ಆರೋಗ್ಯ

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

513

ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ.

ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ ಇರುತ್ತದೆ. ಮೊಳಕೆ ಒಡೆದ ಕಾಳುಗಳನ್ನು ಬೇಯಿಸಿ ತಿನ್ನುವುದಕ್ಕಿಂದ ಹಸಿಯಾಗಿಯೇ ಸೇವಿಸುವುದು ಉತ್ತಮ. ಯಾಕೆಂದರೆ ಮೊಳಕೆ ಕಾಳುಗಳನ್ನು ಬೇಯಿಸಿದಾಗ ಅದರ ಪೌಷ್ಟಿಕತೆ ದೇಹಕ್ಕೆ ಸಿಗಲ್ಲ. ಮೊಳಕೆ ಕಾಳಲ್ಲಿ ಪ್ರೋಟಿನ್, ಫೈಬರ್, ವಿಟಮಿನ್ಸ್, ಕಬ್ಬಿಣದ ಅಂಶ, ಕ್ಯಾಲ್ಸಿಯಂ ಹೀಗೆ ದೇಹಕ್ಕೆ ಬೇಕಾದ ಆರೋಗ್ಯಕರ ಅಂಶಗಳು ಇರುತ್ತದೆ. ಆದ್ದರಿಂದ ಮೊಳಕೆ ಕಾಳು ದೇಹಕ್ಕೆ ಒಳ್ಳೆಯದು.

ಅನೇಕ ಅದ್ಭುತ ಲಾಭಗಳನ್ನು ತನ್ನೊಳಗೆ ಅಡಗಿಸಿಕೊಂಡಿರೋ ಮೊಳಕೆ ಕಾಳುಗಳಲ್ಲಿ ಮೊಳಕೆ ಒಡೆದ ಹೆಸರು ಕಾಳು ಒಂದು. ಈ ಮೊಳಕೆ ಒಡೆದ ಹೆಸರು ಕಾಳು ಆರೋಗ್ಯಕ್ಕೆ ಎಷ್ಟು ಉಪಯುಕ್ತ? ಅದರ ಲಾಭಗಳೇನು? ಅದನ್ನು ಯಾಕೆ ಸೇವಿಸಬೇಕು ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ..

ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು?

1. ಜೀರ್ಣಶಕ್ತಿ ವೃದ್ಧಿಸುತ್ತೆ
ಹೆಸರು ಕಾಳನ್ನು ನೀರಿನಲ್ಲಿ ನೆನಸಿಟ್ಟು, ಬಳಿಕ ಮೊಳಕೆ ಬಂದ ಮೇಲೆ ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತೆ. ಇದರಲ್ಲಿರೋ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.

2. ಹೃದಯದ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗುತ್ತದೆ. ಇದರಲ್ಲಿರೋ ಒಮೇಗಾ ಫ್ಯಾಟೀ ಆಸಿಡ್ ದೇಹಕ್ಕೆ ಬೇಕಾದ ಒಳ್ಳೆಯ ಕೊಬ್ಬಿನ ಅಂಶ ನೀಡಿ ರಕ್ತನಾಳದ ಆರೋಗ್ಯ ಕಾಪಾಡುತ್ತೆ. ಇದರಲ್ಲಿನ ಆಂಟಿ ಇನ್ಪ್ಲಮೇಟರಿ ಗುಣ ರಕ್ತನಾಳಗಳ ಮೇಲಿರೋ ಒತ್ತಡವನ್ನೂ ಕಡಿಮೆ ಮಾಡುತ್ತದೆ. ರಕ್ತದ ಸಂಚಾರ ಹೆಚ್ಚಿಸಿ ದೇಹಕ್ಕೆ ಹೆಚ್ಚು ಆಕ್ಸಿಜನ್ ಸಿಗುವ ಹಾಗೆ ಮಾಡಿ ಸ್ಟ್ರೋಕ್ ಹಾಗೂ ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.

3. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಇನ್ಫೆಕ್ಷನ್ ಆಗೋದನ್ನ ತಡೆಯುತ್ತದೆ. ಇದರ ಜೊತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರೋದ್ರಿಂದ ದೇಹಕ್ಕೆ ಹೆಚ್ಚಿನ ಆಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4. ಕ್ಯಾನ್ಸರ್ ಬಾರದ ಹಾಗೆ ನೋಡಿಕೊಳ್ಳುತ್ತದೆ
ವಿಟಮಿನ್ ಎ, ಸಿ, ಅಮಿನೋ ಆಸಿಡ್ಸ್ ಹಾಗೂ ಪ್ರೋಟಿನ್ ಅಂಶ ದೇಹದಲ್ಲಿ ಫ್ರೀ ರಾಡಿಕಲ್ಸ್ ಸೇರದ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಆಗುವ ಹಲವಾರು ಕ್ರಿಯೆಗಳ ಪರಿಣಾಮವಾಗಿ ಫ್ರೀ ರಾಡಿಕಲ್ಸ್ ಉತ್ಪತ್ತಿ ಆಗುತ್ತದೆ. ಇದರಿಂದ ದೇಹಕ್ಕೆ ಕ್ಯಾನ್ಸರ್ ಸೆಲ್ಸ್ ಸೇರುತ್ತದೆ. ಅಷ್ಟೇ ಅಲ್ಲದೆ ಸಾಕಷ್ಟು ಕಾಯಿಲೆಗಳು ಬರೋದಕ್ಕೆ ಇದು ಕಾರಣವಾಗುತ್ತದೆ. ಬೇಗ ಸುಸ್ತಾಗೋದು, ಕಣ್ಣು ಮಂಜಾಗುವುದು, ಹೃದಯಕ್ಕೆ ಸಂಬಂಧ ಪಟ್ಟ ತೊಂದರೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಇಂತಹ ತೊಂದರೆಗಳಿಂದ ದೂರವಿರಲು ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಬೇಕು.

5. ತೂಕ ಕಡಿಮೆ ಮಾಡುತ್ತದೆ ಹಾಗೂ ತ್ವಚೆಯ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳಿನಲ್ಲಿ ಕ್ಯಾಲೋರೀಸ್ ಇಲ್ಲದ ಕಾರಣ ಇದನ್ನು ಎಷ್ಟು ತಿಂದರೂ ತೂಕ ಹೆಚ್ಚಾಗಲ್ಲ. ಬದಲಾಗಿ ತೂಕ ಕಡಿಮೆ ಆಗುತ್ತೆ. ಮೊಳಕೆ ಬಂದ ಹೆಸರು ಕಾಳನ್ನು ತಿನ್ನುವುದರಿಂದ ಇದರಲ್ಲಿರೋ ಫೈಬರ್ ನಿಮ್ಮ ದೇಹಕ್ಕೆ ಸೇರಿ ಹೊಟ್ಟೆ ತುಂಬುವ ಹಾಗೆ ಮಾಡುತ್ತೆ. ಆದರ ಜೊತೆ ಪದೇ ಪದೇ ಹಸಿವಾಗದ ರೀತಿ ನೋಡಿಕೊಳ್ಳುತ್ತದೆ. ಹಾಗೆಯೇ ಸ್ಥೂಲಕಾಯ ಮತ್ತು ಮಧುಮೇಹ ಕಾಯಿಲೆ ಬಾರದಂತೆ ನೋಡಿಕೊಳ್ಳುತ್ತದೆ. ಪ್ರತಿನಿತ್ಯ ಹೆಸರು ಕಾಳನ್ನು ತಿನ್ನುವುದರಿಂದ ತ್ವಚೆಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಅಲ್ಲದೆ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಇದರಿಂದ ಆಕರ್ಷಕ ಸೌಂದರ್ಯವನ್ನು ಕೂಡ ನೀವು ಪಡೆಯಬಹುದು.

ದುಬಾರಿ ಔಷಧಿಗಳ ಮೊರೆ ಹೋಗುವ ಬದಲು ಮೊಳಕೆ ಬಂದ ಕಾಳನ್ನು ಸೇವನೆ ಮಾಡುವುದು ಉತ್ತಮ. ಹೀಗಾಗಿ ಮೊಳಕೆ ಬಂದ ಕಾಳನ್ನು ಸೇವಿಸಿ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದು ಒಳಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…

  • ಕರ್ನಾಟಕ

    ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

    ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ದೇವರ ಕೃಪೆಯಿಂದ ಈ ರಾಶಿಗಳಿಗೆ ಇಂದು ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗೂ ಧನ ಲಾಭ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….

  • ಆಧ್ಯಾತ್ಮ, ಜ್ಯೋತಿಷ್ಯ

    ದೀಪಾವಳಿ ಹಬ್ಬದ ಆರಂಭದೊಂದಿಗೆ 28-10-19 ರಿಂದ 4-11-19 ಈ ರಾಶಿಯವರಿಗೆ ರಾಜಯೋಗ ಶುರುವಾಗಲಿದೆ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ  ಇಂದು ಆರೋಗ್ಯ…