ಆಧ್ಯಾತ್ಮ

ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

155

ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ ಒಮ್ಮೆ ತನ್ನ ಇಬ್ಬರು ಪುತ್ರರಾದ ಗಣಪತಿ ಮತ್ತು ಕಾರ್ತಿಕೇಯನನ್ನು ಕರೆದು ವಿಶ್ವಕ್ಕೆ ಪ್ರದಕ್ಷಿಣೆ ಬರುವಂತೆ ತಿಳಿಸುತ್ತಾನೆ. ಆಗ ಕಾರ್ತಿಕೇಯನು ತನ್ನ ವಾಹನ ನವಿಲನ್ನು ಏರಿಕೊಂಡು ವಿಶ್ವ ಪರ್ಯಟನೆಗೆ ಮುಂದಾಗುತ್ತಾನೆ. ಆದರೆ ಗಣಪತಿಯು ಅಲ್ಲೇ ಶಿವನಿಗೆ ಸುತ್ತು ಬರುತ್ತಾನೆ. ಇದು ಮೋಸವಲ್ಲವೇ ಎಂದು ಶಿವ ಕೇಳಿದಾಗ, ನಿಮ್ಮೊಳಗೆ ವಿಶ್ವವೇ ಇದೆ. ಹಾಗಾಗಿ ನಾನು ಹೀಗೆ ಮಾಡಿದೆ ಎನ್ನುತ್ತಾನೆ. ಇದು ಪ್ರದಕ್ಷಿಣೆಯ ಬಗ್ಗೆ ಪುರಾಣ ಹೇಳುವಂತಹದ್ದು.

ಪುರಾಣಗಳಲ್ಲಿ ಇರುವಂತೆ ನಾವು ಇಂದಿಗೂ ದೇವರಿಗೆ ಪ್ರದಕ್ಷಿಣೆ ಹಾಕುವುದು. ಕೆಲವರು ಕೈ ಮುಗಿದು ಕಣ್ಣು ಮುಚ್ಚಿಕೊಂಡು ಪ್ರದಕ್ಷಿಣೆ ಹಾಕಿದರೆ, ಮತ್ತೆ ಕೆಲವರು ಮಂತ್ರವನ್ನು ಪಠಿಸುತ್ತಾ ಪ್ರದಕ್ಷಿಣೆ ಹಾಕುತ್ತಾರೆ. ಇದರಿಂದ ದೇವರು ನಮ್ಮ ಸನಿಹವೇ ಇದ್ದಾನೆ ಎನ್ನುವಂತಹ ಭಾವನೆ ಮೂಡುತ್ತದೆ. ಮಧ್ಯದಲ್ಲಿರುವ ದೇವರು ನಮ್ಮೆಲ್ಲರ ಜೀವನಕ್ಕೆ ಮಧ್ಯದಿಂದಲೇ ಗೆರೆ ಹಾಕಬೇಕೆಂದು ಇದರರ್ಥವಾಗಿದೆ. ದೇವರಿಗೆ ಬರುವಂತಹ ಪ್ರದಕ್ಷಿಣೆಯು ತುಂಬಾ ಪವಿತ್ರವಾಗಿರುವುದೆಂದು ಭಾವಿಸಲಾಗಿದೆ.   ದೇವಸ್ಥಾನಗಳ ಹಿ೦ದಿರುವ ವಿಸ್ಮಯಕರವಾದ ವೈಜ್ಞಾನಿಕ ವಿಚಾರಗಳೇನು? ಪ್ರದಕ್ಷಿಣೆಯ ಸಂಪೂರ್ಣ ಫಲವನ್ನು ಪಡೆಯಬೇಕಾದರೆ ಪ್ರದಕ್ಷಿಣೆ ಹಾಕುವಾಗ ನಾವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು.

