News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational, ಸುದ್ದಿ

ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

1208


ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ ಮಮತೆಯಿಂದ ಅವನು ಕವಚ ಕುಂಡಲಗಳೊಂದಿಗೇ ಜನಿಸುವಂತೆ ನೋಡಿಕೊಂಡ ಸೂರ್ಯದೇವ. 
ಮುಂದೆ, ಅಪವಾದಕ್ಕೆ ಹೆದರಿದ ಕುಂತಿ, ಆಗ ತಾನೆ ಹುಟ್ಟಿದ ಮಗುವನ್ನು ನದಿಯಲ್ಲಿ ತೇಲಿ ಬಿಡುವುದು, ಹಾಗೆ ತೇಲಿ ಹೋದ ಮಗು ರಾಧಾ-ಅದಿರಥ ಎಂಬ ಬೆಸ್ತ ದಂಪತಿಗೆ ಸಿಗುವುದು; ಅವರಿಬ್ಬರೂ ಈತನನ್ನು ಸಾಕುವುದು ಮತ್ತು ಅದೇ ಕಾರಣಕ್ಕೆ ಸೂತಪುತ್ರ ಎಂಬ ಹೀಯಾಳಿಕೆಯಂಥ ಮಾತಿಗೆ ಕರ್ಣ ಪದೇಪದೇ ಈಡಾಗುವುದು. ಈ ಕಥೆ ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, ಬಿಲ್ವಿದ್ಯೆ ಕಲಿಯಬೇಕೆಂಬ ಮಹದಾಸೆಯಿಂದ ತಾನು ಬ್ರಾಹ್ಮಣ ಕುಮಾರ ಎಂದು ಹೇಳಿಕೊಂಡು ಪರಶುರಾಮರ ಬಳಿ ಹೋಗುವುದು, ವಿದ್ಯೆ ಕಲಿಯುವುದು, ಅವರ ಮೆಚ್ಚಿನ ಶಿಷ್ಯನಾಗುವುದು ಹಾಗೂ ಕಡೆಗೊಮ್ಮೆ ಅನಿವಾರ್ಯ ಸಂದರ್ಭದಲ್ಲಿ ಬಾಣ ಪ್ರಯೋಗದ ಮಂತ್ರವೇ ನೆನಪಿಗೆ ಬಾರದಿರಲಿ’ ಎಂಬ ಶಾಪಕ್ಕೆ ಗುರಿಯಾಗುವುದು.

ಕೊನೆಗೆ ಮಹಾಭಾರತ ಯುದ್ಧದ ಸಮಯದಲ್ಲಿ ಪರಶುರಾಮನ ಶಾಪದ ಕಾರಣ ತನ್ನ ವಿದ್ಯೆ ಮರೆತುಹೋಗಿ ರಥ ಮಣ್ಣಿನಲ್ಲಿ ಹೂತಿದ್ದಾಗ ಅರ್ಜುನನ ಬಾಣದಿಂದ ಸಾಯುತ್ತಾನೆ. ಕರ್ಣ ಪರಾಕ್ರಮಿ ಎಂದು ಕೃಷ್ಣನಿಗೆ ತಿಳಿದಿತ್ತು, ಕರ್ಣ ಅಸಾಧಾರಣ ಯೋಧನೆಂದು ಕೃಷ್ಣನಿಗೆ ಮೊದಲೇ ತಿಳಿದಿತ್ತು, ಅರ್ಜುನ ಎಷ್ಟೇ ದೊಡ್ಡ ಬಿಲ್ಲುಗಾರನಾಗಿದ್ದರೂ ಅವನನ್ನು ಕರ್ಣ ಮುಂದೆ ಸೋಲಿಸಬಹುದು ಎಂಬ ಭಯ ಕೂಡ ಕ್ರಷ್ಣನನಿಗಿತ್ತು.

