inspirational, ಸುದ್ದಿ

ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

1184


ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ ಮಮತೆಯಿಂದ ಅವನು ಕವಚ ಕುಂಡಲಗಳೊಂದಿಗೇ ಜನಿಸುವಂತೆ ನೋಡಿಕೊಂಡ ಸೂರ್ಯದೇವ. 
ಮುಂದೆ, ಅಪವಾದಕ್ಕೆ ಹೆದರಿದ ಕುಂತಿ, ಆಗ ತಾನೆ ಹುಟ್ಟಿದ ಮಗುವನ್ನು ನದಿಯಲ್ಲಿ ತೇಲಿ ಬಿಡುವುದು, ಹಾಗೆ ತೇಲಿ ಹೋದ ಮಗು ರಾಧಾ-ಅದಿರಥ ಎಂಬ ಬೆಸ್ತ ದಂಪತಿಗೆ ಸಿಗುವುದು; ಅವರಿಬ್ಬರೂ ಈತನನ್ನು ಸಾಕುವುದು ಮತ್ತು ಅದೇ ಕಾರಣಕ್ಕೆ ಸೂತಪುತ್ರ ಎಂಬ ಹೀಯಾಳಿಕೆಯಂಥ ಮಾತಿಗೆ ಕರ್ಣ ಪದೇಪದೇ ಈಡಾಗುವುದು. ಈ ಕಥೆ ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, ಬಿಲ್ವಿದ್ಯೆ ಕಲಿಯಬೇಕೆಂಬ ಮಹದಾಸೆಯಿಂದ ತಾನು ಬ್ರಾಹ್ಮಣ ಕುಮಾರ ಎಂದು ಹೇಳಿಕೊಂಡು ಪರಶುರಾಮರ ಬಳಿ ಹೋಗುವುದು, ವಿದ್ಯೆ ಕಲಿಯುವುದು, ಅವರ ಮೆಚ್ಚಿನ ಶಿಷ್ಯನಾಗುವುದು ಹಾಗೂ ಕಡೆಗೊಮ್ಮೆ ಅನಿವಾರ್ಯ ಸಂದರ್ಭದಲ್ಲಿ ಬಾಣ ಪ್ರಯೋಗದ ಮಂತ್ರವೇ ನೆನಪಿಗೆ ಬಾರದಿರಲಿ’ ಎಂಬ ಶಾಪಕ್ಕೆ ಗುರಿಯಾಗುವುದು.

ಕೊನೆಗೆ ಮಹಾಭಾರತ ಯುದ್ಧದ ಸಮಯದಲ್ಲಿ ಪರಶುರಾಮನ ಶಾಪದ ಕಾರಣ ತನ್ನ ವಿದ್ಯೆ ಮರೆತುಹೋಗಿ ರಥ ಮಣ್ಣಿನಲ್ಲಿ ಹೂತಿದ್ದಾಗ ಅರ್ಜುನನ ಬಾಣದಿಂದ ಸಾಯುತ್ತಾನೆ. ಕರ್ಣ ಪರಾಕ್ರಮಿ ಎಂದು ಕೃಷ್ಣನಿಗೆ ತಿಳಿದಿತ್ತು, ಕರ್ಣ ಅಸಾಧಾರಣ ಯೋಧನೆಂದು ಕೃಷ್ಣನಿಗೆ ಮೊದಲೇ ತಿಳಿದಿತ್ತು, ಅರ್ಜುನ ಎಷ್ಟೇ ದೊಡ್ಡ ಬಿಲ್ಲುಗಾರನಾಗಿದ್ದರೂ ಅವನನ್ನು ಕರ್ಣ ಮುಂದೆ ಸೋಲಿಸಬಹುದು ಎಂಬ ಭಯ ಕೂಡ ಕ್ರಷ್ಣನನಿಗಿತ್ತು.

