News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

250

ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ.

ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ ಅತ್ಯಂತ ಪರಿಣಾಮಕಾರಿಯಾಗಿದೆ. ಈ ರಸ ಹೊಟ್ಟೆಯಲ್ಲಿಳಿದ ಬಳಿಕ ಜೀರ್ಣರಸಗಳನ್ನು ಅಗತ್ಯಪ್ರಮಾಣದಲ್ಲಿ ಸ್ರವಿಸಲು ಜಠರಕ್ಕೆ ಪ್ರಚೋದನೆ ನೀಡುತ್ತದೆ. ಪರಿಣಾಮವಾಗಿ ಹುಳಿತೇಗು, ಗ್ಯಾಸ್ಟ್ರಿಕ್, ಹೊಟ್ಟೆಯ ಹುಣ್ಣು ಮೊದಲಾದ ತೊಂದರೆಗಳಿಂದ ಕಾಪಾಡಿದಂತಾಗುತ್ತದೆ. ವಾರಕ್ಕೊಮ್ಮೆ ಬೆಳಿಗ್ಗೆದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಆರೋಗ್ಯ ಉತ್ತಮಗೊಳ್ಳುತ್ತದೆ.

ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ತಗ್ಗಿಸುತ್ತದೆ  : ಪ್ರತಿದಿನ ಬೆಳಿಗ್ಗೆ ಒಂದು ಲೋಟ ಹಾಗಲಕಾಯಿಯ ರಸವನ್ನು ಖಾಲಿಹೊಟ್ಟೆಯಲ್ಲಿ ಕುಡಿದರೆ ರಕ್ತದಲ್ಲಿ ಹೆಚ್ಚಾಗಿರುವ ಸಕ್ಕರೆಯ ಅಂಶ ಮೂರೇ ದಿನದಲ್ಲಿ ತಹಬಂದಿಗೆ ಬರುತ್ತದೆ. ಇದಕ್ಕೆ ಕಾರಣ ಹಾಗಲಕಾಯಿಯಲ್ಲಿರುವ ಕಾರಣವಾಗಿವೆ. ವಾಸ್ತವಾಗಿ ರಕ್ತದಲ್ಲಿನ ಸಕ್ಕರೆ ಉಪಯೋಗಿಸಲ್ಪಡದೇ ವಿಸರ್ಜಿಸಲಾಗಲು ಇನ್ಸುಲಿನ್ ಪ್ರಮಾಣ ಮಹತ್ವದ ಪಾತ್ರ ವಹಿಸುತ್ತದೆ. ಈ ಪೋಷಕಾಂಶಗಳು ಇನ್ಸುಲಿನ್ ಕೊರತೆಯಾಗದಂತೆ ನೋಡಿಕೊಳ್ಳುವುದೇ ಹಾಗಲಕಾಯಿಯ ಈ ಸಾಮರ್ಥ್ಯಕ್ಕೆ ಕಾರಣವಾಗಿದೆ.

ಕ್ಯಾನ್ಸರ್‌ನಿಂದ ಕಾಪಾಡುತ್ತದೆ : ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.

ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ : ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ (oxidative stress) ಕಣ್ಣುಗಳನ್ನು ಕಾಪಾಡುತ್ತವೆ. ಹಾಗಲಕಾಯಿಯ ನಿಯಮಿತ ಸೇವನೆಯಿಂದ ಕಣ್ಣುಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗುತ್ತದೆ.

ಮೊಡವೆಗಳಿಗೆ : ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.

ರಕ್ತವನ್ನು ಶುದ್ಧೀಕರಿಸುತ್ತದೆ : ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸವನ್ನು ಸೇವಿಸುವುದರಿಂದ ರಕ್ತ ಶುದ್ಧಿಗೊಂಡು ಚರ್ಮದ ವಿವಿಧ ತೊಂದರೆಗಳು ಮಾಯವಾಗಿ ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ. ಶುದ್ದೀಕರಣಗೊಂಡ ರಕ್ತದ ಮೂಲಕ ಇಡಿಯ ಶರೀರ ಆರೋಗ್ಯದಿಂದ ಕಂಗೊಳಿಸುತ್ತದೆ.

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಮಾಡುತ್ತದೆ ಹಾಗಲಕಾಯಿಯಲ್ಲಿ ಫೈಟೋನ್ಯೂಟ್ರಿಯೆಂಟ್‌ಗಳೆಂಬ ಆಂಟಿ ಆಕ್ಸಿಡೆಂಟುಗಳಿದ್ದು ಇವು ಕೆಟ್ಟ ಕೊಲೆಸ್ಟಾಲ್ ಕಣಗಳನ್ನು ತಮ್ಮೊಂದಿಗೆ ಅಂಟಿಸಿಕೊಂಡು ಹೋಗುವ ಕ್ಷಮತೆ ಪಡೆದಿವೆ. ಹಾಗಲಕಾಯಿಯನ್ನು ತರಕಾರಿಯ ರೂಪದಲ್ಲಿ ಆಲಿವ್ ಎಣ್ಣೆಯೊಡನೆ ಸೇವಿಸಿದರೆ ಕೊಂಚ ಕಹಿ ಎನಿಸಿದರೂ ನಿಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ನಿವಾರಿಸುವ ಮೂಲಕ ಆರೋಗ್ಯವನ್ನು ವೃದ್ಧಿಸುತ್ತದೆ.

ಮಧುಮೇಹ ಗುಣಪಡಿಸಲು ನೆರವಾಗುತ್ತದೆ :ಬಾಳೆಹಣ್ಣು ಹಣ್ಣುಗಳು ಆರೋಗ್ಯ ರಹಸ್ಯಗಳನ್ನು ಮಧುಮೇಹವನ್ನು ಗುಣಪಡಿಸಲು ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

    ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…

  • ಉಪಯುಕ್ತ ಮಾಹಿತಿ

    ಪದೇ ಪದೇ ಫೋನ್ ಹ್ಯಾಂಗ್ ಆಗುತ್ತಿದ್ದರೆ ಈ ಒಂದು ಕೆಲಸ ಮಾಡಿ ಸಾಕು.!

    ಹೆಚ್ಚಿನ ಜನರು ಫೋನ್ ಹ್ಯಾಂಗ್‌ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್‌ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್‌ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್‌ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…

  • ಗ್ಯಾಜೆಟ್

    ಜಗತ್ತಿನಾದ್ಯಂತ ವೈರಲ್ ಆಗಿರುವ ಈ ಆಪ್ನಿಂದ, ನೀವು ಯಾರಿಗೆ ಯಾವುದೇ ತರದ ಮೆಸೇಜ್ ಮಾಡಿದ್ರೂ ಸಹ, ಯಾರು ಮಾಡಿದ್ದು ಅಂತ ತಿಳಿಯೋದಿಲ್ಲ!ಹೇಗೆ ಗೊತ್ತಾ?ಈ ಲೇಖನಿ ಓದಿ…

    ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.

  • ದೇಶ-ವಿದೇಶ

    ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಈ 999 ಮೆಟ್ಟಿಲೇರಿದರೆ ಸಾಕು..!ತಿಳಿಯಲು ಈ ಲೇಖನ ಓದಿ…

    ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!

  • ಉಪಯುಕ್ತ ಮಾಹಿತಿ

    ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೆಲಕಾಲ ವಾಟ್ಸಪ್ ಕ್ರ್ಯಾಶ್ ಆಗಿದೆ..!ತಿಳಿಯಲು ಇದನ್ನು ಓದಿ..

    ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.