News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

75

ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ

ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಎಲ್ಲಾ ಕಲ್ಮಶಗಳಿಂದ ರಕ್ತನಾಳಗಳು ಮತ್ತು ದುಗ್ಧರಸ ವ್ಯವಸ್ಥೆ(ಲಿಂಫ್ಯಾಟಿಕ್ ಸಿಸ್ಟಮ್)ಯನ್ನು ಶುದ್ಧಗೊಳಿಸುತ್ತದೆ.

ಕ್ಯಾನ್ಸರ್ ತಡೆಗಟ್ಟುತ್ತದೆ : ಅರಿಶಿನ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಬಹುದು. ಅರಿಶಿನದಲ್ಲಿರುವ ‘ಕರ್ಕ್ಯುಮಿನ್ ‘ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ ಹೆಚ್ಚಿಸುತ್ತದೆ :ಅರಿಶಿನದ ಹಾಲು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯ ಹುಣ್ಣು ಮತ್ತು ಅತಿಸಾರವನ್ನು ತಡೆಯುತ್ತದೆ. ಹೊಟ್ಟೆಯುಬ್ಬರ ,ಎದೆಯುರಿ, ಇತರ ಜಠರಗರುಳಿನ ಸೋಂಕುಗಳಿದ್ದರೆ ಪ್ರತಿದಿನ ಅರಿಶಿನವನ್ನು ಒಂದು ಕಪ್ ಹಾಲಿಗೆ ಸೇರಿಸಿ ಕುಡಿಯಿರಿ.

ಸಮಯಕ್ಕೆ ಸರಿಯಾಗಿ ಋತುಚಕ್ರ : ಅರಿಶಿನದ ಹಾಲು ಕುಡಿಯುತ್ತಿದ್ದರೆ ಮುಟ್ಟಿನ ನೋವು ಶಮನಗೊಂಡು, ಋತುಚಕ್ರ ಸಮಯಕ್ಕೆ ಸರಿಯಾಗಿ ಆಗುತ್ತದೆ. ಜೊತೆಗೆ, ಲ್ಯುಕೋರಿಯಾ, ಎಂಡೊಮೆಟ್ರಿಯೊಸಿಸ್, ಫೈಬ್ರಾಯ್ಡ್ಸ್ ಮತ್ತು ಹಾರ್ಮೋನುಗಳಲ್ಲಿ ಅಸಮತೋಲನ ಹೊಂದಿರುವ ಮಹಿಳೆಯರಿಗೂ ಅರಿಶಿನ ಹಾಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.

ಕೆಮ್ಮು ಮತ್ತು ಶೀತಕ್ಕೆ ಪರಿಹಾರ : ಅರಿಶಿನ ಹಾಲು ಆಂಟಿವೈರಲ್ ಮತ್ತು ಆಂಟಿಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿರುವುದರಿಂದ ಕೆಮ್ಮು ಮತ್ತು ಶೀತವನ್ನು ಹೋಗಲಾಡಿಸುತ್ತದೆ. ಗಂಟಲು ನೋಯುತ್ತಿದ್ದರೆ ಅರಿಶಿನ ಹಾಲನ್ನು ಕುಡಿಯಿರಿ.

ಉಸಿರಾಟದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ : ಅರಿಶಿನದ ಹಾಲು ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಅಸ್ತಮಾ, ಬ್ರಾಂಕೈಟಿಸ್‌ಗೆ ಪರಿಣಾಮಕಾರಿ ಪರಿಹಾರವಾಗಿದೆ. ಸೈನಸ್ ಮತ್ತು ಶ್ವಾಸಕೋಶದ ಸಮಸ್ಯೆಯಿದ್ದರೂ ಪರಿಹಾರ ನೀಡುತ್ತದೆ.

ತೂಕ ಕಡಿಮೆಯಾಗುತ್ತದೆ : ಹೌದು, ಅರಿಶಿನ ಹಾಲು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ! ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಸರಿಯಾಗಿ ನಿದ್ರೆ ಬರಲು : ನಿದ್ರೆ ಸರಿಯಾಗಿ ಬರದಿದ್ದರೆ ಅರಿಶಿನ ಹಾಲು ಕುಡಿಯಿರಿ. ಮಲಗುವ ಮೊದಲು ಅರಿಶಿನ ಹಾಲು ಕುಡಿದರೆ ವಿಶ್ರಾಂತಿ ಸಿಗುತ್ತದೆ. ಮನಸ್ಸು ಶಾಂತಗೊಂಡು ನಿದ್ರೆ ಬರುತ್ತದೆ.

ಕೀಲು ನೋವು ನಿವಾರಣೆ : ಅರಿಶಿನವನ್ನು ಆಯುರ್ವೇದದಲ್ಲಿ ‘ನೈಸರ್ಗಿಕ ಆಸ್ಪಿರಿನ್’ಎಂದು ಕರೆಯುತ್ತಾರೆ. ಇದು ಎಲ್ಲಾ ರೀತಿಯ ನೋವನ್ನು ನಿವಾರಿಸುತ್ತದೆ. ಅರಿಶಿನ ಹಾಲಿನಲ್ಲಿ ಕ್ಯಾಲ್ಸಿಯಂ ಇರುವುದರಿಂದ ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಆರೋಗ್ಯವಾಗಿರಿಸುತ್ತದೆ. ಈ ಹಾಲನ್ನು ಪ್ರತಿದಿನ ಸೇವಿಸುವುದರಿಂದ ಭವಿಷ್ಯದಲ್ಲಿ ಆಸ್ಟಿಯೊಪೊರೋಸಿಸ್ ಮತ್ತು ಸಂಧಿವಾತ ಬರುವುದನ್ನು ತಪ್ಪಿಸಬಹುದು.

