ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ.

ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆಯೆ? ಈ ಪ್ರಶ್ನೆಗೆ ಪ್ರಖ್ಯಾತ ಪೌಷ್ಟಿಕ ತಜ್ಞ ರುಜುತಾ ದಿವೆಕರ್, ಗೋಡಂಬಿ ಮೂಲತಃ ಭಾರತ ಮತ್ತು ಆಫ್ರಿಕಾದ ಬೆಳೆ. ಇದು ಬದಾಮಿಯಂತೆ ದೇಹಕ್ಕೆ ಒಳ್ಳೆಯದು. ಗೋಡಂಬಿಯಲ್ಲಿ ಕೊಲೆಸ್ಟ್ರಾಲ್ ಅಂಶಗಳಿಲ್ಲ. ಗೋಡಂಬಿ ಎಂಬುದು ಪೋಷಕಾಂಶಗಳ ತವರುಮನೆ. ಇದು ಸಕ್ಕರೆ ಕಾಯಿಲೆ ಇರುವವರ ಪಾದಗಳಿಗೆ ಒಳ್ಳೆಯದು. ಬೊಗಸೆ ತುಂಬ ಗೋಡಂಬಿಗಳನ್ನು ಪ್ರತಿನಿತ್ಯ ಸೇವಿಸುವದರಿಂದ ಕಾಲು ಸೆಳೆತ ಇನ್ನಿಲ್ಲವಾಗುತ್ತದೆ. ಅಲ್ಲದೆ, ರಕ್ತದಲ್ಲಿನ ಸಕ್ಕರೆ ಅಂಶವನ್ನು ಸಮತೋಲನವಾಗಿಡಬಹುದು ಎನ್ನುತ್ತಾರೆ.ಒಂದು ಮೋಸಂಬಿ ಹಣ್ಣಿಗಿಂತ ಗೋಡಂಬಿ 5 ಪಟ್ಟು ಹೆಚ್ಚು ವಿಟಮಿನ್ ಸಿ ಹೊಂದಿರುತ್ತದೆ. ದೇಹದಲ್ಲಿನ ಉಷ್ಣಾಂಶ ಹೆಚ್ಚಿಸಲು ವಿಟಮಿನ್ ಸಿ ಉಪಯೋಗಕಾರಿ .

ಸಹಾಯಕವಾದ ಫೈಬರ್ಗಳನ್ನು ಹೊಂದಿದೆ
ಗೋಡಂಬಿ ಅಥವಾ ಕ್ಯಾಶೀವ್ ನಟ್ಗಳಲ್ಲಿ ಆಹಾರದ ಫೈಬರ್ ಅಂಶ ಹೊಂದಿದ್ದು, ಇದನ್ನು ನಮ್ಮ ದೇಹ ಉತ್ಪಾದನೆ ಮಾಡದ ಕಾರಣ ಅದನ್ನು ಹೊರಗಿನಿಂದ ಸೇವಿಸಬೇಕಾಗುತ್ತದೆ. ಇದರಿಂದ ಜೀರ್ಣ ಶಕ್ತಿ ಹೆಚ್ಚಾಗಲಿದ್ದು, ಜೀರ್ಣಾಂಗ ಸಂಬಂಧಿ ರೋಗಗಳನ್ನು ಕಡಿಮೆ ಮಾಡುತ್ತದೆ.
ಹೃದಯ ರೋಗವನ್ನು ನಿಯಂತ್ರಣದಲ್ಲಿಡುತ್ತದೆ
ಗೋಡಂಬಿ ಎಲ್ಡಿಎಲ್ ಕೊಲೆಸ್ಟರಾಲ್ ಅನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಎಚ್ಡಿಎಲ್ ಕೊಲೆಸ್ಟರಾಲ್ ಒಯ್ಯುವ ಸಾಮಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯ ರೋಗ ಬರುವ ಅಪಾಯವನ್ನು ತಗ್ಗಿಸುತ್ತದೆ. ಆದರೆ, ಉಪ್ಪು ಅಂಶ ಹೆಚ್ಚಿರುವ ಅಥವಾ ಹುರಿದ ಗೋಡಂಬಿಯಲ್ಲದಂತೆ ನೋಡಿಕೊಳ್ಳಿ.
ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ
ಗೋಡಂಬಿಯಲ್ಲಿ ಒಮೆಗಾ 3 ಅಂಶವಿರುವುದರಿಂದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇನ್ನು, ಹಸಿವಾದಾಗ ಬೊಗಸೆಯಷ್ಟು ಗೋಡಂಬಿ ತಿಂದರೆ
ಅದರಿಂದ ಹೆಚ್ಚು ಕಾಲ ಹೊಟ್ಟೆ ತುಂಬುವಂತೆಯೂ ನೋಡಿಕೊಳ್ಳುತ್ತದೆ.