ಸ್ನೇಹಿತರೆ ಕರ್ಣ ಸಾಯಲು ಅನೇಕ ಕಾರಣಗಳಿವೆ, ಇದರಲ್ಲಿ ಒಂದು ಕಾರಣ ಕರ್ಣನು ಸೂರ್ಯನಿಂದ ಪಡೆದ ರಕ್ಷಾಕವಚ, ಇದು ಇರುವವರೆಗೂ ಕೂಡ ಯಾವುದೇ ಆಯುಧವು ಅವನಿಗೆ ಹಾನಿ ಮಾಡಲು ಸಾದ್ಯವಿರಲಿಲ್ಲ ಆದ್ದರಿಂದ ಅರ್ಜುನ ಕರ್ಣನನ್ನು ಕೊಲ್ಲುವುದು ಅಸಾಧ್ಯವಾಗಿತ್ತು. ಕರ್ಣನ ಪರಾಕ್ರಮ ಜನಜನಿತವಾಗಿ ಬೆಳಗಿದಂತೆಯೇ ಅವನ ದಾನಗುಣವೂ ವಿಖ್ಯಾತವಾಯಿತು, ಭೀಮ ದುರ್ಯೋಧನರಿಗೆ ಹೇಗೆ ಬದ್ಧವೈರವೋ ಹಾಗೆಯೇ ಕರ್ಣ ಅರ್ಜುನರಿಗೆ ಎಲ್ಲ ವಿಷಯಗಳಲ್ಲಿಯೂ ಸ್ಪರ್ಧೆ ನಡೆಯುತ್ತಿತ್ತು. ಅರ್ಜುನನ ಮೇಲ್ಮೈಯಲ್ಲಿ ಆಸಕ್ತನಾಗಿದ್ದ ಇಂದ್ರನಿಗೆ ಕರ್ಣನನ್ನು ಹೇಗಾದರೂ ಮಾಡಿ ನಿಶ್ಶಕ್ತನನ್ನಾಗಿ ಮಾಡಬೇಕೆಂಬ ಯೋಚನೆ ಬಲವಾಗಿ ಕಾಡಲಾರಂಭಿಸಿತು. ಕರ್ಣನ ಉದಾರಗುಣವನ್ನು ಕೇಳಿದ ಆತ ಒಂದು ದಿನ ವಿಪ್ರವೇಷದಲ್ಲಿ ಕರ್ಣನಲ್ಲಿಗೆ ಬಂದು ಆತನ ಕವಚಕುಂಡಲಗಳನ್ನು ಬೇಡಿದ.

ಇಂದ್ರನ ಸಂಚನ್ನು ಮೊದಲೇ ತಿಳಿದ ಸೂರ್ಯ ಕರ್ಣನಿಗೆ ಸ್ವಪ್ನದಲ್ಲಿ ಕಾಣಿಸಿಕೊಂಡು ಎಚ್ಚರಸಿದ್ದರೂ ಕರ್ಣ ತನ್ನ ಸಹಜಗುಣಕ್ಕೆ ಅನುಸಾರವಾಗಿ ತನಗೆ ರಕ್ಷೆಯಂತಿದ್ದ ಕವಚಕುಂಡಲಗಳನ್ನು ಮನಃಪೂರ್ವಕವಾಗಿ ಇಂದ್ರನಿಗೆ ಒಪ್ಪಿಸಿದ. ನಂತರ ತಾನು ಅರಿಯದೆ ಮಾಡಿದ ತಪ್ಪಿನಿಂದಾಗಿ ಹಾಗು ಅಗತ್ಯ ಇರುವ ಸಂದರ್ಭದಲ್ಲೇ ಕರ್ಣನಿಗಿದ್ದ ಶಾಪಗಳು ಅವನಿಗೆ ಮುಳುವಾಗಿ ಸಾಯಬೇಕಾಯಿತು. ಇಷ್ಟಕ್ಕೂ ಸಾಯುವ ಮುನ್ನ ಕೃಷ್ಣನಿಂದ ಮೂರು ವರ ಪಡೆದಕೊಂಡ ಈ ರೋಚಕ ಕಥೆ ನಿಮಗೆ ಗೊತ್ತಾ ಹೇಳುತ್ತೇವೆ ಕೇಳಿ, ಕೊನೆಯ ಕ್ಷಣಗಳಲ್ಲಿ ಕರ್ಣನ ಕೌಶಲ್ಯ ಮತ್ತು ಭಕ್ತಿಯಿಂದ ಸಂತಸಗೊಂಡ ಶ್ರೀ ಕೃಷ್ಣ ಕರ್ಣನಿಗೆ ಮೂರು ವರಗಳನ್ನು ಕೇಳುವಂತೆ ಹೇಳುತ್ತಾನೆ. ಇದೆ ಸಮಯದಲ್ಲಿ ಕರ್ಣ ಕೇಳಿದ ಆ ಕೊನೆಯ ಆಸೆಗಳು ಏನಾಗಿದ್ದವು ಗೊತ್ತಾ, ಹಾಗಾದರೆ ಕರ್ಣ ಕೇಳಿದ ಕೊನೆಯ ಆಸೆಯ ಬಗ್ಗೆ ನಾವು ಈಗ ನಿಮಗೆ ತಿಳಿಸುತ್ತೇವೆ ಓದಿ.

