ಸುದ್ದಿ

ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

73

ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ

ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಎಲ್ಲಾ ಕಲ್ಮಶಗಳಿಂದ ರಕ್ತನಾಳಗಳು ಮತ್ತು ದುಗ್ಧರಸ ವ್ಯವಸ್ಥೆ(ಲಿಂಫ್ಯಾಟಿಕ್ ಸಿಸ್ಟಮ್)ಯನ್ನು ಶುದ್ಧಗೊಳಿಸುತ್ತದೆ.

ಕ್ಯಾನ್ಸರ್ ತಡೆಗಟ್ಟುತ್ತದೆ : ಅರಿಶಿನ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಬಹುದು. ಅರಿಶಿನದಲ್ಲಿರುವ ‘ಕರ್ಕ್ಯುಮಿನ್ ‘ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ ಹೆಚ್ಚಿಸುತ್ತದೆ :ಅರಿಶಿನದ ಹಾಲು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯ ಹುಣ್ಣು ಮತ್ತು ಅತಿಸಾರವನ್ನು ತಡೆಯುತ್ತದೆ. ಹೊಟ್ಟೆಯುಬ್ಬರ ,ಎದೆಯುರಿ, ಇತರ ಜಠರಗರುಳಿನ ಸೋಂಕುಗಳಿದ್ದರೆ ಪ್ರತಿದಿನ ಅರಿಶಿನವನ್ನು ಒಂದು ಕಪ್ ಹಾಲಿಗೆ ಸೇರಿಸಿ ಕುಡಿಯಿರಿ.

ಸಮಯಕ್ಕೆ ಸರಿಯಾಗಿ ಋತುಚಕ್ರ : ಅರಿಶಿನದ ಹಾಲು ಕುಡಿಯುತ್ತಿದ್ದರೆ ಮುಟ್ಟಿನ ನೋವು ಶಮನಗೊಂಡು, ಋತುಚಕ್ರ ಸಮಯಕ್ಕೆ ಸರಿಯಾಗಿ ಆಗುತ್ತದೆ. ಜೊತೆಗೆ, ಲ್ಯುಕೋರಿಯಾ, ಎಂಡೊಮೆಟ್ರಿಯೊಸಿಸ್, ಫೈಬ್ರಾಯ್ಡ್ಸ್ ಮತ್ತು ಹಾರ್ಮೋನುಗಳಲ್ಲಿ ಅಸಮತೋಲನ ಹೊಂದಿರುವ ಮಹಿಳೆಯರಿಗೂ ಅರಿಶಿನ ಹಾಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.

ಕೆಮ್ಮು ಮತ್ತು ಶೀತಕ್ಕೆ ಪರಿಹಾರ : ಅರಿಶಿನ ಹಾಲು ಆಂಟಿವೈರಲ್ ಮತ್ತು ಆಂಟಿಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿರುವುದರಿಂದ ಕೆಮ್ಮು ಮತ್ತು ಶೀತವನ್ನು ಹೋಗಲಾಡಿಸುತ್ತದೆ. ಗಂಟಲು ನೋಯುತ್ತಿದ್ದರೆ ಅರಿಶಿನ ಹಾಲನ್ನು ಕುಡಿಯಿರಿ.

ಉಸಿರಾಟದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ : ಅರಿಶಿನದ ಹಾಲು ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಅಸ್ತಮಾ, ಬ್ರಾಂಕೈಟಿಸ್‌ಗೆ ಪರಿಣಾಮಕಾರಿ ಪರಿಹಾರವಾಗಿದೆ. ಸೈನಸ್ ಮತ್ತು ಶ್ವಾಸಕೋಶದ ಸಮಸ್ಯೆಯಿದ್ದರೂ ಪರಿಹಾರ ನೀಡುತ್ತದೆ.

ತೂಕ ಕಡಿಮೆಯಾಗುತ್ತದೆ : ಹೌದು, ಅರಿಶಿನ ಹಾಲು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ! ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಸರಿಯಾಗಿ ನಿದ್ರೆ ಬರಲು : ನಿದ್ರೆ ಸರಿಯಾಗಿ ಬರದಿದ್ದರೆ ಅರಿಶಿನ ಹಾಲು ಕುಡಿಯಿರಿ. ಮಲಗುವ ಮೊದಲು ಅರಿಶಿನ ಹಾಲು ಕುಡಿದರೆ ವಿಶ್ರಾಂತಿ ಸಿಗುತ್ತದೆ. ಮನಸ್ಸು ಶಾಂತಗೊಂಡು ನಿದ್ರೆ ಬರುತ್ತದೆ.

