News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

52

ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು.

2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ ಬಿಡುಗಡೆ ಮಾಡಿಸಿದ್ದರು. ಪರಿಣಾಮ ದೇವಾಲಯಕ್ಕೆ ವಿಶೇಷವಾದ ಮೇಲ್ಛಾವಣಿ, ನೆಲಹಾಸು ಮತ್ತು ವಿದ್ಯುತ್ ಸೌಕರ್ಯ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಲಾಯಿತು. ಅಂದಿನಿಂದ ಇಲ್ಲಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಇಲ್ಲಿ ಪ್ರತಿ ಸೋಮವಾರ ಅರ್ಚನೆ ಮಾಡಲಾಗುತ್ತದೆ.

ಗಿಡಗಂಟೆಗಳು ಬೆಳೆದು ಕಾಡಿನಂತಿದ್ದ ದೇವಾಲಯದ ಆವರಣದಲ್ಲಿ ವಿಶೇಷವಾದ ಮರಗಳಿದ್ದು ಅವುಗಳೊಂದಿಗೆ ರೋಹಿಣಿ ಸಿಂಧೂರಿ ಹೆಸರಿನಲ್ಲಿಯೂ ಸಹ ಒಂದು ಗಿಡವನ್ನು ನೆಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಿಂದಲೇ ಈ ಗಿಡವನ್ನು ತಂದು ದೇವಾಲಯದ ಆವರಣದಲ್ಲಿ ನೆಟ್ಟು ಪೋಷಣೆ ಮಾಡಲಾಗುತ್ತಿದೆ.

ಗಿಡಕ್ಕೆ ಪ್ರತಿದಿನ ದೇವಾಲಯದ ಪೂಜೆಯ ಅಭಿಷೇಕದ ನೀರನ್ನು ಹಾಕುತ್ತಾರೆ. ಪ್ರತಿ ಸೋಮವಾರ ಗಿಡಕ್ಕು ಸಹ ಅಭಿಷೇಕ ಮಾಡಲಾಗುತ್ತದೆ. ದೇವಾಲಯಕ್ಕೆ ತಮ್ಮ ತಾಯಿಯೊಂದಿಗೆ ಭೇಟಿ ನೀಡಿದ ಸಿಂಧೂರಿ ಅಂದು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಮಾಡಿದ ಒಂದು ಕೆಲಸ ಅವರನ್ನು ನೆನಪಿಸಿಕೊಳ್ಳುವಂತೆ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