ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ ಗೊತ್ತಾ ಇದನ್ನು ತಿಳಿದರೆ ಇಂದಿನಿಂದಲೇ ಪ್ರತಿದಿನ ರಾಗಿಗಂಜಿ ಕುಡಿಯುವುದಕ್ಕೆ ಅಭ್ಯಾಸವನ್ನು ಮಾಡಿಕೊಳ್ಳುತ್ತೀರಾ ಹಾಗಾದರೆ ರಾಗಿ ಗಂಜಿಯ ಪ್ರಯೋಜನವೇನು ಎಂಬುದನ್ನು ತಿಳಿದುಕೊಳ್ಳೋಣ.

ರಾಗಿ ಅಥವಾ ರಾಗಿ ಗಂಜಿ ರಾಗಿಯಲ್ಲಿ ಯಾವುದೇ ಆಹಾರದಲ್ಲಿ ಲಭಿಸದ ನಮಗೆ ತುಂಬಾ ಉಪಯೋಗ ಆಗುವ ಮೆಕ್ಯುನೈನ್ ಅಮೈನೋ ಆಮ್ಲವು ರಾಗಿಯಲ್ಲಿ ತುಂಬಾ ಹೆಚ್ಚಾಗಿ ಇರುತ್ತದೆ ಅದಕ್ಕೆ ರಾಗಿಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಾರೆ ಅಷ್ಟೆ ಅಲ್ಲದೆ ರಾಗಿ ಗಂಜಿಯನ್ನು ಕುಡಿಯುವುದರಿಂದ ನಮ್ಮ ಶರೀರಕ್ಕೆ ತುಂಬಾ ಒಳ್ಳೆಯದು ಆಗುತ್ತದೆ ಅದೇನು ಎಂದು ಈಗ ಈ ಲೇಖನದಲ್ಲಿ ತಿಳಿಯೋಣ. ರಾಗಿಯನ್ನು ಅನೇಕ ರೀತಿಯಲ್ಲಿ ಅಡುಗೆಗಳಲ್ಲಿ ಉಪಯೋಗಿಸಿ ತಿನ್ನಬಹುದು ಎಲ್ಲದಕ್ಕಿಂತಲೂ ರಾಗಿ ಗಂಜಿ ಫೇಮಸ್ ರಾಗಿಯಲ್ಲಿ ಕ್ಯಾಲ್ಸಿಯಂ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ ಈ ಕ್ಯಾಲ್ಸಿಯಂ ಮೂಲೆಗಳಿಗೆ ಹೆಚ್ಚು ಬಲವನ್ನು ತಂದುಕೊಡುತ್ತದೆ ಮುಖ್ಯವಾಗಿ ಬೆಳೆಯುವ ಮಕ್ಕಳಿಗೆ ವೃದ್ಧರಿಗೆ ರಾಗಿ ತುಂಬಾ ಉಪಯೋಗ ಆಗುತ್ತದೆ.

ಕ್ಯಾನ್ಸರ್ನ್ನು ತಡೆಗಟ್ಟುವಲ್ಲಿ ಸಹಾಯಕಾರಿಯಾಗಿದೆ: ರಾಗಿಯಲ್ಲಿ ಕ್ವೆರ್ಸೆಟಿನ್, ಸೆಲೆನಿಯಮ್ ಮತ್ತು ಪ್ಯಾಂಟೋಥೆನಿಕ್ ಆಮ್ಲದ ಅಂಶಗಳಿರುವುದರಿಂದ ಇದು ದೇಹದಲ್ಲಿ ಕ್ಯಾನ್ಸರ್ ಕೋಶಗಳನ್ನು ಉತ್ಪಾದಿಸುವುದನ್ನು ಕಡಿಮೆಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಜಾಸ್ತಿಯಾಗಿರುವುದರಿಂದ ರಾಗಿಯಲ್ಲಿರುವ ಫೈಬರ್ ಅಂಶವು 30% ರಷ್ಟು ಸ್ತನ ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ ಎಂದು ಹೇಳಲಾಗುತ್ತದೆ.
ರಕ್ತಹೀನತೆಯನ್ನು ತಡೆಯುತ್ತದೆ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ರಕ್ತಹೀನತೆಯು ಬಹಳ ಅಪಾಯಕಾರಿ ಹಾಗೂ ಮಾರಣಾಂತಿಕವೂ ಹೌದು. ರಾಗಿಯಲ್ಲಿ ಕೆಂಪು ರಕ್ತ ಕಣಗಳ ರಚನೆಗೆ ಬೇಕಾದ ಹಿಮೋಗ್ಲೋಬಿನ್ ಅಂಶವು ಜಾಸ್ತಿ ಇರುವುದರಿಂದ ರಾಗಿಯು ರಕ್ತಹೀನತೆಯನ್ನು ತಡೆಯುವಲ್ಲಿ ಸಹಕಾರಿಯಾಗಿದೆ.
ವಿಷ ಆಮ್ಲವನ್ನು ತೆಗೆದುಹಾಕುತ್ತದೆ: ನಮ್ಮ ದೇಹದಲ್ಲಿರುವ ವಿಷ ಆಮ್ಲವನ್ನು ತೆಗೆದುಹಾಕಲು ರಾಗಿ ಒಂದು ಉತ್ತಮವಾದ ಆಹಾರ ಎಂದೇ ಹೇಳಬಹುದು. ಇದರಲ್ಲಿರುವ ಕ್ವೆರ್ಸೆಟಿನ್ ಎಂಬ ಅಂಶವು ವಿಷ ಆಮ್ಲದ ವಿರುದ್ಧ ಹೋರಾಡಿ ಅದು ನಮ್ಮ ದೇಹದಲ್ಲಿ ಉತ್ಪತ್ತಿ ಆಗದಂತೆ ತಡೆಯುತ್ತದೆ ಇದರಿಂದ ದೇಹ ಆರೋಗ್ಯಯುತವಾಗಿರುತ್ತದೆ.

ಹೃದಯದ ಆರೋಗ್ಯ ಕಾಪಾಡುತ್ತದೆ : ಇದರಲ್ಲಿರುವ ಮೆಗ್ನೀಷಿಯಂ ಅಂಶವು ಅಧಿಕ ರಕ್ತದ ಒತ್ತಡವನ್ನು ಕಡಿಮೆ ಮಾಡುವುದಷ್ಟೇ ಅಲ್ಲ ಹೃದಯಾಘಾತದಿಂದ ಉಂಟಾಗುವ ಪಾರ್ಶ್ವವಾಯುಗಳ ಅಪಾಯವನ್ನು ಇದು ತಗ್ಗಿಸುತ್ತದೆ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ : ಕಡಿಮೆ ಫೈಬರ್ಯುಕ್ತ ಆಹಾರದ ಸೇವನೆಯಿಂದಾಗಿ ಅತಿಸಾರ, ಮಲಬದ್ಧತೆ, ಗ್ಯಾಸ್ ಮುಂತಾದ ಜೀರ್ಣಕಾರಿ ಸಮಸ್ಯೆಯಾಗುತ್ತದೆ. ರಾಗಿಯಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ನಿಯಂತ್ರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….