ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ.

ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆಯೆ? ಈ ಪ್ರಶ್ನೆಗೆ ಪ್ರಖ್ಯಾತ ಪೌಷ್ಟಿಕ ತಜ್ಞ ರುಜುತಾ ದಿವೆಕರ್, ಗೋಡಂಬಿ ಮೂಲತಃ ಭಾರತ ಮತ್ತು ಆಫ್ರಿಕಾದ ಬೆಳೆ. ಇದು ಬದಾಮಿಯಂತೆ ದೇಹಕ್ಕೆ ಒಳ್ಳೆಯದು. ಗೋಡಂಬಿಯಲ್ಲಿ ಕೊಲೆಸ್ಟ್ರಾಲ್ ಅಂಶಗಳಿಲ್ಲ. ಗೋಡಂಬಿ ಎಂಬುದು ಪೋಷಕಾಂಶಗಳ ತವರುಮನೆ. ಇದು ಸಕ್ಕರೆ ಕಾಯಿಲೆ ಇರುವವರ ಪಾದಗಳಿಗೆ ಒಳ್ಳೆಯದು. ಬೊಗಸೆ ತುಂಬ ಗೋಡಂಬಿಗಳನ್ನು ಪ್ರತಿನಿತ್ಯ ಸೇವಿಸುವದರಿಂದ ಕಾಲು ಸೆಳೆತ ಇನ್ನಿಲ್ಲವಾಗುತ್ತದೆ. ಅಲ್ಲದೆ, ರಕ್ತದಲ್ಲಿನ ಸಕ್ಕರೆ ಅಂಶವನ್ನು ಸಮತೋಲನವಾಗಿಡಬಹುದು ಎನ್ನುತ್ತಾರೆ.ಒಂದು ಮೋಸಂಬಿ ಹಣ್ಣಿಗಿಂತ ಗೋಡಂಬಿ 5 ಪಟ್ಟು ಹೆಚ್ಚು ವಿಟಮಿನ್ ಸಿ ಹೊಂದಿರುತ್ತದೆ. ದೇಹದಲ್ಲಿನ ಉಷ್ಣಾಂಶ ಹೆಚ್ಚಿಸಲು ವಿಟಮಿನ್ ಸಿ ಉಪಯೋಗಕಾರಿ .

ಸಹಾಯಕವಾದ ಫೈಬರ್ಗಳನ್ನು ಹೊಂದಿದೆ
ಗೋಡಂಬಿ ಅಥವಾ ಕ್ಯಾಶೀವ್ ನಟ್ಗಳಲ್ಲಿ ಆಹಾರದ ಫೈಬರ್ ಅಂಶ ಹೊಂದಿದ್ದು, ಇದನ್ನು ನಮ್ಮ ದೇಹ ಉತ್ಪಾದನೆ ಮಾಡದ ಕಾರಣ ಅದನ್ನು ಹೊರಗಿನಿಂದ ಸೇವಿಸಬೇಕಾಗುತ್ತದೆ. ಇದರಿಂದ ಜೀರ್ಣ ಶಕ್ತಿ ಹೆಚ್ಚಾಗಲಿದ್ದು, ಜೀರ್ಣಾಂಗ ಸಂಬಂಧಿ ರೋಗಗಳನ್ನು ಕಡಿಮೆ ಮಾಡುತ್ತದೆ.
ಹೃದಯ ರೋಗವನ್ನು ನಿಯಂತ್ರಣದಲ್ಲಿಡುತ್ತದೆ
ಗೋಡಂಬಿ ಎಲ್ಡಿಎಲ್ ಕೊಲೆಸ್ಟರಾಲ್ ಅನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಎಚ್ಡಿಎಲ್ ಕೊಲೆಸ್ಟರಾಲ್ ಒಯ್ಯುವ ಸಾಮಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯ ರೋಗ ಬರುವ ಅಪಾಯವನ್ನು ತಗ್ಗಿಸುತ್ತದೆ. ಆದರೆ, ಉಪ್ಪು ಅಂಶ ಹೆಚ್ಚಿರುವ ಅಥವಾ ಹುರಿದ ಗೋಡಂಬಿಯಲ್ಲದಂತೆ ನೋಡಿಕೊಳ್ಳಿ.
ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ
ಗೋಡಂಬಿಯಲ್ಲಿ ಒಮೆಗಾ 3 ಅಂಶವಿರುವುದರಿಂದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇನ್ನು, ಹಸಿವಾದಾಗ ಬೊಗಸೆಯಷ್ಟು ಗೋಡಂಬಿ ತಿಂದರೆ
ಅದರಿಂದ ಹೆಚ್ಚು ಕಾಲ ಹೊಟ್ಟೆ ತುಂಬುವಂತೆಯೂ ನೋಡಿಕೊಳ್ಳುತ್ತದೆ.