ಕಣ್ಣಿಗೆ ಸೋಂಕು ಹರಡದಂತೆ ತಡೆಯಲು ಸಹಾಯ ಮಾಡುತ್ತದೆ
ವಾತಾವರಣದಲ್ಲಿ ಹೆಚ್ಚು ಮಾಲಿನ್ಯವಿದ್ದರೂ ಸಹ ಗೋಡಂಬಿಯನ್ನುತಿನ್ನುವುದರಿಂದ ಕಣ್ಣಿಗೆ ಸೋಂಕು ಬರದಂತೆ ತಡೆಯುತ್ತದೆ. ಯಾಕೆಂದರೆ ಇದು ಪ್ರಬಲ ಆ್ಯಂಟಿಆಕ್ಸಿಡೆಂಟ್ ಪಿಗ್ಮೆಂಟ್ ಹೊಂದಿದೆ. ಹೀಗಾಗಿ, ರೆಟಿನಾ ಮೇಲೆ ರಕ್ಷಣಾತ್ಮಕ ಪದರವನ್ನು ಸೃಷ್ಟಿ ಮಾಡಲಿದ್ದು, ಇದರಿಂದ ಹಾನಿಕರ ಯುವಿ ಕಿರಣಗಳನ್ನು ತಡೆಯುತ್ತದೆ.
ನಿಮ್ಮ ಚರ್ಮಕ್ಕೆ ಒಳ್ಳೆಯದು
ಗೋಡಂಬಿ ಮೆಗ್ನೀಷಿಯಂ, ಝಿಂಕ್, ಕಬ್ಬಿಣ ಹಾಗೂ ಫಾಸ್ಫರಸ್ ಅಂಶ ಹೆಚ್ಚಿರುತ್ತದೆ. ಅಲ್ಲದೆ, ಪ್ರೋಟೀನ್ಗಳು ಹಾಗೂ ಸೆಲೆನಿಯಂ ಸೇರಿ ಆ್ಯಂಟಿಆಕ್ಸಿಡೆಂಟ್ಸ್ ಸಹ ಹೆಚ್ಚಿರುತ್ತದೆ.. ಅದರಿಂದ ನಿಮ್ಮ ಚರ್ಮಕ್ಕೆ ಒಳ್ಳೆಯದು. ಜತೆಗೆ, ಗೋಡಂಬಿ ತಿನ್ನುವುದಾಗಲೀ, ಗೋಡಂಬಿ ಎಣ್ಣೆಯನ್ನು ನೆತ್ತಿ ಮೇಲೆ ಹಚ್ಚಿಕೊಳ್ಳುವುದರಿಂದ ಚರ್ಮ ಹಾಗೂ ಕೂದಲಿಗೆ ಮೆಲಾನಿನ್ ಪಿಗ್ಮೆಂಟ್ ಉತ್ಪತ್ತಿಯಾಗಲು ನೆರವಾಗುತ್ತದೆ. ಇನ್ನೊಂದೆಡೆ, ಕೂದಲಿಗೆ ನಯವಾದ ವಿನ್ಯಾಸವನ್ನೂ ಇದು ನೀಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…