ಸಿನಿಮಾ, ಸುದ್ದಿ

ಮೆಗಾ ಸ್ಟಾರ್ ಚಿರಂಜೀವಿ ಮನೆಯಲ್ಲಿ ಸಂಭ್ರಮ, 80ರ ದಶಕದ ತಾರೆಯರ ಸಮಾಗಮ!

30

ಚಿತ್ರ  ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ  ಮತ್ತು  ಚಿತ್ರರಂಗ ವಲಯದಿಂದ ಸಹ  ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ      ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ ಭಾರತದ ಕಲಾವಿದರನ್ನು ಮನೆಗೆ ಆಹ್ವಾನಿಸಿ, ಪಾರ್ಟಿ ಮಾಡುವ ಕಾರ್ಯಕ್ರವನ್ನು ನಡೆಸಿಕೊಂಡು ಬಂದಿದ್ದಾರೆ ಚಿರು. ಅಂತೆಯೇ ಅವರ ಮನೆಯಲ್ಲಿ ಅನೇಕ ತಾರೆಯರು ಆಗಮಿಸಿ, ಹಳೆಯ ಕ್ಷಣಗಳನ್ನು ನೆನೆದಿದ್ದಾರೆ. ಯಂಗ್ ಜನರೇಷನ್‌ಗಿಂತ ನಾವೇನು ಕಮ್ಮಿ ಇಲ್ಲ ಎನ್ನುವಂತೆ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ. ಆ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಸಂಸದೆ ಸುಮಲತಾ ಅಂಬರೀಷ್‌,ರಮೇಶ್‌ ಅರವಿಂದ್ ಸೇರಿದಂತೆ ಅನೇಕರು ಅಲ್ಲಿ ಹಾಜರಿದ್ದರು.

ತಮ್ಮ ಸಮಕಾಲೀನ ಕಲಾವಿದರನ್ನೆಲ್ಲ ಮನೆಗೆ ಕರೆಸಿಕೊಂಡು ಚಿರಂಜೀವಿ ಅವರ ಕಾರ್ಯಕ್ಕೆ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಲೈಕ್ಸ್ ಸಿಕ್ಕಿವೆ.3 ದಶಕಗಳಿಂದಲೂ ಇತರೆ ಕಲಾವಿದರೊಂದಿಗೆ ಉತ್ತಮ ಒಡನಾಟ ಹೊಂದಿರುವ ಅವರ ನಡೆಗೆ ಎಲ್ಲೆಡೆ ಮೆಚ್ಚುಗೆ ಸಿಕ್ಕಿದೆ. ಅಪ್ಪನಿಗೆ ಸಹಾಯಕವಾಗಿ ನಟ ರಾಮ್ ಚರಣ್‌ ಕೂಡ ಇದ್ದರು. ನಟಿ ಖುಷ್ಬೂ ತಮಿಳು, ಕನ್ನಡ ಸೇರಿ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ. ತೆಲುಗಿನಲ್ಲೂ ಕಾಣಿಸಿಕೊಂಡಿದ್ದಾರೆ. ಆದರೆ, ಚಿರು ಜತೆ ನಟಿಸಿದ್ದು2006ರಲ್ಲಿ ತೆರೆಕಂಡ ‘ಸ್ಟಾಲಿನ್‌’ ಸಿನಿಮಾದಲ್ಲಿ ಮಾತ್ರ. ಅದು ಪೋಷಕ ಪಾತ್ರದಲ್ಲಿ! ಜೊತೆಗೆ ಸಿನಿಮಾಗಳನ್ನು ಮಾಡದಿದ್ದರೂ,

ನಟಿ, ಸಂಸದೆ ಸುಮಲತಾ ಅಂಬರೀಷ್‌,ಕನ್ನಡದ ಜೊತೆಗೆ ತೆಲುಗಿನಲ್ಲೂ ಸಖತ್ ಫೇಮಸ್‌ ಆಗಿದ್ದವರು. 80ರ ದಶಕದಲ್ಲಿ ಚಿರಂಜೀವಿ ಜತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಜಪಗತಿ ಬಾಬು, ವಿಕ್ಟರಿ ವೆಂಕಟೇಶ್‌, ರಾಧಿಕಾ ಶರತ್‌ಕುಮಾರ್ ಜತೆ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಚಿರು-ಖುಷ್ಬೂ ನಡುವಿನ ಒಡನಾಟ ಮಾತ್ರ ಹಾಗೆಯೇ ಇದೆ. ಅದಕ್ಕೆ ಸಾಕ್ಷಿ ಈ ಕ್ಯೂಟ್ ಸೆಲ್ಫಿ.ಕೇರಳದಲ್ಲಿ ಮೋಹನ್‌ಲಾಲ್‌ ಸೂಪರ್ ಸ್ಟಾರ್‌. ಟಾಲಿವುಡ್‌ನಲ್ಲಿ ಚಿರಂಜೀವಿ ಮೆಗಾ ಸ್ಟಾರ್‌. ಈ ಇಬ್ಬರು ಕಲಾವಿದರು ಒಂದೇ ಫ್ರೇಮ್‌ನಲ್ಲಿ ಸೆರೆ ಸಿಕ್ಕಿದ್ದಾರೆ. ಅದಕ್ಕೆ ಕಾರಣವಾಗಿದ್ದು ಚಿರು ಮನೆಯ ಪಾರ್ಟಿ.

