News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

99

ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ.

ಹೃದಯಾಘಾತದ ಸಾಧ್ಯತೆ
ಜಾಮಾ ಅಧ್ಯಯನದ ಪ್ರಕಾರ, ಬೆಳಗಿನ ಉಪಹಾರವನ್ನು ತ್ಯಜಿಸುವ ಪುರುಷರಲ್ಲಿ ಹೃದಯಾಘಾತದ ಸಾಧ್ಯತೆ ಶೇ.27ಕ್ಕಿಂತ ಹೆಚ್ಚಿರುತ್ತದೆ. ಈ ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ. ಲೇಹ್ ಕಾಹಿಲ್, ನೀವು ಆರೋಗ್ಯಕರವಾದ ಉಪಹಾರ ಸೇವಿಸಿದರೆ ಹೃದಯಾಘಾತದ ಅಪಾಯ ತಡೆಯಬಹುದು. ಬೆಳಗಿನ ಉಪಾಹಾರವನ್ನು ತ್ಯಜಿಸಿದರೆ ಜನರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.


ತೂಕ ಹೆಚ್ಚಾಗುತ್ತದೆ
ಬೆಳಗಿನ ಸಮಯದಲ್ಲಿ ಉಪಹಾರವನ್ನು ಸೇವಿಸದಿರುವವರ ಕುರಿತು ನಡೆಸಿದ ಅಧ್ಯಯನಗಳ ಪ್ರಕಾರ, ಬೆಳಗ್ಗೆ ತಿಂಡಿ ತಿನ್ನದವರು ಕ್ರಮೇಣ ತೂಕವನ್ನು ಹೆಚ್ಚಿಸಿಕೊಂಡಿದ್ದರು. ಹಸಿವಿನ ಮಟ್ಟ ಹೆಚ್ಚಾದಷ್ಟೂ ಆಹಾರ ಸೇವನೆಯ ಪ್ರಮಾಣ ಹೆಚ್ಚಾಗುತ್ತದೆ. ತಿಂಡಿ ತ್ಯಜಿಸುವ ನಿರಂತರ ಅಭ್ಯಾಸವು ಅಂತಿಮವಾಗಿ ತೂಕ ಹೆಚ್ಚಾಗಲು ಕಾರಣವಾಗುತ್ತದೆ ಹೊರತು ತೂಕ ನಷ್ಟಕ್ಕೆ ಕಾರಣವಾಗುವುದಿಲ್ಲ ಎನ್ನುವುದನ್ನು ಮರೆಯಬೇಡಿ.

ದೇಹದ ಶಕ್ತಿ ಕುಗ್ಗುತ್ತದೆ
1999 ರಲ್ಲಿ ಫಿಸಿಯೋಲಾಜಿಕಲ್ ಬಿಹೇವಿಯರ್ ಎಂಬ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಉಪಹಾರವನ್ನು ತ್ಯಜಿಸುವುದರಿಂದ ದೇಹದ ಶಕ್ತಿ ಮತ್ತು ಮನಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಕ್ಯಾನ್ಸರ್ ಬರಬಹುದು!!
ಬೆಳಗಿನ ಸಮಯದಲ್ಲಿ ಉಪಹಾರ ತ್ಯಜಿಸಿ, ಆ ನಂತರ ಆಹಾರವನ್ನು ಅತಿಯಾಗಿ ಸೇವಿಸಿದರೆ ಸ್ಥೂಲಕಾಯತೆ ಬರಲು ದಾರಿ ಮಾಡಿ ಕೊಟ್ಟಂತಾಗುತ್ತದೆ. ಕ್ಯಾನ್ಸರ್ ರಿಸರ್ಚ್ ಯುಕೆ ನಡೆಸಿದ ಸಂಶೋಧನೆಯ ಪ್ರಕಾರ, ಅಧಿಕ ತೂಕ ಅಥವಾ ಬೊಜ್ಜು ಹೊಂದಿರುವ ವ್ಯಕ್ತಿಗೆ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ತಿಳಿದುಬಂದಿದೆ.

