ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ ಮಾಡುತ್ತಿರಬಹುದು. ದುಡ್ಡು ಇದ್ದರೆ ಏನಂತೆ ನಾವು ಶುದ್ಧ ಗಾಳಿ ಹಾಗೂ ನೀರಿಗಾಗಿ ಹಂಬಲಿಸುತ್ತೇವೆ. ಈ ನಡುವೆ ಮನೆಯೊಳಗೆ ಬಿಸಿಲು ಕೂಡ ಬರುವುದಿಲ್ಲ. ಹೀಗಿರುವಾಗ ಎಷ್ಟು ಸಂಪಾದನೆ ಮಾಡಿದರೂ ಪ್ರಯೋಜನ ಏನು? ಈ ಕಾರಣದಿಂದಾಗಿ ನಾವು ನಮ್ಮ ಮಗನಿಗೆ ಬೇರೆ ಜೀವನ ನೀಡಲು ನಿರ್ಧರಿಸಿ ಇಂದೋರ್ ನಲ್ಲಿ ಜಮೀನು ಖರೀದಿಸಿದ್ದೇವೆ ಎಂದು ದಂಪತಿ ತಮ್ಮ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.

ಈ ಬದಲಾವಣೆಯನ್ನು ಮಗ ಹೇಗೆ ಎದುರಿಸುತ್ತಾನೆ ಎಂದು ರಾಜೇಂದ್ರ ಹಾಗೂ ಚಂಚಲ್ ಚಿಂತಿಸುತ್ತಿದ್ದರು. ಆದರೆ ಗುರುಭಕ್ಷ್ ಈ ಹೊಸ ಜೀವನದಿಂದ ಖುಷಿಯಾಗಿದ್ದ. ಈಗ ಸಾವಯವ ಕೃಷಿಯಿಂದ ಹಿಡಿದು ಎಲ್ಲದರಲ್ಲೂ ಆತ ತನ್ನ ತಾಯಿಗೆ ಸಹಾಯ ಮಾಡುತ್ತಿದ್ದಾನೆ. ಊರಿನಲ್ಲಿ ಆತನಿಗೆ ಸಾಕಷ್ಟು ಸ್ನೇಹಿತರು ಪರಿಚಯವಾಗಿದ್ದು, ಗುರುಭಕ್ಷ್ ಅವರಿಗೆ ಸೋಲಾರ್ ಕುಕ್ಕಿಂಗ್ ಹಾಗೂ ಕೃಷಿ ವಿಧಾನಗಳನ್ನು ಕಲಿಸುತ್ತಾನೆ. ಜೊತೆ ಆಟವಾಡುವಾಗ ಅವರಿಂದಲೂ ಗುರುಭಕ್ಷ್ ಕಲಿಯುತ್ತಿದ್ದಾನೆ. ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳ ಶಿಕ್ಷಣ ಮತ್ತು ಜೀವನಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡುತ್ತಾರೆ. ಆದರೆ ಈ ಹಣವನ್ನು ಸಂಪಾದಿಸುವಾಗ ಅವರು ತಮ್ಮ ಮಕ್ಕಳಿಗೆ ಸಮಯವನ್ನು ನೀಡಲು ಸಾಧ್ಯವಾಗುತ್ತಿಲ್ಲ.

2016ರಲ್ಲಿ ಚಂಚಲ್ 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಕರು ಹಾಗೂ ಸ್ನೇಹಿತರು “ಇದು ತಪ್ಪು ನಿರ್ಧಾರ” ಎಂದು ಹೇಳಿದರು. ಆದರೆ ಮಗನಿಗೆ ಆರೋಗ್ಯಕರ ಮತ್ತು ಸ್ವಚ್ಛ ಜೀವನವನ್ನು ನೀಡಲು ನಾನು ತೆಗೆದುಕೊಂಡ ನಿರ್ಧಾರ ಸರಿ ಎಂದು ಅವರಿಗೆ ಹೇಳಿದೆ ಎಂಬುದಾಗಿ ಚಂಚಲ್ ಹೇಳಿದರು. 2017ರಲ್ಲಿ ಚಂಚಲ್ ತಮ್ಮ ಮಗನ ಜೊತೆ ಇಂಧೋರ್ ಶಿಫ್ಟ್ ಆಗಿದ್ದಾರೆ. ಅಲ್ಲಿ ಸಾವಯವ ಕೃಷಿಯಲ್ಲಿ ಪದ್ಮಶ್ರೀ ಡಾ. ಜಾನಕ್ ಪಾಲ್ಟಾ ಅವರಿಂದ ತರಬೇತಿ ಪಡೆದಿದ್ದಾರೆ. ಜೊತೆಗೆ ಸೋಲಾರ್ ಕುಕ್ಕಿಂಗ್, ಸೋಲಾರ್ ಡ್ರೈಯಿಂಗ್ ಕಲಿತಿದ್ದಾರೆ.

ನಾವು ಯಾವಾಗಲೂ ನಮ್ಮ ಮಗನಿಗೆ ನೀನು ಯಾವುದೇ ರೇಸ್ನಲ್ಲಿ ಇಲ್ಲ. ನೀನು ಯಾರಿಂದಲೂ ಮುಂದೆ ಅಥವಾ ಹಿಂದಕ್ಕೆ ನಡೆಯಬೇಕಿಲ್ಲ. ಕೇವಲ ತನ್ನ ವೇಗದಲ್ಲಿ ನಡೆಯಬೇಕು ಎಂದು ಹೇಳುತ್ತಿರುತ್ತೇವೆ ಅಂತಾ ರಾಜೇಂದ್ರ ಹಾಗೂ ಚಂಚಲ್ ತಿಳಿಸಿದ್ದಾರೆ. ರಾಜೇಂದ್ರ ಹಾಗೂ ಚಂಚಲ್ ಅವರ ಮನೆಯಲ್ಲಿ ಸೋಲಾರ್ ಕುಕ್ಕಿಂಗ್ ಮೂಲಕ ಅಡುಗೆ ಮಾಡಲಾಗುತ್ತಿದೆ. ಅಲ್ಲದೆ ತಮ್ಮ ಜಮೀನಿನಲ್ಲಿ ಸಾವಯವ ರೀತಿಯಲ್ಲಿ ಬೆಳೆದ ತರಕಾರಿಗಳನ್ನು ಅಡುಗೆ ಮಾಡಲು ಉಪಯೋಗಿಸುತ್ತಾರೆ. ಚಂಚಲ್ ಒಬ್ಬರೇ ಎಲ್ಲವನ್ನು ನೋಡಿಕೊಳ್ಳುತ್ತಾರೆ. ರಾಜೇಂದ್ರ ಉದ್ಯೋಗದಿಂದಾಗಿ ಇಂದೋರ್ ಮನೆಯಲ್ಲಿ ಹೆಚ್ಚು ಸಮಯ ಇರುವುದಿಲ್ಲ. ಪತಿ ಮನೆಯಲ್ಲಿ ಇಲ್ಲದೇ ಇದ್ದರೂ ಚಂಚಲ್, ಗುರುಭಕ್ಷ್ಗೆ ವಿದ್ಯಾಭ್ಯಾಸದ ಜೊತೆಗೆ ಭವಿಷ್ಯದ ಮಾದರಿ ರೈತನಾಗಲು ಕೃಷಿ ತರಬೇತಿ ನೀಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…