ಮಲಯಾಳಂ ‘ಸೂಪರ್ ಸ್ಟಾರ್‌’ ಮೋಹನ್‌ಲಾಲ್‌ ಜತೆ ನಟಿ ರಾಧಿಕಾ ಶರತ್‌ಕುಮಾರ್ ಗೆಳೆತನ ಇಂದು ನಿನ್ನೆಯದಲ್ಲ. 1985ರಲ್ಲೇ ಈ ಇಬ್ಬರು ಕಲಾವಿದರು ಒಟ್ಟಿಗೆ ‘ಕೂಡುಮ್‌ ಥೇಡಿ’ ಚಿತ್ರದಲ್ಲಿ ನಟಿಸಿದ್ದರು. ವಿಶೇಷವೆಂದರೆ, ಕಳೆದ ಸೆಪ್ಟಂಬರ್‌ನಲ್ಲಿ ತೆರೆಕಂಡ ‘ಇಟ್ಟಿಮಾನಿ; ಮೇಡ್‌ ಇನ್ ಚೀನಾ’ ಚಿತ್ರದಲ್ಲೂ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಚಿರು ಮನೆಯ ಪಾರ್ಟಿಯಲ್ಲಿ ಕ್ಯಾಮರಾಕ್ಕೆ ಜೊತೆಯಾಗಿ ಕಾಣಿಸಿಕೊಂಡ ಕ್ಷಣ.ಚಿರು ಮನೆಯಲ್ಲಿ 80ರ ದಶಕ ರಿ-ಯೂನಿಯನ್‌ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗಮನಸೆಳೆದ ನಟಿ ಖುಷ್ಬೂ. ಈ ವೇಳೆ ನಟಿ ರಾಧಿಕಾ ಶರತ್‌ಕುಮಾರ್ ಮತ್ತು ನಾಧಿಯಾ ಅವರ ಜತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಸಿದರು.

ಚಿರು ಕುಟುಂಬದೊಂದಿಗೆ ರಾಧಿಕಾ ಶರತ್‌ ಕುಮಾರ್ ಫ್ಯಾಮಿಲಿ ಮೊದಲಿನಿಂದಲೂ ಉತ್ತಮ ಒಡನಾಡ ಹೊಂದಿದೆ. ರೀ-ಯೂನಿಯನ್‌ ಕಾರ್ಯಕ್ರಮದಲ್ಲಿ ಭೇಟಿಯಾದಾಗ ಚಿರು ಪುತ್ರ ರಾಮ್ ಚರಣ್‌ ಜತೆ ಕಾಣಿಸಿಕೊಂಡರು.ಬರೀ ದಕ್ಷಿಣದ ಕಲಾವಿದರು ಮಾತ್ರವಲ್ಲ, ಬಾಲಿವುಡ್‌ನ ಜಾಕಿಶ್ರಾಫ್‌ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ನಟಿ ರಾಧಿಕಾ ಶರತ್‌ಕುಮಾರ್, ಚಿರಂಜೀವಿ ಮತ್ತು ರಾಮ್‌ ಚರಣ್ ಅವರೊಂದಿಗೆ ಜಾಕಿ ಅವರ ಸಖತ್ ಪೋಸ್‌.ತಮ್ಮ ಕಾಲದ ನಾಯಕಿಯರ ಜತೆ ಗ್ರೂಪ್ ಫೋಟೋಗೆ ಸಖತ್ ಪೋಸ್‌ ನೀಡಿದ್ದಾರೆ ಚಿರು. ಖುಷ್ಬೂ, ಸುಹಾಸಿನಿ ಮಣಿರತ್ನಂ, ರಾಧಿಕಾ ಶರತ್‌ಕುಮಾರ್ ಮುಂತಾದವರು ಅವರೊಂದಿಗೆ ಸಾಥ್ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ಆರೋಗ್ಯ

    ಬಾಳೆಲೆ ಊಟ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ! ಹಲವು ಜನರಿಗೆ ತಿಳಿದಿಲ್ಲ.

    ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…

  • ಜ್ಯೋತಿಷ್ಯ

    ನಿಮ್ಮ ಮನೆ ಒಡೆಯದೇ ಈ ಸರಳ ಕ್ರಮಗಳಿಂದ ವಾಸ್ತುದೋಷ ನಿವಾರಣೆ ಮಾಡಿಕೊಳ್ಳಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

    ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಸುದ್ದಿ

    ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

    ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…

  • ಸುದ್ದಿ

    ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

    ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…