ಸ್ನೇಹಿತರೆ ಕರ್ಣ ಸಾಯಲು ಅನೇಕ ಕಾರಣಗಳಿವೆ, ಇದರಲ್ಲಿ ಒಂದು ಕಾರಣ ಕರ್ಣನು ಸೂರ್ಯನಿಂದ ಪಡೆದ ರಕ್ಷಾಕವಚ, ಇದು ಇರುವವರೆಗೂ ಕೂಡ ಯಾವುದೇ ಆಯುಧವು ಅವನಿಗೆ ಹಾನಿ ಮಾಡಲು ಸಾದ್ಯವಿರಲಿಲ್ಲ ಆದ್ದರಿಂದ ಅರ್ಜುನ ಕರ್ಣನನ್ನು ಕೊಲ್ಲುವುದು ಅಸಾಧ್ಯವಾಗಿತ್ತು. ಕರ್ಣನ ಪರಾಕ್ರಮ ಜನಜನಿತವಾಗಿ ಬೆಳಗಿದಂತೆಯೇ ಅವನ ದಾನಗುಣವೂ ವಿಖ್ಯಾತವಾಯಿತು, ಭೀಮ ದುರ್ಯೋಧನರಿಗೆ ಹೇಗೆ ಬದ್ಧವೈರವೋ ಹಾಗೆಯೇ ಕರ್ಣ ಅರ್ಜುನರಿಗೆ ಎಲ್ಲ ವಿಷಯಗಳಲ್ಲಿಯೂ ಸ್ಪರ್ಧೆ ನಡೆಯುತ್ತಿತ್ತು. ಅರ್ಜುನನ ಮೇಲ್ಮೈಯಲ್ಲಿ ಆಸಕ್ತನಾಗಿದ್ದ ಇಂದ್ರನಿಗೆ ಕರ್ಣನನ್ನು ಹೇಗಾದರೂ ಮಾಡಿ ನಿಶ್ಶಕ್ತನನ್ನಾಗಿ ಮಾಡಬೇಕೆಂಬ ಯೋಚನೆ ಬಲವಾಗಿ ಕಾಡಲಾರಂಭಿಸಿತು. ಕರ್ಣನ ಉದಾರಗುಣವನ್ನು ಕೇಳಿದ ಆತ ಒಂದು ದಿನ ವಿಪ್ರವೇಷದಲ್ಲಿ ಕರ್ಣನಲ್ಲಿಗೆ ಬಂದು ಆತನ ಕವಚಕುಂಡಲಗಳನ್ನು ಬೇಡಿದ.

ಇಂದ್ರನ ಸಂಚನ್ನು ಮೊದಲೇ ತಿಳಿದ ಸೂರ್ಯ ಕರ್ಣನಿಗೆ ಸ್ವಪ್ನದಲ್ಲಿ ಕಾಣಿಸಿಕೊಂಡು ಎಚ್ಚರಸಿದ್ದರೂ ಕರ್ಣ ತನ್ನ ಸಹಜಗುಣಕ್ಕೆ ಅನುಸಾರವಾಗಿ ತನಗೆ ರಕ್ಷೆಯಂತಿದ್ದ ಕವಚಕುಂಡಲಗಳನ್ನು ಮನಃಪೂರ್ವಕವಾಗಿ ಇಂದ್ರನಿಗೆ ಒಪ್ಪಿಸಿದ. ನಂತರ ತಾನು ಅರಿಯದೆ ಮಾಡಿದ ತಪ್ಪಿನಿಂದಾಗಿ ಹಾಗು ಅಗತ್ಯ ಇರುವ ಸಂದರ್ಭದಲ್ಲೇ ಕರ್ಣನಿಗಿದ್ದ ಶಾಪಗಳು ಅವನಿಗೆ ಮುಳುವಾಗಿ ಸಾಯಬೇಕಾಯಿತು. ಇಷ್ಟಕ್ಕೂ ಸಾಯುವ ಮುನ್ನ ಕೃಷ್ಣನಿಂದ ಮೂರು ವರ ಪಡೆದಕೊಂಡ ಈ ರೋಚಕ ಕಥೆ ನಿಮಗೆ ಗೊತ್ತಾ ಹೇಳುತ್ತೇವೆ ಕೇಳಿ, ಕೊನೆಯ ಕ್ಷಣಗಳಲ್ಲಿ ಕರ್ಣನ ಕೌಶಲ್ಯ ಮತ್ತು ಭಕ್ತಿಯಿಂದ ಸಂತಸಗೊಂಡ ಶ್ರೀ ಕೃಷ್ಣ ಕರ್ಣನಿಗೆ ಮೂರು ವರಗಳನ್ನು ಕೇಳುವಂತೆ ಹೇಳುತ್ತಾನೆ. ಇದೆ ಸಮಯದಲ್ಲಿ ಕರ್ಣ ಕೇಳಿದ ಆ ಕೊನೆಯ ಆಸೆಗಳು ಏನಾಗಿದ್ದವು ಗೊತ್ತಾ, ಹಾಗಾದರೆ ಕರ್ಣ ಕೇಳಿದ ಕೊನೆಯ ಆಸೆಯ ಬಗ್ಗೆ ನಾವು ಈಗ ನಿಮಗೆ ತಿಳಿಸುತ್ತೇವೆ ಓದಿ.