ತಮ್ಮ ಕೈಗಳನ್ನು ಎದೆಯ ಮೇಲೆ ಜೋಡಿಸಿಕೊಳ್ಳಬೇಕು. ಸಣ್ಣ ಸಣ್ಣ ಹೆಜ್ಜೆ ಹಾಕುತ್ತಾ ನಿಧಾನವಾಗಿ ಮುನ್ನಡೆಯಬೇಕು. ದೇವಸ್ಥಾನದಲ್ಲಿನ ದೇವರ ಮಂತ್ರವನ್ನು ಬಾಯಿಯಲ್ಲಿ ಪಠಿಸುತ್ತಾ, ಹೃದಯಲ್ಲಿ ದೇವರ ಚಿತ್ರವನ್ನು ಜ್ಞಾಪಿಸಿಕೊಳ್ಳಬೇಕು. ಇದರಿಂದ ಸಂಪೂರ್ಣ ಶಾಂತಿ ಮತ್ತು ಶರಣಾದ ಭಾವನೆ ಮೂಡುವುದು.ದೇವರ ಗರ್ಭಗುಡಿಗೆ ಸಂಪೂರ್ಣವಾಗಿ ಸುತ್ತು ಬರುವುದು ಪ್ರದಕ್ಷಿಣೆ. ಆದರೆ ಕೆಲವೊಂದು ಶಿವ ಮಂದಿರಗಳಲ್ಲಿ ಸ್ವಲ್ಪ ಮಟ್ಟದ ಬದಲಾವಣೆಯಿದೆ. ಶಿವ ಮಂದಿರಗಳಲ್ಲಿ ಶಿವನಿಗೆ ಅಭಿಷೇಕ ಮಾಡುವ ನೀರು ಹೊರಬರುವ ಗೋಮುಖಿ ತನಕ ಮಾತ್ರ ಸುತ್ತ ಬರಬಹುದು. ಇದನ್ನು ದಾಟಬಾರದು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ. ಇದನ್ನು ದಾಟಿದರೆ ದೇವರಿಗೆ ಅಗೌರವ ತೋರಿಸಿದಂತೆ. ಗೋಮುಖಿಯಿಂದ ತಿರುಗಿ ಮಂದಿರದ ಇನ್ನೊಂದು ಭಾಗದವರೆಗೆ ಸಾಗಿ ಗೋಮುಖಿಯ ಮತ್ತೊಂದು ಪಾರ್ಶ್ವದ ತನಕ ಸುತ್ತು ಬರಬೇಕು. ಯಾವುದೇ ಸಂದರ್ಭದಲ್ಲಿ ಗೋಮುಖಿಯನ್ನು ದಾಟುವಂತಿಲ್ಲ.

ದೇವಸ್ಥಾನಕ್ಕೆ ಬೆಳಗಿನ ಜಾವ ಪ್ರದಕ್ಷಿಣೆ ಹಾಕಿದರೆ ರೋಗ ನಿವಾರಣೆಯಾಗುತ್ತದೆ. ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ. ಸಂಜೆ ಸಮಯದಲ್ಲಿ ಪ್ರದಕ್ಷಿಣೆ ಮಾಡುವುದರಿಂದ ಪಾಪ ದೂರವಾಗುತ್ತದೆ. ರಾತ್ರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಸಿದ್ದಿಯಾಗುತ್ತದೆ.

ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ :
ಗಣಪತಿ-1, ಶಿವ-2, ವಿಷ್ಣು-3, ಅಯ್ಯಪ್ಪ-4, ಕಾರ್ತಿಕೇಯ-5, ದುರ್ಗಾ-6, ಅಶ್ವತ್ಥ ಮರ-7 ವ್ಯಕ್ತಿಯು ಭೂತ ಹಾಗೂ ವರ್ತಮಾನದಲ್ಲಿ ಮಾಡಿರುವಂತಹ ಪಾಪಗಳನ್ನು ಪ್ರದಕ್ಷಿಣೆಯು ತೊಡೆದುಹಾಕುತ್ತದೆ ಎನ್ನುವ ನಂಬಿಕೆಯಿದೆ. ಆದರೆ ಕೇವಲ ದೇವಸ್ಥಾನಗಳಲ್ಲಿ ಮಾತ್ರ ಪ್ರದಕ್ಷಿಣೆ ಹಾಕಬೇಕೆಂದಿಲ್ಲ. ಇನ್ನೂ ಹಲವಾರು ರೀತಿಯ ಪ್ರದಕ್ಷಿಣೆಗಳಿವೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ. ಕಾರ್ತೀಕ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…

  • ಮನರಂಜನೆ

    ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…

  • ರಾಜಕೀಯ

    ಈ ಸಮೀಕ್ಷೆಯ ಪ್ರಕಾರ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಯಾರು ಗೊತ್ತಾ? ಯಾರಿಗೆ ಎಷ್ಟು ಮತ?ತಿಳಿಯಲು ಈ ಲೇಖನ ಓದಿ…

    ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.

  • ಸುದ್ದಿ

    ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!

    ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್‌ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್‌ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…