ಕಣ್ಣಿಗೆ ಸೋಂಕು ಹರಡದಂತೆ ತಡೆಯಲು ಸಹಾಯ ಮಾಡುತ್ತದೆ
ವಾತಾವರಣದಲ್ಲಿ ಹೆಚ್ಚು ಮಾಲಿನ್ಯವಿದ್ದರೂ ಸಹ ಗೋಡಂಬಿಯನ್ನುತಿನ್ನುವುದರಿಂದ ಕಣ್ಣಿಗೆ ಸೋಂಕು ಬರದಂತೆ ತಡೆಯುತ್ತದೆ. ಯಾಕೆಂದರೆ ಇದು ಪ್ರಬಲ ಆ್ಯಂಟಿಆಕ್ಸಿಡೆಂಟ್ ಪಿಗ್ಮೆಂಟ್ ಹೊಂದಿದೆ. ಹೀಗಾಗಿ, ರೆಟಿನಾ ಮೇಲೆ ರಕ್ಷಣಾತ್ಮಕ ಪದರವನ್ನು ಸೃಷ್ಟಿ ಮಾಡಲಿದ್ದು, ಇದರಿಂದ ಹಾನಿಕರ ಯುವಿ ಕಿರಣಗಳನ್ನು ತಡೆಯುತ್ತದೆ.
ನಿಮ್ಮ ಚರ್ಮಕ್ಕೆ ಒಳ್ಳೆಯದು
ಗೋಡಂಬಿ ಮೆಗ್ನೀಷಿಯಂ, ಝಿಂಕ್, ಕಬ್ಬಿಣ ಹಾಗೂ ಫಾಸ್ಫರಸ್ ಅಂಶ ಹೆಚ್ಚಿರುತ್ತದೆ. ಅಲ್ಲದೆ, ಪ್ರೋಟೀನ್ಗಳು ಹಾಗೂ ಸೆಲೆನಿಯಂ ಸೇರಿ ಆ್ಯಂಟಿಆಕ್ಸಿಡೆಂಟ್ಸ್ ಸಹ ಹೆಚ್ಚಿರುತ್ತದೆ.. ಅದರಿಂದ ನಿಮ್ಮ ಚರ್ಮಕ್ಕೆ ಒಳ್ಳೆಯದು. ಜತೆಗೆ, ಗೋಡಂಬಿ ತಿನ್ನುವುದಾಗಲೀ, ಗೋಡಂಬಿ ಎಣ್ಣೆಯನ್ನು ನೆತ್ತಿ ಮೇಲೆ ಹಚ್ಚಿಕೊಳ್ಳುವುದರಿಂದ ಚರ್ಮ ಹಾಗೂ ಕೂದಲಿಗೆ ಮೆಲಾನಿನ್ ಪಿಗ್ಮೆಂಟ್ ಉತ್ಪತ್ತಿಯಾಗಲು ನೆರವಾಗುತ್ತದೆ. ಇನ್ನೊಂದೆಡೆ, ಕೂದಲಿಗೆ ನಯವಾದ ವಿನ್ಯಾಸವನ್ನೂ ಇದು ನೀಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