ತನ್ನ ಮೊದಲ ವರದಲ್ಲಿ ಜ್ಞಾನಿ ಕರ್ಣನು ಕೃಷ್ಣನನ್ನು ಮುಂದಿನ ಜೀವನದಲ್ಲಿ ತನ್ನ ರೀತಿಯ ಜನರ ಉನ್ನತಿಗಾಗಿ ವಿಶೇಷವಾದ ಏನನ್ನಾದರೂ ಮಾಡಲು ವರವನ್ನು ಕೇಳಿದನು, ಏಕೆಂದರೆ ಅವನು ಸೂತ್ರ ಪುತ್ರನಾಗಿರುವುದರಿಂದ ಅವನ ಜೀವನದುದ್ದಕ್ಕೂ ಮೋಸ ಮತ್ತು ದುಃಖವನ್ನು ಎದುರಿಸಿದ್ದ. ಎರಡನೆಯ ವರವಾಗಿ ಕರ್ಣನು ತನ್ನ ಮುಂದಿನ ಜೀವನದಲ್ಲಿ ಕೃಷ್ಣನು ತನ್ನ ರಾಜ್ಯದಲ್ಲಿ ಜನಿಸಬೇಕೆಂದು ಕರ್ಣನು ಕೇಳಿಕೊಳ್ಳುತ್ತಾನೆ, ಇನ್ನು ತನ್ನ ಕೊನೆಯ ವರದಲ್ಲಿ ಕರ್ಣ ತನ್ನ ಕೊನೆಯ ವಿಧಿಗಳನ್ನು ಭೂಮಂಡಲದಲ್ಲಿ ಯಾವುದೇ ಪಾಪವಿಲ್ಲದ ಸ್ಥಳದಲ್ಲಿ ನಡೆಸಬೇಕೆಂದು ಕೃಷ್ಣನಿಗೆ ಹೇಳಿದನು, ಇನ್ನು ಇಡೀ ಭೂಮಿಯ ಮೇಲೆ ಅಂತಹ ಸ್ಥಳವಿಲ್ಲದ ಕಾರಣ ಕೃಷ್ಣನು ತನ್ನ ಅಂಗೈಯಲ್ಲೇ ಕರ್ಣನ ಕೊನೆಯ ವಿಧಿಗಳನ್ನು ಮಾಡಿದನು ಇದರಿಂದ ಕರ್ಣ ಮೋಕ್ಷವನ್ನು ಕೂಡ ಪಡೆಯುತ್ತಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ದಯವಿಟ್ಟು ಹೀಗೆ ಹಲ್ಲುಜ್ಜುವುದು ಬೇಡವೇ ಬೇಡ ??? ಏಕೇ ಗೊತ್ತಾ? ಮುಂದೆ ಓದಿ…..

    ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

  • ಸಿನಿಮಾ

    ಸ್ಟಾರ್ ನಟ ನಟಿಯ ಕಿಸ್ಸಿಂಗ್ ಫೋಟೋ ಬಯಲು ಮಾಡಿ ಬಿರುಗಾಳಿ ಎಬ್ಬಿಸಿದ ನಟಿ!

    ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • Sports, ಕ್ರೀಡೆ

    ಕ್ರಿಕೆಟ್ ನಲ್ಲಿ ಹೊಸ ನಿಯಮ ಜಾರಿಗೆ ನಿಮಗೋತ್ತಾ

    ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್‌ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್‌ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…

    Loading

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…