ಕೀಲು ನೋವು ನಿವಾರಣೆ : ಅರಿಶಿನವನ್ನು ಆಯುರ್ವೇದದಲ್ಲಿ ‘ನೈಸರ್ಗಿಕ ಆಸ್ಪಿರಿನ್’ಎಂದು ಕರೆಯುತ್ತಾರೆ. ಇದು ಎಲ್ಲಾ ರೀತಿಯ ನೋವನ್ನು ನಿವಾರಿಸುತ್ತದೆ. ಅರಿಶಿನ ಹಾಲಿನಲ್ಲಿ ಕ್ಯಾಲ್ಸಿಯಂ ಇರುವುದರಿಂದ ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಆರೋಗ್ಯವಾಗಿರಿಸುತ್ತದೆ. ಈ ಹಾಲನ್ನು ಪ್ರತಿದಿನ ಸೇವಿಸುವುದರಿಂದ ಭವಿಷ್ಯದಲ್ಲಿ ಆಸ್ಟಿಯೊಪೊರೋಸಿಸ್ ಮತ್ತು ಸಂಧಿವಾತ ಬರುವುದನ್ನು ತಪ್ಪಿಸಬಹುದು.

ಚರ್ಮಕ್ಕೆ ಹೊಳಪು ನೀಡುತ್ತದೆ : ಅರಿಶಿನದ ಹಾಲು ಮೊಡವೆ, ಎಸ್ಜಿಮಾ, ಇತರ ಚರ್ಮದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಚರ್ಮದಲ್ಲಿ ಮೂಡಿರುವ ಸುಕ್ಕುಗಳನ್ನು ತೆಗೆದು, ನೈಸರ್ಗಿಕವಾಗಿ ಹೊಳೆಯಲು ಸಹಾಯ ಮಾಡುತ್ತದೆ.

ಅರಿಶಿನ ಹಾಲಿನ ಅಡ್ಡಪರಿಣಾಮಗಳು :

* ನಿಮಗೆ ಮೂತ್ರಪಿಂಡದ ಸಮಸ್ಯೆಗಳಿದ್ದರೆ ದಯವಿಟ್ಟು ಅರಿಶಿನದ ಹಾಲು ಕುಡಿಯಬೇಡಿ.

*ಹೆಚ್ಚು ಅರಿಶಿನ ಸೇವನೆಯಿಂದ ದೇಹ ಕಬ್ಬಿಣದಂಶವನ್ನು ಹೀರಿಕೊಳ್ಳಲು ಅಡ್ಡಿಯಾಗಬಹುದು. ಕಬ್ಬಿಣದಂಶವಿರುವ ಆಹಾರವನ್ನು ಸೇವಿಸದ ಜನರಲ್ಲಿ ಕಬ್ಬಿಣದ ಕೊರತೆಗೆ ಕಾರಣವಾಗಬಹುದು.

*ನೀವು ಈಗಾಗಲೇ ಮಧುಮೇಹ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ಹಾಲು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತುಂಬಾ ಕಡಿಮೆ ಮಾಡಬಹುದು. ನೀವು ಮಧುಮೇಹ ರೋಗಿಯಾಗಿದ್ದರೆ ಅರಿಶಿನ ಹಾಲನ್ನು ಸೇವಿಸುವ ಮೊದಲು ದಯವಿಟ್ಟು ನಿಮ್ಮ ವೈದ್ಯರನ್ನು ಪರೀಕ್ಷಿಸಿ.

ಅರಿಶಿನ ಹಾಲು ತಯಾರಿಸುವುದು ಹೇಗೆ?

 ಬೇಕಾಗುವ ಪದಾರ್ಥಗಳು : 1 ಟೀ ಚಮಚ ಅರಿಶಿನ, ಹಾಲು ½ ಕಪ್, 1ಟೀ ಚಮಚ ದಾಲ್ಚಿನ್ನಿ ಪುಡಿ, 1ಟೀ ಚಮಚ ಶುಂಠಿ ಪುಡಿಕಾಳುಮೆಣಸಿನಪುಡಿ ಚಿಟಿಕೆಯಷ್ಟು, 1ಟೀಸ್ಪೂನ್ ಜೇನುತುಪ್ಪ. ಮಾಡುವ ವಿಧಾನ :ಒಂದು ಪಾತ್ರೆಯಲ್ಲಿ ಮೇಲೆ ಹೇಳಿದ ಎಲ್ಲಾ ಪದಾರ್ಥಗಳನ್ನು ಬೆರೆಸಿ ಕುದಿಸಿರಿ ನಂತರ ಕಡಿಮೆ ಮಾಡಿ ಉರಿಯಲ್ಲಿ 10 ನಿಮಿಷಗಳ ಕಾಲ ಕುದಿಸಿ. ಸೋಸಿ, ಇದಕ್ಕೆ ಚಿಟಿಕೆಯಷ್ಟು ದಾಲ್ಚಿನ್ನಿ ಸೇರಿಸಿ ಕುಡಿಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

    ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…

  • ಸುದ್ದಿ

    ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ವಿಜಯವನ್ನು ಸಾಧಿಸಿದ ಎಂ,ಟೆಕ್ ಪದವೀಧರ,..ಇದನ್ನೊಮ್ಮೆ ಓದಿ..?

    ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…

  • ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • ಜ್ಯೋತಿಷ್ಯ

    ವಿಘ್ನ ವಿನಾಯಕನನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…