ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ.

ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ ರಸಗೊಬ್ಬರ, ಕ್ರಿಮಿನಾಶಕ, ಕೂಲಿಯಾಳುಗಳು ಸೇರಿ ಎಕರೆಗೆ 40 ರಿಂದ 50 ಸಾವಿರ ಖರ್ಚುಮಾಡಿ ಬೆಳೆ ಬೆಳೆಯುತ್ತಿದ್ದ ರೈತರು ತುಂಬಾ ನಷ್ಟ ಅನುಭವಿಸುತ್ತಿದ್ದರು. ಈಗ ರೈತರ ಹೊಸ ಪ್ರಯೋಗ ಕೃಷಿಯಲ್ಲಿ ಅಡುಗೆಎಣ್ಣೆ ಬಳಸುವ ಮೂಲಕ ಎಕರೆಗೆ ಕೇವಲ 5 ರಿಂದ 8 ಸಾವಿರ ರೂ. ಖರ್ಚು ಬರುತ್ತಿದೆ. ಇದರಿಂದ ಹೆಚ್ಚು ಲಾಭವನ್ನು ಸಹ ಗಳಿಸುತ್ತಿದ್ದಾರೆ. ಅಡುಗೆ ಎಣ್ಣೆಯನ್ನು ಕೃಷಿಯಲ್ಲಿ ಕ್ರಿಮಿಕೀಟಗಳ ನಾಶಕ್ಕೆ ಉತ್ತಮ ಪೋಷಕಾಂಶ ವನ್ನು ನೀಡುವ ಔಷಧಿಯಾಗಿ ಬಳಕೆ ಮಾಡಬಹುದು ಎಂಬುವ ಉಪಯೋಗವನ್ನು ಇಲ್ಲಿನ ರೈತರು ಕಂಡುಕೊಂಡಿದ್ದಾರೆ.

ದೇವದುರ್ಗಾ ತಾಲೂಕಿನ ಗಬ್ಬೂರು ಸೇರಿದಂತೆ ಸುತ್ತಲಿನ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿನ ರೈತರು ಈ ಪ್ರಯೋಗದಿಂದ ಯಶಸ್ವಿಯ ನ್ನು ಕಂಡುಕೊಂಡಿದ್ದಾರೆ. ಅಡುಗೆ ಎಣ್ಣೆಗಳಾದ ಪಾಮ್, ಶೇಂಗಾ, ಕೊಬ್ಬರಿ ಹಾಗೂ ಹತ್ತಿ ಕಾಳು ಎಣ್ಣೆ, ಸೋಯಾಬಿನ್ ಎಣ್ಣೆ ಹೀಗೆ ಹಲವಾರು ಎಣ್ಣೆಗಳಿಗೆ ಕೋಳಿ ಮೊಟ್ಟೆ ಮಿಶ್ರಣ ಮಾಡಿ ವಾರಕ್ಕೊಮ್ಮೆ ಸಿಂಪಡಣೆ ಮಾಡುವುದರಿಂದ ಬೆಳೆಗಳಿಗೆ ಮುಖ್ಯವಾಗಿ ಮುರುಟು ರೋಗ, ಜೀಗಿ ರೋಗ ಸೇರಿದಂತೆ ವಿವಿಧ ರೋಗಗಳನ್ನು ನಿಯಂತ್ರಣ ಮಾಡಬಹುದು. ಅಲ್ಲದೆ ಬೆಳೆಗಳಿಗೆ ಅಧಿಕ ಪೋಷಕಾಂಶ ನೀಡಬಹುದು ಎನ್ನುವುದನ್ನು ರೈತರು ಕಂಡುಕೊಂಡಿದ್ದಾರೆ. ರಾಸಾಯನಿಕ ಗೊಬ್ಬರ ಹಾಗೂ ಕೀಟ ನಾಶಕ ಬಳಸಿ ಕೃಷಿ ಮಾಡುವ ಪದ್ಧತಿಯ ಖರ್ಚಿಗಿಂತ ಎಣ್ಣೆ ಬಳಸಿ ಕೃಷಿ ಮಾಡುವುದರಿಂದ ಕೇವಲ ಶೇ.10ರಷ್ಟು ಹಣವನ್ನು ಖರ್ಚು ಮಾಡುತ್ತಿದ್ದಾರೆ.

