News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

75

ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ

ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಎಲ್ಲಾ ಕಲ್ಮಶಗಳಿಂದ ರಕ್ತನಾಳಗಳು ಮತ್ತು ದುಗ್ಧರಸ ವ್ಯವಸ್ಥೆ(ಲಿಂಫ್ಯಾಟಿಕ್ ಸಿಸ್ಟಮ್)ಯನ್ನು ಶುದ್ಧಗೊಳಿಸುತ್ತದೆ.

ಕ್ಯಾನ್ಸರ್ ತಡೆಗಟ್ಟುತ್ತದೆ : ಅರಿಶಿನ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಬಹುದು. ಅರಿಶಿನದಲ್ಲಿರುವ ‘ಕರ್ಕ್ಯುಮಿನ್ ‘ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ ಹೆಚ್ಚಿಸುತ್ತದೆ :ಅರಿಶಿನದ ಹಾಲು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯ ಹುಣ್ಣು ಮತ್ತು ಅತಿಸಾರವನ್ನು ತಡೆಯುತ್ತದೆ. ಹೊಟ್ಟೆಯುಬ್ಬರ ,ಎದೆಯುರಿ, ಇತರ ಜಠರಗರುಳಿನ ಸೋಂಕುಗಳಿದ್ದರೆ ಪ್ರತಿದಿನ ಅರಿಶಿನವನ್ನು ಒಂದು ಕಪ್ ಹಾಲಿಗೆ ಸೇರಿಸಿ ಕುಡಿಯಿರಿ.

ಸಮಯಕ್ಕೆ ಸರಿಯಾಗಿ ಋತುಚಕ್ರ : ಅರಿಶಿನದ ಹಾಲು ಕುಡಿಯುತ್ತಿದ್ದರೆ ಮುಟ್ಟಿನ ನೋವು ಶಮನಗೊಂಡು, ಋತುಚಕ್ರ ಸಮಯಕ್ಕೆ ಸರಿಯಾಗಿ ಆಗುತ್ತದೆ. ಜೊತೆಗೆ, ಲ್ಯುಕೋರಿಯಾ, ಎಂಡೊಮೆಟ್ರಿಯೊಸಿಸ್, ಫೈಬ್ರಾಯ್ಡ್ಸ್ ಮತ್ತು ಹಾರ್ಮೋನುಗಳಲ್ಲಿ ಅಸಮತೋಲನ ಹೊಂದಿರುವ ಮಹಿಳೆಯರಿಗೂ ಅರಿಶಿನ ಹಾಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.

ಕೆಮ್ಮು ಮತ್ತು ಶೀತಕ್ಕೆ ಪರಿಹಾರ : ಅರಿಶಿನ ಹಾಲು ಆಂಟಿವೈರಲ್ ಮತ್ತು ಆಂಟಿಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿರುವುದರಿಂದ ಕೆಮ್ಮು ಮತ್ತು ಶೀತವನ್ನು ಹೋಗಲಾಡಿಸುತ್ತದೆ. ಗಂಟಲು ನೋಯುತ್ತಿದ್ದರೆ ಅರಿಶಿನ ಹಾಲನ್ನು ಕುಡಿಯಿರಿ.

ಉಸಿರಾಟದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ : ಅರಿಶಿನದ ಹಾಲು ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಅಸ್ತಮಾ, ಬ್ರಾಂಕೈಟಿಸ್‌ಗೆ ಪರಿಣಾಮಕಾರಿ ಪರಿಹಾರವಾಗಿದೆ. ಸೈನಸ್ ಮತ್ತು ಶ್ವಾಸಕೋಶದ ಸಮಸ್ಯೆಯಿದ್ದರೂ ಪರಿಹಾರ ನೀಡುತ್ತದೆ.

ತೂಕ ಕಡಿಮೆಯಾಗುತ್ತದೆ : ಹೌದು, ಅರಿಶಿನ ಹಾಲು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ! ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಸರಿಯಾಗಿ ನಿದ್ರೆ ಬರಲು : ನಿದ್ರೆ ಸರಿಯಾಗಿ ಬರದಿದ್ದರೆ ಅರಿಶಿನ ಹಾಲು ಕುಡಿಯಿರಿ. ಮಲಗುವ ಮೊದಲು ಅರಿಶಿನ ಹಾಲು ಕುಡಿದರೆ ವಿಶ್ರಾಂತಿ ಸಿಗುತ್ತದೆ. ಮನಸ್ಸು ಶಾಂತಗೊಂಡು ನಿದ್ರೆ ಬರುತ್ತದೆ.

ಕೀಲು ನೋವು ನಿವಾರಣೆ : ಅರಿಶಿನವನ್ನು ಆಯುರ್ವೇದದಲ್ಲಿ ‘ನೈಸರ್ಗಿಕ ಆಸ್ಪಿರಿನ್’ಎಂದು ಕರೆಯುತ್ತಾರೆ. ಇದು ಎಲ್ಲಾ ರೀತಿಯ ನೋವನ್ನು ನಿವಾರಿಸುತ್ತದೆ. ಅರಿಶಿನ ಹಾಲಿನಲ್ಲಿ ಕ್ಯಾಲ್ಸಿಯಂ ಇರುವುದರಿಂದ ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಆರೋಗ್ಯವಾಗಿರಿಸುತ್ತದೆ. ಈ ಹಾಲನ್ನು ಪ್ರತಿದಿನ ಸೇವಿಸುವುದರಿಂದ ಭವಿಷ್ಯದಲ್ಲಿ ಆಸ್ಟಿಯೊಪೊರೋಸಿಸ್ ಮತ್ತು ಸಂಧಿವಾತ ಬರುವುದನ್ನು ತಪ್ಪಿಸಬಹುದು.

