ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ ಮಮತೆಯಿಂದ ಅವನು ಕವಚ ಕುಂಡಲಗಳೊಂದಿಗೇ ಜನಿಸುವಂತೆ ನೋಡಿಕೊಂಡ ಸೂರ್ಯದೇವ.
ಮುಂದೆ, ಅಪವಾದಕ್ಕೆ ಹೆದರಿದ ಕುಂತಿ, ಆಗ ತಾನೆ ಹುಟ್ಟಿದ ಮಗುವನ್ನು ನದಿಯಲ್ಲಿ ತೇಲಿ ಬಿಡುವುದು, ಹಾಗೆ ತೇಲಿ ಹೋದ ಮಗು ರಾಧಾ-ಅದಿರಥ ಎಂಬ ಬೆಸ್ತ ದಂಪತಿಗೆ ಸಿಗುವುದು; ಅವರಿಬ್ಬರೂ ಈತನನ್ನು ಸಾಕುವುದು ಮತ್ತು ಅದೇ ಕಾರಣಕ್ಕೆ ಸೂತಪುತ್ರ ಎಂಬ ಹೀಯಾಳಿಕೆಯಂಥ ಮಾತಿಗೆ ಕರ್ಣ ಪದೇಪದೇ ಈಡಾಗುವುದು. ಈ ಕಥೆ ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, ಬಿಲ್ವಿದ್ಯೆ ಕಲಿಯಬೇಕೆಂಬ ಮಹದಾಸೆಯಿಂದ ತಾನು ಬ್ರಾಹ್ಮಣ ಕುಮಾರ ಎಂದು ಹೇಳಿಕೊಂಡು ಪರಶುರಾಮರ ಬಳಿ ಹೋಗುವುದು, ವಿದ್ಯೆ ಕಲಿಯುವುದು, ಅವರ ಮೆಚ್ಚಿನ ಶಿಷ್ಯನಾಗುವುದು ಹಾಗೂ ಕಡೆಗೊಮ್ಮೆ ಅನಿವಾರ್ಯ ಸಂದರ್ಭದಲ್ಲಿ ಬಾಣ ಪ್ರಯೋಗದ ಮಂತ್ರವೇ ನೆನಪಿಗೆ ಬಾರದಿರಲಿ’ ಎಂಬ ಶಾಪಕ್ಕೆ ಗುರಿಯಾಗುವುದು.

ಕೊನೆಗೆ ಮಹಾಭಾರತ ಯುದ್ಧದ ಸಮಯದಲ್ಲಿ ಪರಶುರಾಮನ ಶಾಪದ ಕಾರಣ ತನ್ನ ವಿದ್ಯೆ ಮರೆತುಹೋಗಿ ರಥ ಮಣ್ಣಿನಲ್ಲಿ ಹೂತಿದ್ದಾಗ ಅರ್ಜುನನ ಬಾಣದಿಂದ ಸಾಯುತ್ತಾನೆ. ಕರ್ಣ ಪರಾಕ್ರಮಿ ಎಂದು ಕೃಷ್ಣನಿಗೆ ತಿಳಿದಿತ್ತು, ಕರ್ಣ ಅಸಾಧಾರಣ ಯೋಧನೆಂದು ಕೃಷ್ಣನಿಗೆ ಮೊದಲೇ ತಿಳಿದಿತ್ತು, ಅರ್ಜುನ ಎಷ್ಟೇ ದೊಡ್ಡ ಬಿಲ್ಲುಗಾರನಾಗಿದ್ದರೂ ಅವನನ್ನು ಕರ್ಣ ಮುಂದೆ ಸೋಲಿಸಬಹುದು ಎಂಬ ಭಯ ಕೂಡ ಕ್ರಷ್ಣನನಿಗಿತ್ತು.