ತನ್ನ ಮೊದಲ ವರದಲ್ಲಿ ಜ್ಞಾನಿ ಕರ್ಣನು ಕೃಷ್ಣನನ್ನು ಮುಂದಿನ ಜೀವನದಲ್ಲಿ ತನ್ನ ರೀತಿಯ ಜನರ ಉನ್ನತಿಗಾಗಿ ವಿಶೇಷವಾದ ಏನನ್ನಾದರೂ ಮಾಡಲು ವರವನ್ನು ಕೇಳಿದನು, ಏಕೆಂದರೆ ಅವನು ಸೂತ್ರ ಪುತ್ರನಾಗಿರುವುದರಿಂದ ಅವನ ಜೀವನದುದ್ದಕ್ಕೂ ಮೋಸ ಮತ್ತು ದುಃಖವನ್ನು ಎದುರಿಸಿದ್ದ. ಎರಡನೆಯ ವರವಾಗಿ ಕರ್ಣನು ತನ್ನ ಮುಂದಿನ ಜೀವನದಲ್ಲಿ ಕೃಷ್ಣನು ತನ್ನ ರಾಜ್ಯದಲ್ಲಿ ಜನಿಸಬೇಕೆಂದು ಕರ್ಣನು ಕೇಳಿಕೊಳ್ಳುತ್ತಾನೆ, ಇನ್ನು ತನ್ನ ಕೊನೆಯ ವರದಲ್ಲಿ ಕರ್ಣ ತನ್ನ ಕೊನೆಯ ವಿಧಿಗಳನ್ನು ಭೂಮಂಡಲದಲ್ಲಿ ಯಾವುದೇ ಪಾಪವಿಲ್ಲದ ಸ್ಥಳದಲ್ಲಿ ನಡೆಸಬೇಕೆಂದು ಕೃಷ್ಣನಿಗೆ ಹೇಳಿದನು, ಇನ್ನು ಇಡೀ ಭೂಮಿಯ ಮೇಲೆ ಅಂತಹ ಸ್ಥಳವಿಲ್ಲದ ಕಾರಣ ಕೃಷ್ಣನು ತನ್ನ ಅಂಗೈಯಲ್ಲೇ ಕರ್ಣನ ಕೊನೆಯ ವಿಧಿಗಳನ್ನು ಮಾಡಿದನು ಇದರಿಂದ ಕರ್ಣ ಮೋಕ್ಷವನ್ನು ಕೂಡ ಪಡೆಯುತ್ತಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…

  • ಸುದ್ದಿ

    8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಸುನಿಲ್ ನಾಯ್ಕರಿಂದ ಉಚಿತ ಬೈಸಿಕಲ್ ವಿತರಣೆ

    ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…

  • ಸುದ್ದಿ

    ಬೆಂಗಳೂರಿನ ಪುಂಡ ಪೋಕರಿಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್..!ಏಕೆ ಗೊತ್ತಾ..?ಈ ಲೇಖನ ಓದಿ…

    ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.

  • ಸುದ್ದಿ

    ಹಾಲಲ್ಲ,ಆಲ್ಕೋಹಾಲ್‍ನಲ್ಲೂ ಕಲಬೆರಕೆ; ಬಾಟಲ್ ಖಾಲಿ ಮಾಡುವಾಗ ಬಯಲಿಗೆ ಬಂದ ಸತ್ಯ..! ಈ ಗಟನೆ ನಡೆದಿದ್ದು ಎಲ್ಲಿ ಗೊತ್ತಾ?

    ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್‍ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • ರೆಸಿಪಿ

    106 ವರ್ಷದ ಈ ಅಜ್ಜಿ ವಿಶ್ವದ ಹಿರಿಯ ಯೂಟ್ಯೂಬ್ ಸ್ಟಾರ್..!ಈ ಅಜ್ಜಿ ಯೂಟ್ಯೂಬ್ ಸ್ಟಾರ್ ಆಗಿದ್ದು ಹೇಗೆ ಗೊತ್ತಾ?

    ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.