ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ ಗೊತ್ತಾ ಇದನ್ನು ತಿಳಿದರೆ ಇಂದಿನಿಂದಲೇ ಪ್ರತಿದಿನ ರಾಗಿಗಂಜಿ ಕುಡಿಯುವುದಕ್ಕೆ ಅಭ್ಯಾಸವನ್ನು ಮಾಡಿಕೊಳ್ಳುತ್ತೀರಾ ಹಾಗಾದರೆ ರಾಗಿ ಗಂಜಿಯ ಪ್ರಯೋಜನವೇನು ಎಂಬುದನ್ನು ತಿಳಿದುಕೊಳ್ಳೋಣ.

ರಾಗಿ ಅಥವಾ ರಾಗಿ ಗಂಜಿ ರಾಗಿಯಲ್ಲಿ ಯಾವುದೇ ಆಹಾರದಲ್ಲಿ ಲಭಿಸದ ನಮಗೆ ತುಂಬಾ ಉಪಯೋಗ ಆಗುವ ಮೆಕ್ಯುನೈನ್ ಅಮೈನೋ ಆಮ್ಲವು ರಾಗಿಯಲ್ಲಿ ತುಂಬಾ ಹೆಚ್ಚಾಗಿ ಇರುತ್ತದೆ ಅದಕ್ಕೆ ರಾಗಿಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಾರೆ ಅಷ್ಟೆ ಅಲ್ಲದೆ ರಾಗಿ ಗಂಜಿಯನ್ನು ಕುಡಿಯುವುದರಿಂದ ನಮ್ಮ ಶರೀರಕ್ಕೆ ತುಂಬಾ ಒಳ್ಳೆಯದು ಆಗುತ್ತದೆ ಅದೇನು ಎಂದು ಈಗ ಈ ಲೇಖನದಲ್ಲಿ ತಿಳಿಯೋಣ. ರಾಗಿಯನ್ನು ಅನೇಕ ರೀತಿಯಲ್ಲಿ ಅಡುಗೆಗಳಲ್ಲಿ ಉಪಯೋಗಿಸಿ ತಿನ್ನಬಹುದು ಎಲ್ಲದಕ್ಕಿಂತಲೂ ರಾಗಿ ಗಂಜಿ ಫೇಮಸ್ ರಾಗಿಯಲ್ಲಿ ಕ್ಯಾಲ್ಸಿಯಂ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ ಈ ಕ್ಯಾಲ್ಸಿಯಂ ಮೂಲೆಗಳಿಗೆ ಹೆಚ್ಚು ಬಲವನ್ನು ತಂದುಕೊಡುತ್ತದೆ ಮುಖ್ಯವಾಗಿ ಬೆಳೆಯುವ ಮಕ್ಕಳಿಗೆ ವೃದ್ಧರಿಗೆ ರಾಗಿ ತುಂಬಾ ಉಪಯೋಗ ಆಗುತ್ತದೆ.

ಕ್ಯಾನ್ಸರ್ನ್ನು ತಡೆಗಟ್ಟುವಲ್ಲಿ ಸಹಾಯಕಾರಿಯಾಗಿದೆ: ರಾಗಿಯಲ್ಲಿ ಕ್ವೆರ್ಸೆಟಿನ್, ಸೆಲೆನಿಯಮ್ ಮತ್ತು ಪ್ಯಾಂಟೋಥೆನಿಕ್ ಆಮ್ಲದ ಅಂಶಗಳಿರುವುದರಿಂದ ಇದು ದೇಹದಲ್ಲಿ ಕ್ಯಾನ್ಸರ್ ಕೋಶಗಳನ್ನು ಉತ್ಪಾದಿಸುವುದನ್ನು ಕಡಿಮೆಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಜಾಸ್ತಿಯಾಗಿರುವುದರಿಂದ ರಾಗಿಯಲ್ಲಿರುವ ಫೈಬರ್ ಅಂಶವು 30% ರಷ್ಟು ಸ್ತನ ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ ಎಂದು ಹೇಳಲಾಗುತ್ತದೆ.
ರಕ್ತಹೀನತೆಯನ್ನು ತಡೆಯುತ್ತದೆ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ರಕ್ತಹೀನತೆಯು ಬಹಳ ಅಪಾಯಕಾರಿ ಹಾಗೂ ಮಾರಣಾಂತಿಕವೂ ಹೌದು. ರಾಗಿಯಲ್ಲಿ ಕೆಂಪು ರಕ್ತ ಕಣಗಳ ರಚನೆಗೆ ಬೇಕಾದ ಹಿಮೋಗ್ಲೋಬಿನ್ ಅಂಶವು ಜಾಸ್ತಿ ಇರುವುದರಿಂದ ರಾಗಿಯು ರಕ್ತಹೀನತೆಯನ್ನು ತಡೆಯುವಲ್ಲಿ ಸಹಕಾರಿಯಾಗಿದೆ.
ವಿಷ ಆಮ್ಲವನ್ನು ತೆಗೆದುಹಾಕುತ್ತದೆ: ನಮ್ಮ ದೇಹದಲ್ಲಿರುವ ವಿಷ ಆಮ್ಲವನ್ನು ತೆಗೆದುಹಾಕಲು ರಾಗಿ ಒಂದು ಉತ್ತಮವಾದ ಆಹಾರ ಎಂದೇ ಹೇಳಬಹುದು. ಇದರಲ್ಲಿರುವ ಕ್ವೆರ್ಸೆಟಿನ್ ಎಂಬ ಅಂಶವು ವಿಷ ಆಮ್ಲದ ವಿರುದ್ಧ ಹೋರಾಡಿ ಅದು ನಮ್ಮ ದೇಹದಲ್ಲಿ ಉತ್ಪತ್ತಿ ಆಗದಂತೆ ತಡೆಯುತ್ತದೆ ಇದರಿಂದ ದೇಹ ಆರೋಗ್ಯಯುತವಾಗಿರುತ್ತದೆ.

ಹೃದಯದ ಆರೋಗ್ಯ ಕಾಪಾಡುತ್ತದೆ : ಇದರಲ್ಲಿರುವ ಮೆಗ್ನೀಷಿಯಂ ಅಂಶವು ಅಧಿಕ ರಕ್ತದ ಒತ್ತಡವನ್ನು ಕಡಿಮೆ ಮಾಡುವುದಷ್ಟೇ ಅಲ್ಲ ಹೃದಯಾಘಾತದಿಂದ ಉಂಟಾಗುವ ಪಾರ್ಶ್ವವಾಯುಗಳ ಅಪಾಯವನ್ನು ಇದು ತಗ್ಗಿಸುತ್ತದೆ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ : ಕಡಿಮೆ ಫೈಬರ್ಯುಕ್ತ ಆಹಾರದ ಸೇವನೆಯಿಂದಾಗಿ ಅತಿಸಾರ, ಮಲಬದ್ಧತೆ, ಗ್ಯಾಸ್ ಮುಂತಾದ ಜೀರ್ಣಕಾರಿ ಸಮಸ್ಯೆಯಾಗುತ್ತದೆ. ರಾಗಿಯಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ನಿಯಂತ್ರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…