ಸ್ನೇಹಿತರೆ ಕರ್ಣ ಸಾಯಲು ಅನೇಕ ಕಾರಣಗಳಿವೆ, ಇದರಲ್ಲಿ ಒಂದು ಕಾರಣ ಕರ್ಣನು ಸೂರ್ಯನಿಂದ ಪಡೆದ ರಕ್ಷಾಕವಚ, ಇದು ಇರುವವರೆಗೂ ಕೂಡ ಯಾವುದೇ ಆಯುಧವು ಅವನಿಗೆ ಹಾನಿ ಮಾಡಲು ಸಾದ್ಯವಿರಲಿಲ್ಲ ಆದ್ದರಿಂದ ಅರ್ಜುನ ಕರ್ಣನನ್ನು ಕೊಲ್ಲುವುದು ಅಸಾಧ್ಯವಾಗಿತ್ತು. ಕರ್ಣನ ಪರಾಕ್ರಮ ಜನಜನಿತವಾಗಿ ಬೆಳಗಿದಂತೆಯೇ ಅವನ ದಾನಗುಣವೂ ವಿಖ್ಯಾತವಾಯಿತು, ಭೀಮ ದುರ್ಯೋಧನರಿಗೆ ಹೇಗೆ ಬದ್ಧವೈರವೋ ಹಾಗೆಯೇ ಕರ್ಣ ಅರ್ಜುನರಿಗೆ ಎಲ್ಲ ವಿಷಯಗಳಲ್ಲಿಯೂ ಸ್ಪರ್ಧೆ ನಡೆಯುತ್ತಿತ್ತು. ಅರ್ಜುನನ ಮೇಲ್ಮೈಯಲ್ಲಿ ಆಸಕ್ತನಾಗಿದ್ದ ಇಂದ್ರನಿಗೆ ಕರ್ಣನನ್ನು ಹೇಗಾದರೂ ಮಾಡಿ ನಿಶ್ಶಕ್ತನನ್ನಾಗಿ ಮಾಡಬೇಕೆಂಬ ಯೋಚನೆ ಬಲವಾಗಿ ಕಾಡಲಾರಂಭಿಸಿತು. ಕರ್ಣನ ಉದಾರಗುಣವನ್ನು ಕೇಳಿದ ಆತ ಒಂದು ದಿನ ವಿಪ್ರವೇಷದಲ್ಲಿ ಕರ್ಣನಲ್ಲಿಗೆ ಬಂದು ಆತನ ಕವಚಕುಂಡಲಗಳನ್ನು ಬೇಡಿದ.

ಇಂದ್ರನ ಸಂಚನ್ನು ಮೊದಲೇ ತಿಳಿದ ಸೂರ್ಯ ಕರ್ಣನಿಗೆ ಸ್ವಪ್ನದಲ್ಲಿ ಕಾಣಿಸಿಕೊಂಡು ಎಚ್ಚರಸಿದ್ದರೂ ಕರ್ಣ ತನ್ನ ಸಹಜಗುಣಕ್ಕೆ ಅನುಸಾರವಾಗಿ ತನಗೆ ರಕ್ಷೆಯಂತಿದ್ದ ಕವಚಕುಂಡಲಗಳನ್ನು ಮನಃಪೂರ್ವಕವಾಗಿ ಇಂದ್ರನಿಗೆ ಒಪ್ಪಿಸಿದ. ನಂತರ ತಾನು ಅರಿಯದೆ ಮಾಡಿದ ತಪ್ಪಿನಿಂದಾಗಿ ಹಾಗು ಅಗತ್ಯ ಇರುವ ಸಂದರ್ಭದಲ್ಲೇ ಕರ್ಣನಿಗಿದ್ದ ಶಾಪಗಳು ಅವನಿಗೆ ಮುಳುವಾಗಿ ಸಾಯಬೇಕಾಯಿತು. ಇಷ್ಟಕ್ಕೂ ಸಾಯುವ ಮುನ್ನ ಕೃಷ್ಣನಿಂದ ಮೂರು ವರ ಪಡೆದಕೊಂಡ ಈ ರೋಚಕ ಕಥೆ ನಿಮಗೆ ಗೊತ್ತಾ ಹೇಳುತ್ತೇವೆ ಕೇಳಿ, ಕೊನೆಯ ಕ್ಷಣಗಳಲ್ಲಿ ಕರ್ಣನ ಕೌಶಲ್ಯ ಮತ್ತು ಭಕ್ತಿಯಿಂದ ಸಂತಸಗೊಂಡ ಶ್ರೀ ಕೃಷ್ಣ ಕರ್ಣನಿಗೆ ಮೂರು ವರಗಳನ್ನು ಕೇಳುವಂತೆ ಹೇಳುತ್ತಾನೆ. ಇದೆ ಸಮಯದಲ್ಲಿ ಕರ್ಣ ಕೇಳಿದ ಆ ಕೊನೆಯ ಆಸೆಗಳು ಏನಾಗಿದ್ದವು ಗೊತ್ತಾ, ಹಾಗಾದರೆ ಕರ್ಣ ಕೇಳಿದ ಕೊನೆಯ ಆಸೆಯ ಬಗ್ಗೆ ನಾವು ಈಗ ನಿಮಗೆ ತಿಳಿಸುತ್ತೇವೆ ಓದಿ.

ತನ್ನ ಮೊದಲ ವರದಲ್ಲಿ ಜ್ಞಾನಿ ಕರ್ಣನು ಕೃಷ್ಣನನ್ನು ಮುಂದಿನ ಜೀವನದಲ್ಲಿ ತನ್ನ ರೀತಿಯ ಜನರ ಉನ್ನತಿಗಾಗಿ ವಿಶೇಷವಾದ ಏನನ್ನಾದರೂ ಮಾಡಲು ವರವನ್ನು ಕೇಳಿದನು, ಏಕೆಂದರೆ ಅವನು ಸೂತ್ರ ಪುತ್ರನಾಗಿರುವುದರಿಂದ ಅವನ ಜೀವನದುದ್ದಕ್ಕೂ ಮೋಸ ಮತ್ತು ದುಃಖವನ್ನು ಎದುರಿಸಿದ್ದ. ಎರಡನೆಯ ವರವಾಗಿ ಕರ್ಣನು ತನ್ನ ಮುಂದಿನ ಜೀವನದಲ್ಲಿ ಕೃಷ್ಣನು ತನ್ನ ರಾಜ್ಯದಲ್ಲಿ ಜನಿಸಬೇಕೆಂದು ಕರ್ಣನು ಕೇಳಿಕೊಳ್ಳುತ್ತಾನೆ, ಇನ್ನು ತನ್ನ ಕೊನೆಯ ವರದಲ್ಲಿ ಕರ್ಣ ತನ್ನ ಕೊನೆಯ ವಿಧಿಗಳನ್ನು ಭೂಮಂಡಲದಲ್ಲಿ ಯಾವುದೇ ಪಾಪವಿಲ್ಲದ ಸ್ಥಳದಲ್ಲಿ ನಡೆಸಬೇಕೆಂದು ಕೃಷ್ಣನಿಗೆ ಹೇಳಿದನು, ಇನ್ನು ಇಡೀ ಭೂಮಿಯ ಮೇಲೆ ಅಂತಹ ಸ್ಥಳವಿಲ್ಲದ ಕಾರಣ ಕೃಷ್ಣನು ತನ್ನ ಅಂಗೈಯಲ್ಲೇ ಕರ್ಣನ ಕೊನೆಯ ವಿಧಿಗಳನ್ನು ಮಾಡಿದನು ಇದರಿಂದ ಕರ್ಣ ಮೋಕ್ಷವನ್ನು ಕೂಡ ಪಡೆಯುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್ನಿಂದ ಹೊಡಿಬೇಕಾ? ಅಥವಾ ಗ್ಯಾಸ್ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…