ದಿನಕ್ಕೊಂದು ನೀತಿ ಕಥೆ

ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

425

 ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

ಇತ್ತ ಕಾಶಿಯಲ್ಲಿ ಬ್ರಹ್ಮದತ್ತನಿಗೆ ಸಕಲರೂ ತನ್ನ ಸದ್ಗುಣಗಳನ್ನೇ ಹಾಡಿ ಹೋಗಳತ್ತಿರುವುದನ್ನು ಕೇಳಿ ಕೇಳಿ ಒಂದು ಸಂದೇಹ ಬಂತು. ‘’ಪ್ರತಿಯೊಬ್ಬರೂ ನನ್ನನ್ನೂ ಹೊಗಳುತ್ತಾರೆ, ಕೀರ್ತಿಸುತ್ತಾರೆ. ಅಂದರೆ ನಾನು ಸರ್ವಗುಣ ಸಂಪನನ್ನೇ?ನನ್ನಲ್ಲಿ ಯಾವ ದೋಷವು ಇಲ್ಲವೇ?ಇದ್ದರೂ, ಕಂಡರೂ, ಯಾರೂ ಅದನ್ನು ನನ್ನ ದಾಕ್ಷೀಣ್ಯದಿಂದ ಹೇಳುತ್ತಿಲ್ಲವೇ?’’ ಎಂದುಕೊಂಡ.

ಯಾರಾದರೊಬ್ಬರಿಗೆ ತನ್ನಲ್ಲಿರುವ ದೋಷ ಕಾಣಿಸಬಹುದು, ಯಾರಾದರೊಬ್ಬರಿಗೆ ತನ್ನ ಕೊರತೆಯನ್ನು ಧೈರ್ಯವಾಗಿ ಆಡಿ ತೋರಿಸಬಹುದು, ಎಂದು ಅವನು ಹುಡುಕತೊಡಗಿದ. ಮೊದಲು ಅವನು ತನ್ನ ಪರಿವಾರದಲ್ಲಿ ಹುಡುಕಿದ.

ಆದರೆ ಅವರಲ್ಲಿ ಯಾರೂ ರಾಜನಲ್ಲಿ ದೋಷವಿದೆಯೆಂದು ಹೇಳಲಿಲ್ಲ ಅರಮನೆಯ ಪರಿವಾರದವರು ದೋಷ ಕಂಡವರು ಯಾರೂ ಇರಲಿಲ್ಲ. ನಗರದ ಹೊರಗೆ ವೇಷ ಮರೆಸಿಕೊಂಡು ಸಂಚಾರ ಮಾಡಿದ ಅಲ್ಲೂ ಕೂಡ ಎಲ್ಲ ಅವನ ಗುಣಗಾನ ಮಾಡಿದರೇ  ಹೊರತು, ಒಬ್ಬನಾದರೂ ರಾಜನ ನಡತೆಯಲ್ಲಿ ಈ ತಪ್ಪಿದೆ ಎಂದು ಹೇಳಲಿಲ್ಲ.

ಕಡೆಗೆ ಅವನು ಹಿಮಾಲಯಕ್ಕೆ ಹೋದ. ಆ ಗುಡ್ಡ ಗಾಡಿನ ತುಂಬಾ  ಸಂಚರಿಸಿದ. ಕಡೆಗೆ ಬೋಧಿಸತ್ವನ ಪರ್ಣಕುಟೀರ ಕಣ್ಣಿಗೆ ಬಿತ್ತು. ರಾಜ ಅಲ್ಲಿಗೆ ಹೋಗಿ ಅವನಿಗೆ ನಮಸ್ಕರಿಸಿ ಕುಳಿತುಕೊಂಡ. ಬೋಧಿಸತ್ವ ಅವನ ಯೋಗಕ್ಷೇಮವನ್ನು ವಿಚಾರಿಸಿಕೊಂಡ.

ಬೋಧಿಸತ್ವ ಆಗ ಕಾಡಿನಿಂದ ತಂದಿದ್ದ ಅರಳಿ ಹಣ್ಣುಗಳನ್ನು ತಿನ್ನುತ್ತಿದ್ದ. ಅವನ್ನೇ ರಾಜನಿಗೆ ನೀಡಿ, ‘’ಅಯ್ಯಾ, ಹಸಿದಿರುವಂತಿದೆ, ಈ ಅರಳಿ ಹಣ್ಣುಗಳನ್ನು ತಿಂದು ನೀರು ಕುಡಿ’’ ಎಂದ.

ರಾಜ ಹಾಗೇ ಮಾಡಿದ. ಆ ಅರಳಿ ಹಣ್ಣುಗಳು ಅಮೃತದಂತಿದ್ದವು. ‘’ಪೂಜ್ಯರೆ, ಈ ಹಣ್ಣುಗಳು ಇಷ್ಟೊಂದು ಮಧುರವಾಗಿರಲು ಕಾರಣವೇನು?’’ ಎಂದು ಕೇಳಿದ.

ಬೋಧಿಸತ್ವ ಹೇಳಿದ, ‘’ಈ ಪ್ರಾಂತ್ಯವನ್ನು ಆಳುತ್ತಿರುವ ರಾಜ ಧರ್ಮವನ್ನು ಮೀರದೆ, ನ್ಯಾಯದಿಂದ ನಡೆದುಕೊಳ್ಳುತ್ತಿದ್ದಾನೆ. ಅದಕ್ಕೇ ಈ ಹಣ್ಣುಗಳು ಇಷ್ಟು ಸಿಹಿಯಾಗಿವೆ.’’