ಚರ್ಮಕ್ಕೆ ಹೊಳಪು ನೀಡುತ್ತದೆ : ಅರಿಶಿನದ ಹಾಲು ಮೊಡವೆ, ಎಸ್ಜಿಮಾ, ಇತರ ಚರ್ಮದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಚರ್ಮದಲ್ಲಿ ಮೂಡಿರುವ ಸುಕ್ಕುಗಳನ್ನು ತೆಗೆದು, ನೈಸರ್ಗಿಕವಾಗಿ ಹೊಳೆಯಲು ಸಹಾಯ ಮಾಡುತ್ತದೆ.

ಅರಿಶಿನ ಹಾಲಿನ ಅಡ್ಡಪರಿಣಾಮಗಳು :

* ನಿಮಗೆ ಮೂತ್ರಪಿಂಡದ ಸಮಸ್ಯೆಗಳಿದ್ದರೆ ದಯವಿಟ್ಟು ಅರಿಶಿನದ ಹಾಲು ಕುಡಿಯಬೇಡಿ.

*ಹೆಚ್ಚು ಅರಿಶಿನ ಸೇವನೆಯಿಂದ ದೇಹ ಕಬ್ಬಿಣದಂಶವನ್ನು ಹೀರಿಕೊಳ್ಳಲು ಅಡ್ಡಿಯಾಗಬಹುದು. ಕಬ್ಬಿಣದಂಶವಿರುವ ಆಹಾರವನ್ನು ಸೇವಿಸದ ಜನರಲ್ಲಿ ಕಬ್ಬಿಣದ ಕೊರತೆಗೆ ಕಾರಣವಾಗಬಹುದು.

*ನೀವು ಈಗಾಗಲೇ ಮಧುಮೇಹ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ಹಾಲು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತುಂಬಾ ಕಡಿಮೆ ಮಾಡಬಹುದು. ನೀವು ಮಧುಮೇಹ ರೋಗಿಯಾಗಿದ್ದರೆ ಅರಿಶಿನ ಹಾಲನ್ನು ಸೇವಿಸುವ ಮೊದಲು ದಯವಿಟ್ಟು ನಿಮ್ಮ ವೈದ್ಯರನ್ನು ಪರೀಕ್ಷಿಸಿ.

ಅರಿಶಿನ ಹಾಲು ತಯಾರಿಸುವುದು ಹೇಗೆ?

 ಬೇಕಾಗುವ ಪದಾರ್ಥಗಳು : 1 ಟೀ ಚಮಚ ಅರಿಶಿನ, ಹಾಲು ½ ಕಪ್, 1ಟೀ ಚಮಚ ದಾಲ್ಚಿನ್ನಿ ಪುಡಿ, 1ಟೀ ಚಮಚ ಶುಂಠಿ ಪುಡಿಕಾಳುಮೆಣಸಿನಪುಡಿ ಚಿಟಿಕೆಯಷ್ಟು, 1ಟೀಸ್ಪೂನ್ ಜೇನುತುಪ್ಪ. ಮಾಡುವ ವಿಧಾನ :ಒಂದು ಪಾತ್ರೆಯಲ್ಲಿ ಮೇಲೆ ಹೇಳಿದ ಎಲ್ಲಾ ಪದಾರ್ಥಗಳನ್ನು ಬೆರೆಸಿ ಕುದಿಸಿರಿ ನಂತರ ಕಡಿಮೆ ಮಾಡಿ ಉರಿಯಲ್ಲಿ 10 ನಿಮಿಷಗಳ ಕಾಲ ಕುದಿಸಿ. ಸೋಸಿ, ಇದಕ್ಕೆ ಚಿಟಿಕೆಯಷ್ಟು ದಾಲ್ಚಿನ್ನಿ ಸೇರಿಸಿ ಕುಡಿಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕದ ಸಾಧಕರು

    ಸಾಧನೆ ಮಾಡುವವನಿಗೆ ಬಡವ ಎನ್ನುವ ಬವಣೆ ಇರಲೇ ಬಾರದು ಅಂತ ಒಂದು ಸಾಧಕರಲ್ಲಿ ಒಬ್ಬರು ದ.ರಾ.ಬೇಂದ್ರೆ

    “ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.

  • ಸ್ಪೂರ್ತಿ

    ಹೆಣ್ಮಕ್ಕಳು ತಂದೆಯನ್ನೇ ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ.!

    ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…

  • ಸುದ್ದಿ

    ರಾತ್ರಿಸಮಯ ಅತಿ ಹೆಚ್ಚು ಸ್ಮಾರ್ಟ್‌ಫೋನ್ ಬಳಸುತ್ತೀರಾ?..ಈ ಶಾಕಿಂಗ್ ಸ್ಟೋರಿ ನೋಡಿ!!

    ಡ್ರಗ್ಸ್, ಆಲ್ಕೋಹಾಲ್‌ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್‌ಫೋನ್‌ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್‌ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್‌ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ ಪುರುಷರ ಜೊತೆ ಸಂಬಂಧ ಬೆಳೆಸಿ ಹೇಳೋದೇನು ಗೊತ್ತಾ…?ತಿಳಿಯಲು ಈ ಲೇಖನ ಓದಿ..

    ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.