ಇವರಿಗೆ ಉಪಹಾರ ನೀಡಲು ಅವಕಾಶ ನೀಡಲಾಯಿತು. ಎರಡನೇ ಪ್ರಯೋಗದಲ್ಲಿ ಉಪಹಾರ ಕೊಡಲಿಲ್ಲ. ಆಗ ಬಂದ ಫಲಿತಾಂಶ ಹೀಗಿತ್ತು. ಉಪಹಾರ ಸೇವಿಸಿದಾಗ ವಿಶುಯಲ್ ಸರ್ಚ್ ಟೆಸ್ಟ್ ರಿಸಲ್ಟ್ ಉತ್ತಮವಾಗಿತ್ತು. ಉಪಹಾರದ ಸೇವಿಸದಿದ್ದಾಗ ರಿಸಲ್ಟ್ ಶೂನ್ಯ. ಹದಿಹರೆಯದವರ ಮೇಲೆ ಈ ಅಧ್ಯಯನವನ್ನು ನಡೆಸಲಾಗಿದ್ದರೂ ಇದು ವಯಸ್ಕರಿಗೂ ಅನ್ವಯವಾಗುತ್ತದೆ.
ಕೂದಲು ಉದುರುತ್ತದೆ
ಬೆಳಗಿನ ಸಮಯ ಉಪಹಾರ ತ್ಯಜಿಸುವುದರಿಂದ ಆಗುವ ಅಡ್ಡಪರಿಣಾಮವೆಂದರೆ ಕೂದಲು ಉದುರುವುದು. ಇದು ಕೂದಲಿನ ಬೆಳವಣಿಗೆಯನ್ನು ತಪ್ಪಿಸಿ, ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ನಿಮಗೆ ಗೊತ್ತಿದೆಯೋ, ಇಲ್ಲವೋ ನೀವು ಬೆಳಗಿನ ಸಮಯ ಉಪಹಾರ ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ನೀವು ನಿಜಕ್ಕೂ ಸೊಂಪಾದ ಕೂದಲನ್ನು ಬಯಸಿದ್ದರೆ ಪ್ರತಿದಿನ ಪ್ರೊಟೀನ್ ಭರಿತ ಉಪಹಾರ ಸೇವಿಸಿ.
ಚಯಾಪಚಯ ಕ್ರಿಯೆ ಉಪಹಾರದಿಂದಲೇ
ಇಂಧನ ಇಲ್ಲದಿದ್ದರೆ ಕಾರು ಹೇಗೆ ಸ್ಟಾರ್ಟ್ ಆಗುವುದಿಲ್ಲವೋ ಅಂತೆಯೇ, ನಮ್ಮ ಚಯಾಪಚಯ ಕ್ರಿಯೆ ಪ್ರಾರಂಭವಾಗಲು ಉಪಹಾರ ಬೇಕು. ರಾತ್ರಿ12 ಗಂಟೆಗಳ ಕಾಲ ವಿಶ್ರಾಂತಿ ಪಡೆದ ನಂತರ ದೇಹವನ್ನು ಪೋಷಿಸುವುದು ಬೆಳಗಿನ ಉಪಾಹಾರ. ವಿವಿಧ ಅಧ್ಯಯನಗಳ ಪ್ರಕಾರ ಉಪಹಾರ ಸೇವಿಸುವ ಜನರ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.