‘’ಪೂಜ್ಯರೆ’’ ಬೋಧಿಸತ್ವ ಹೇಳಿದ, ‘’ಸಿಹಿ ಕೊಡುವ ಪದಾರ್ಥಗಳು ತಮ್ಮ ಸಿಹಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಇಡೀ ದೇಶವೇ ಸತ್ವವನ್ನು ಕಳೆದುಕೊಂಡು ನಾಶವಾಗುತ್ತದೆ.’’

ರಾಜ ತನ್ನ ಪರಿಚಯವನ್ನು ಹೇಳಿಕೊಳ್ಳದೆ ನಮಸ್ಕರಿಸಿ ಅಲ್ಲಿಂದ ಹೊರಟು ಬಂದ.

ಬೋಧಿಸತ್ವನ ಹೇಳಿದ ಮಾತುಗಳನ್ನು ಪರೀಕ್ಷಿಸುವ ಮನಸ್ಸಾಯಿತು. ರಾಜ ಅಂದಿನಿಂದ ಅಧರ್ಮದಿಂದ ರಾಜ್ಯಭಾರ ಮಾಡುತ್ತ ಅನ್ಯಾಯದಿಂದ ನಡೆದುಕೊಳ್ಳತೊಡಗಿದ.

ಕೆಲವು ಕಾಲದ ನಂತರ ಮತ್ತೆ ಅವನು ಬೋಧಿಸತ್ವನ ಬಳಿಗೆ ಬಂದು ನಮಸ್ಕರಿಸಿ ಕುಳಿತುಕೊಂಡ. ಆ ದಿನವೂ ಬೋಧಿಸತ್ವ ಅವನಿಗೆ ಅರಳಿ ಹಣ್ಣುಗಳನ್ನು ಕೊಟ್ಟ ಅದನ್ನು ಬಾಯಿಗಿಟ್ಟುಕೊಂಡ ಕೂಡಲೇ ಕಹಿಯಾಗಿ ರಾಜ ತಿನ್ನಲಾರದೆ ಉಗಿದುಬಿಟ್ಟ. ‘’ಪೂಜ್ಯರೇ, ಈ ಹಣ್ಣುಗಳನ್ನು ತಿನ್ನಲಾರದಷ್ಟು ಕಹಿಯಗಿವೆ’’ ಎಂದ.

ಬೋಧಿಸತ್ವ ಹೇಳಿದ, ‘’ಹಾಗಾದರೆ ರಾಜ ನಿಜವಾಗಲೂ ಅಧರ್ಮಿಯಗಿರಬೇಕು. ಅದರಿಂದಲೇ ಹಣ್ಣುಗಳನ್ನು ತಮ್ಮ ಸಿಹಿ ಕಳೆದುಕೊಂಡಿದೆ. ರಾಜ ಅಧಾರ್ಮಿಕನಾದರೆ ಇಡೀ ಪ್ರಜಸಮೂಹಂ ಅಧರ್ಮಚರಣೆ ಮಾಡುತ್ತ ದೇಶವೇ ದುಃಖಕ್ಕೆ ಒಳಗಾಗುತ್ತದೆ,’’

ರಾಜ ತನ್ನ ಪರಿಚಯವನ್ನು ಬಹಿರಂಗಪಡಿಸಿದ. ‘’ಪೂಜ್ಯರೇ, ನಾನೇ ಅರಳಿ ಹಣ್ಣನ್ನು ಸಿಹಿ ಮಾಡಿದೆ. ಅನಂತರ ನಾನೇ ಅದನ್ನು ಕಹಿ ಮಾಡಿದೆ. ಈಗ ಮತ್ತೆ ಸಿಹಿ ಮಾಡುತ್ತೇನೆ’’ ಎಂದು ನಮಸ್ಕರಿಸಿದ.

ಹಿಂದಿರುಗಿ ಕಾಶಿಗೆ ಹೋಗಿ ಧರ್ಮದಿಂದ ರಾಜ್ಯಭಾರ ಮಾಡಿದ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಪ್ರಿಯಾಂಕ, ಕುರಿ ಪ್ರತಾಪ್ ಗೆ ಈಗೆ ಮಾಡಿದಕ್ಕೆ. ಪ್ರತಾಪ್ ಪತ್ನಿ ಪ್ರಿಯಾಂಕಾಗೆ ಹೇಳಿದ್ದೇನು ಗೊತ್ತಾ.

    ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….

  • ಸುದ್ದಿ

    ಬಿಎಸ್ಎನ್ಎಲ್ ಬಳಸುತ್ತಿರುವ ಗ್ರಾಹಕರಿಗೊಂದು ಸಂತಸದ ಸುದ್ದಿ ..!ಸುಳ್ಳು ವದಂತಿಗಳಿಗೆ ಬ್ರೇಕ್….

    ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…

  • ಆರೋಗ್ಯ

    ಕಾಡುವ ಡ್ಯಾಂಡ್ರಫ್‌ಗೆ ಇಲ್ಲಿದ ಮನೆ ಮದ್ದು, ಒಮ್ಮೆ ಟ್ರೈ ಮಾಡಿ ನೋಡಿ.

    ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…

  • ಸುದ್ದಿ

    ನಿದ್ರೆ ಮಾಡೋಕೂ 13 ಲಕ್ಷ ರೂ ಸಂಬಳ ನೀಡುತ್ತಂತೆ ನಾಸಾ.., ಆದ್ರೆ ಕಂಡೀಷನ್ಸ್ ಅಪ್ಲೈ!

    ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.