ಮಿಶ್ರಣ ಹೇಗೆ?
ಮೆಣಸಿನಕಾಯಿ, ಹತ್ತಿ ನಾಟಿ ಅಥವಾ ಬಿತ್ತನೆ ಮಾಡಿದ ನಂತರ ಬೆಳೆ ಬೆಳೆಯುತ್ತಿರುವಾಗ ಪ್ರತಿ ವಾರಕ್ಕೊಮ್ಮೆ ಈ ಔಷಧಿಯನ್ನು ಸಿಂಪಡಣೆ ಮಾಡಬೇಕು, ಇಲ್ಲಿ ಮುಖ್ಯವಾಗಿ ಅಡುಗೆ ಎಣ್ಣೆಯೊಂದಿಗೆ ನೀರು ಮಿಶ್ರಣ ಮಾಡಲು ಒಂದು ಮೀಡಿಯೇಟರ್ ಬೇಕು. ಅದಕ್ಕೆ ಅವರು ಕೋಳಿ ಮೊಟ್ಟೆಯನ್ನು ಮಿಶ್ರಣ ಮಾಡುತ್ತಾರೆ. ಈ ಮೊದಲು ಎಂಎಸ್ ಫೈರ್ ಎಂಬ ಔಷಧಿಯನ್ನು ಮಿಶ್ರಣಕ್ಕೆ ಬಳಸುತ್ತಿದ್ದರು. ಇದನ್ನು ಸಹ ಪ್ರತಿ 100 ಎಂ ಎಲ್ ಗೆ 40 ರೂಪಾಯಿ ಕೊಟ್ಟು ಖರೀದಿಸಬೇಕಾಗಿತ್ತು.
ಪ್ರತಿ ಎಕರೆಗೆ ಒಂದು ಕೆಜಿ ಅಡುಗೆ ಎಣ್ಣೆ ಹಾಗೂ ಅದಕ್ಕೆ ಆರು ಕೋಳಿ ಮೊಟ್ಟೆಗಳನ್ನು ಚೆನ್ನಾಗಿ ಮಿಶ್ರಣ ಮಾಡಿ 19 ಲೀಟರ್ ನಂತೆ ನೀರನ್ನ ಬೆರೆಸಿ ಆರು ಟ್ಯಾಂಕ್ ಗಳ ಔಷಧಿಯನ್ನು ಸಿಂಪಡಣೆ ಮಾಡಬೇಕು. ನಿಗಿದಿತ ಸಮಯಕ್ಕೆ ಸರಿಯಾಗಿ ಸಿಂಪಡಣೆ ಮಾಡಿದರೆ ಉತ್ತಮ ಇಳುವರಿ ಬರುತ್ತದೆ. ಪ್ರತಿ ಬಾರಿಯೂ ಔಷಧಿಗಾಗಿ ಅಡುಗೆ ಎಣ್ಣೆ ಪ್ರತಿ ಕೆಜಿಗೆ 60 ರಿಂದ 120 ರೂಪಾಯಿ, ಆರು ಮೊಟ್ಟೆಗಳಿಗೆ 40 ರೂಪಾಯಿ, ಕೂಲಿ 300 ರೂಪಾಯಿ ಹೀಗೆ ಕೇವಲ 450 ರೂಪಾಯಿಯಲ್ಲಿ ಔಷಧಿಯನ್ನು ಸಿಂಪಡಣೆ ಮಾಡಬಹುದು, ಆದೇ ರಸಾಯನಿಕ ಬಳಸಿದರೆ ಪ್ರತಿ ಲೀಟರ್ ಗೆ 1000-1500 ರೂಪಾಯಿ ಹಾಗು ರಸಗೊಬ್ಬರಕ್ಕೆ ಸಾಕಷ್ಟು ಖರ್ಚು ಮಾಡಬೇಕಾಗುತ್ತದೆ.

ಈ ಹಿಂದೆ ಇಸ್ರೇಲಿನ ಕೃಷಿ ವಿಜ್ಞಾನಿಯೊಬ್ಬರು ಪ್ರಯೋಗ ಮಾಡಿ ಯಶಸ್ವಿಯಾಗಿದ್ದರಂತೆ. ತೆಲಂಗಾಣದಲ್ಲೂ ರೈತರು ಈ ಪ್ರಯೋಗದಿಂದ ಯಶಸ್ಸು ಕಂಡಿದ್ದು ಕಳೆದ ಕೆಲ ವರ್ಷಗಳಿಂದ ಇಲ್ಲಿನ ರೈತರು ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ರೈತರು ಸಹ ಈ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಸಾಲದ ಹೊರೆಯನ್ನು ಇಳಿಸಿಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.