ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು. ಧ್ರುವನ್ ಅವರು ನಟಿಸುವ ಈ ಚಿತ್ರಕ್ಕೆ ಶಿವಣ್ಣ ಕ್ಲಾಪ್ ಮಾಡಿದರೆ ದಚ್ಚು ಕ್ಯಾಮೆರಾ ಆನ್ ಮಾಡಿ ಚಿತ್ರದ ಮುಹೂರ್ತಕ್ಕೆ ಚಾಲನೆ ನೀಡಿದರು.

ಆ ಸಂದರ್ಭದಲ್ಲಿ ಶಿವಣ್ಣ ಹಾಗೂ ದರ್ಶನ್ ಅವರು ಮಾಧ್ಯಮದವರ ಜೊತೆ ಮಾತನಾಡಿದರು. ಮಾಧ್ಯಮದವರು ಇಬ್ಬರೂ ಒಟ್ಟಿಗೆ ನಟಿಸುವಿರಾ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಣ್ಣ ಇಬ್ಬರಿಗೂ ಹೊಂದಿಕೆ ಆಗುವಂತಹ ಒಳ್ಳೆಯ ಕಥೆ ಸಿಕ್ಕರೆ ಖಂಡಿತಾ ಒಟ್ಟಾಗಿ ನಟಿಸುತ್ತೇವೆ ಎಂದು ಹೇಳಿದರೆ. ದರ್ಶನ್ ಅವರು ನಮ್ಮಿಬ್ಬರನ್ನೂ ಒಟ್ಟಾಗಿ ಸಿನಿಮಾದಲ್ಲಿ ಸರಿ ತೋಗಿಸುವಂತಹ (ಹ್ಯಾಂಡಲ್) ನಿರ್ದೇಶಕರು ಯಾರೂ ಇಲ್ಲ? ಅಂತಹ ನಿರ್ದೇಶಕರು ಸಿಕ್ಕರೆ ಖಂಡಿತಾ ಒಟ್ಟಾಗಿ ಸಿನಿಮಾ ಮಾಡುತ್ತೇವೆ ಎಂದರು. ಮಾದ್ಯಮದವರ ಮತ್ತೊಂದು ಪ್ರಶ್ನೆ ಒಟ್ಟಾಗಿ ನಟಿಸಿದರೆ ತಾವಿಬ್ಬರೂ ಲಾಂಗ್ ಅನ್ನು ಯಾರು ಹಿಡಿಯುತ್ತೀರಿ ಎಂದು ಕೇಳಿದರು.

ತಕ್ಷಣ ಪ್ರತಿಕ್ರಿಯೆ ನೀಡಿದ ದಚ್ಚು “ಲಾಂಗ್ ಹಿಡಿಯೋದ್ರಲ್ಲಿ ಶಿವಣ್ಣ ಸೀನಿಯರ್ , ಅವರೇ ಲಾಂಗ್ ಹಿಡಿದರೆ ನಾನು ಅವರ ಹಿಂದೆ ಇರುತ್ತೇನೆ” ಅಪ್ಪಾಜಿ ಬಂದಿರೋದು ವಿಶ್ ಮಾಡಿರೋದು ದೊಡ್ಡ ವಿಷಯ ಅವರು ಬಂದಿದ್ದು ತುಂಬಾ ಖುಷಿ ಎಂದು ಶಿವಣ್ಣರನ್ನು ಸ್ಮರಿಸಿದ ಡಚ್ಚು ಮಾದ್ಯಮಗಳ ಎದುರು ತಮ್ಮ ಅನಿಸಿಕೆ ಬಿಚ್ಚಿಟ್ಟರು. ಈ ಮೂಲಕ ಇಬ್ಬರು ಸ್ಟಾರ್ ನಟರು ಒಟ್ಟಾಗಿ ತೆರೆಯನ್ನು ಹಂಚಿಕೊಳ್ಳಲು ತಮ್ಮಗಳ ಅಭ್ಯಂತರ ಇಲ್ಲ ಎಂದು ಹೇಳಿಕೆಯನ್ನು ನೀಡಿದ್ದಾರೆ.

ಇನ್ನೇನಿದ್ದರೂ ಗಟ್ಟಿ ಎದೆಗಾರಿಕೆಯ ನಿರ್ದೇಶಕರು ಯಾರಾದರೂ ಇವರಿಬ್ಬರಿಗೂ ಹೊಂದಿಕೆ ಆಗುವಂತಹ ಸ್ಕ್ರಿಪ್ಟ್ ತಾಯಾರಿಸಿ ಇವರ ದಿನಾಂಕಕ್ಕೆ ಕಾಯಬೇಕಷ್ಟೇ. ಕಾರಣ ಇಬ್ಬರೂ ಸಹ ಸದ್ಯ ಸಾಕಷ್ಟು ಸಿನಿಮಾಗಳನ್ನು ಕೈಯಲ್ಲಿ ಇಟ್ಟುಕೊಂಡಿದ್ದು ಅವೆಲ್ಲದರ ಚಿತ್ರೀಕರಣ ಮುಗಿದ ಬಳಿಕವಷ್ಟೇ ಹೊಸ ಸಿನಿಮಾದತ್ತ ಅವರಿಬ್ಬರ ಚಿತ್ತ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…
ರಾಜ್ಯದಲ್ಲಿ ಇಂದಿನಿಂದ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…