ಚರ್ಮಕ್ಕೆ ಹೊಳಪು ನೀಡುತ್ತದೆ : ಅರಿಶಿನದ ಹಾಲು ಮೊಡವೆ, ಎಸ್ಜಿಮಾ, ಇತರ ಚರ್ಮದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಚರ್ಮದಲ್ಲಿ ಮೂಡಿರುವ ಸುಕ್ಕುಗಳನ್ನು ತೆಗೆದು, ನೈಸರ್ಗಿಕವಾಗಿ ಹೊಳೆಯಲು ಸಹಾಯ ಮಾಡುತ್ತದೆ.

ಅರಿಶಿನ ಹಾಲಿನ ಅಡ್ಡಪರಿಣಾಮಗಳು :

* ನಿಮಗೆ ಮೂತ್ರಪಿಂಡದ ಸಮಸ್ಯೆಗಳಿದ್ದರೆ ದಯವಿಟ್ಟು ಅರಿಶಿನದ ಹಾಲು ಕುಡಿಯಬೇಡಿ.

*ಹೆಚ್ಚು ಅರಿಶಿನ ಸೇವನೆಯಿಂದ ದೇಹ ಕಬ್ಬಿಣದಂಶವನ್ನು ಹೀರಿಕೊಳ್ಳಲು ಅಡ್ಡಿಯಾಗಬಹುದು. ಕಬ್ಬಿಣದಂಶವಿರುವ ಆಹಾರವನ್ನು ಸೇವಿಸದ ಜನರಲ್ಲಿ ಕಬ್ಬಿಣದ ಕೊರತೆಗೆ ಕಾರಣವಾಗಬಹುದು.

*ನೀವು ಈಗಾಗಲೇ ಮಧುಮೇಹ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ಹಾಲು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತುಂಬಾ ಕಡಿಮೆ ಮಾಡಬಹುದು. ನೀವು ಮಧುಮೇಹ ರೋಗಿಯಾಗಿದ್ದರೆ ಅರಿಶಿನ ಹಾಲನ್ನು ಸೇವಿಸುವ ಮೊದಲು ದಯವಿಟ್ಟು ನಿಮ್ಮ ವೈದ್ಯರನ್ನು ಪರೀಕ್ಷಿಸಿ.

ಅರಿಶಿನ ಹಾಲು ತಯಾರಿಸುವುದು ಹೇಗೆ?

 ಬೇಕಾಗುವ ಪದಾರ್ಥಗಳು : 1 ಟೀ ಚಮಚ ಅರಿಶಿನ, ಹಾಲು ½ ಕಪ್, 1ಟೀ ಚಮಚ ದಾಲ್ಚಿನ್ನಿ ಪುಡಿ, 1ಟೀ ಚಮಚ ಶುಂಠಿ ಪುಡಿಕಾಳುಮೆಣಸಿನಪುಡಿ ಚಿಟಿಕೆಯಷ್ಟು, 1ಟೀಸ್ಪೂನ್ ಜೇನುತುಪ್ಪ. ಮಾಡುವ ವಿಧಾನ :ಒಂದು ಪಾತ್ರೆಯಲ್ಲಿ ಮೇಲೆ ಹೇಳಿದ ಎಲ್ಲಾ ಪದಾರ್ಥಗಳನ್ನು ಬೆರೆಸಿ ಕುದಿಸಿರಿ ನಂತರ ಕಡಿಮೆ ಮಾಡಿ ಉರಿಯಲ್ಲಿ 10 ನಿಮಿಷಗಳ ಕಾಲ ಕುದಿಸಿ. ಸೋಸಿ, ಇದಕ್ಕೆ ಚಿಟಿಕೆಯಷ್ಟು ದಾಲ್ಚಿನ್ನಿ ಸೇರಿಸಿ ಕುಡಿಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಸೇಬು ಹಣ್ಣು ಪ್ರತಿದಿನ ತಿನ್ನುವುದರಿಂದ ಆಗುವ ಉಪಯೋಗಗಳೇನು ನಿಮಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ…

    ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • ಸುದ್ದಿ

    ಸಾಧನೆಗೆ ವೈಖಲ್ಯಗಳು ಅಡ್ಡಿಯಲ್ಲ. ಸಾಧಿಸುವ ಛಲವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು. ಇದಕ್ಕೆ ಸಾಕ್ಷಿ ನೀರಜ್ ಜಾರ್ಜ್‌ ಬೇಬಿ….

    ನೀರಜ್ ಜಾರ್ಜ್‌ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…

  • ಆರೋಗ್ಯ

    ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

    ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

  • ವಿಚಿತ್ರ ಆದರೂ ಸತ್ಯ

    ಇದು ಸಾಮಾನ್ಯದ ಸಾವಿನ ಕಥೆಯಲ್ಲ!ಗಂಡನಿಗೋಸ್ಕರ ಹೆಂಡತಿ!ಶಾಕ್ ಆಗ್ತೀರಾ…ಈ ಲೇಖನ ಓದಿ…

    ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.

  • ಸುದ್ದಿ

    D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

    ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…