ವಿಶುಯಲ್ ಸರ್ಚ್ ಟೆಸ್ಟ್
12 ರಿಂದ 15 ವರ್ಷದೊಳಗಿನ ಮಕ್ಕಳ ಮೇಲೆ ಒಂದು ಅಧ್ಯಯನ ನಡೆಸಲಾಯಿತು. ಮೊದಲನೆ ಪ್ರಯೋಗದಲ್ಲಿ ಇವರಿಗೆ ಉಪಹಾರ ನೀಡಲು ಅವಕಾಶ ನೀಡಲಾಯಿತು. ಎರಡನೇ ಪ್ರಯೋಗದಲ್ಲಿ ಉಪಹಾರ ಕೊಡಲಿಲ್ಲ. ಆಗ ಬಂದ ಫಲಿತಾಂಶ ಹೀಗಿತ್ತು. ಉಪಹಾರ ಸೇವಿಸಿದಾಗ ವಿಶುಯಲ್ ಸರ್ಚ್ ಟೆಸ್ಟ್ ರಿಸಲ್ಟ್ ಉತ್ತಮವಾಗಿತ್ತು. ಉಪಹಾರದ ಸೇವಿಸದಿದ್ದಾಗ ರಿಸಲ್ಟ್ ಶೂನ್ಯ. ಹದಿಹರೆಯದವರ ಮೇಲೆ ಈ ಅಧ್ಯಯನವನ್ನು ನಡೆಸಲಾಗಿದ್ದರೂ ಇದು ವಯಸ್ಕರಿಗೂ ಅನ್ವಯವಾಗುತ್ತದೆ.

ಕೂದಲು ಉದುರುತ್ತದೆ
ಬೆಳಗಿನ ಸಮಯ ಉಪಹಾರ ತ್ಯಜಿಸುವುದರಿಂದ ಆಗುವ ಅಡ್ಡಪರಿಣಾಮವೆಂದರೆ ಕೂದಲು ಉದುರುವುದು. ಇದು ಕೂದಲಿನ ಬೆಳವಣಿಗೆಯನ್ನು ತಪ್ಪಿಸಿ, ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ನಿಮಗೆ ಗೊತ್ತಿದೆಯೋ, ಇಲ್ಲವೋ ನೀವು ಬೆಳಗಿನ ಸಮಯ ಉಪಹಾರ ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ನೀವು ನಿಜಕ್ಕೂ ಸೊಂಪಾದ ಕೂದಲನ್ನು ಬಯಸಿದ್ದರೆ ಪ್ರತಿದಿನ ಪ್ರೊಟೀನ್ ಭರಿತ ಉಪಹಾರ ಸೇವಿಸಿ.

ಚಯಾಪಚಯ ಕ್ರಿಯೆ ಉಪಹಾರದಿಂದಲೇ
ಇಂಧನ ಇಲ್ಲದಿದ್ದರೆ ಕಾರು ಹೇಗೆ ಸ್ಟಾರ್ಟ್ ಆಗುವುದಿಲ್ಲವೋ ಅಂತೆಯೇ, ನಮ್ಮ ಚಯಾಪಚಯ ಕ್ರಿಯೆ ಪ್ರಾರಂಭವಾಗಲು ಉಪಹಾರ ಬೇಕು. ರಾತ್ರಿ12 ಗಂಟೆಗಳ ಕಾಲ ವಿಶ್ರಾಂತಿ ಪಡೆದ ನಂತರ ದೇಹವನ್ನು ಪೋಷಿಸುವುದು ಬೆಳಗಿನ ಉಪಾಹಾರ. ವಿವಿಧ ಅಧ್ಯಯನಗಳ ಪ್ರಕಾರ ಉಪಹಾರ ಸೇವಿಸುವ ಜನರ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…

  • ವಿಸ್ಮಯ ಜಗತ್ತು

    ಈ ಊರಲ್ಲಿ ಕಪ್ಪೆಗಳಿಗೆ ಮದುವೆ ಮಾಡಿದ್ರು, ಆಮೇಲೆ ಏನಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು  ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…