ಸುದ್ದಿ

ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

1093

ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ ಇತ್ತು. ಫೈಟ್ ಅನ್ನು ಇಷ್ಟ ಪಡುವ ಪ್ರಭಾಕರ್ ಅದ್ಭುತವಾಗಿ ಫೈಟ್ ಮಾಡೋದು ಇನ್ನೊಂದು ವಿಶೇಷ. ತನಗೂ ಸೇರಿದಂತೆ ಹಲವಾರು ಸ್ಟಾರ್ ಗಳಿಗೂ ಫೈಟ್ ಅನ್ನು ಕಂಪೋಸ್ ಮಾಡುತ್ತಿದ್ದರು. ತನ್ನ 14ನೇ ವಯಸ್ಸಿನಲ್ಲಿಯೇ ಬಾಕ್ಸರ್ ಅನ್ನು ಎರಡು ಬಾರಿ ನೆಲಕ್ಕೆ ಕೆಡುವಿಹಿದ ಬಲಿಷ್ಠ ದೇಹಿ ಅವರಾಗಿದ್ದರು.

ಸುಮಾರು ನಾಲ್ಕು ದಶಕಗಳ ಹಿಂದೆ ಪ್ರಭಾಕರ್ ಕನ್ನಡ ಸಿನಿಮಾ ರಂಗದಲ್ಲಿ ಸ್ಟಂಟ್ ಮ್ಯಾನ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಹೀಗೆ ಸ್ಟಂಟ್ ಮಾಸ್ಟರ್ ಆಗಿ ಖ್ಯಾತರಾಗಿದ್ದರು. ತನ್ನ ಫೈಟ್ಸ್ ನೋಡಲಿಕ್ಕಾಗಿಯೇ ಪ್ರೇಕ್ಷಕರು ತನ್ನ ಸಿನಿಮಾ ನೋಡಲು ಬರುತ್ತಾರೆ ಎಂಬ ಹೆಮ್ಮೆ ಪ್ರಭಾಕರ್ ಅವರಿಗೆ ಇತ್ತಂತೆ. ಅವೆಲ್ಲಕ್ಕಿಂತ ಹೆಚ್ಚಾಗಿ ಪ್ರಭಾಕರ್ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಎಲ್ಲಾ ಫೈಟ್ ದೃಶ್ಯಗಳನ್ನು ತಾನೇ ಖುದ್ದಾಗಿ ಮಾಡುತ್ತಿದ್ದರು. ಇದರಿಂದಾಗಿಯೇ ತಾನು ಇಂದು ಸೋತು ಹೋದ ವ್ಯಕ್ತಿಯಾಗಿದ್ದೇನೆ. ನನ್ನೆಲ್ಲಾ ಮುರಿದ ಮೂಳೆಗಳು ಸರ್ಜರಿಯಲ್ಲಿ ನಿಂತಿವೆ ಎಂದು ಸಂದರ್ಶನವೊಂದರಲ್ಲಿ ಪ್ರಭಾಕರ್ ಹೇಳಿದ್ದರು.

ಟೈಗರ್ ಪ್ರಭಾಕರ್ ಖಳನಟ, ನಿರ್ದೇಶಕ, ನಿರ್ಮಾಪಕ, ಹೀರೋ ಎಲ್ಲಕ್ಕಿಂತ ಹೆಚ್ಚಾಗಿ ಅವರೊಬ್ಬ ಹೃದಯವಂತ ವ್ಯಕ್ತಿ. ಕನ್ನಡ, ತೆಲುಗು, ತಮಿಳು ಸೇರಿ 450 ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುತೇಕರಿಂದ ಮೋಸಕ್ಕೊಳಗಾಗಿದ್ದ ವ್ಯಕ್ತಿ ಟೈಗರ್. ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಅನೇಕ ಕಲಾವಿದರಿಗೆ, ಅನಾಥಾಶ್ರಮಗಳಿಗೆ, ಸಂಘ, ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದರು. ಬೈಕ್ ಅಪಘಾತದ ಬಳಿಕ ಪ್ರಭಾಕರ್ ಆರೋಗ್ಯ ಹದಗೆಡ ತೊಡಗಿತ್ತು..ನಿಧಾನಕ್ಕೆ ಸ್ಟಾರ್ ವ್ಯಾಲ್ಯೂ ಕೂಡಾ ಕಡಿಮೆಯಾಗತೊಡಗಿತ್ತು.

ಅಧಿಕೃತವಾಗಿ ಮೂರು ಮದುವೆಯಾಗಿದ್ದ ಟೈಗರ್ ಗೆ ಇಬ್ಬರು ಪುತ್ರಿಯರು ಭಾರತಿ ಮತ್ತು ಗೀತಾ ಹಾಗೂ ಪುತ್ರ ವಿನೋದ್(ಮೊದಲ ಹೆಂಡತಿ ಮಕ್ಕಳು), 2ನೇ ವಿವಾಹವಾಗಿದ್ದು ನಟಿ ಜಯಮಾಲಾ ಜೊತೆ. ಇವರಿಗೆ ಸೌಂದರ್ಯ ಎಂಬ ಮಗಳು ಹುಟ್ಟಿದ್ದಳು. ಮೂರನೆಯ ಮದುವೆ ಅಂಜು ಜೊತೆ..ಈಕೆಗೆ ಅರ್ಜುನ್ ಎಂಬ ಮಗ ಜನಿಸಿದ್ದ. 2 ಮದುವೆಗಳು ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ತಾನೇನಿದ್ದರೂ ನೇರವಾಗಿ ಮಾತನಾಡುವ ಮನುಷ್ಯ ಎಂದೇ ಹೇಳಿಕೊಳ್ಳುತ್ತಿದ್ದ ಪ್ರಭಾಕರ್ ಅದೇ ರೀತಿ ಬದುಕಿದ್ದರು. ತನ್ನ ವೈಯಕ್ತಿಕ ಸೇರಿದಂತೆ ಎಲ್ಲಾ ವಿಚಾರವನ್ನು ಮುಚ್ಚಿಡದೇ ಹೇಳುತ್ತಿದ್ದ ನಟ ಅವರಾಗಿದ್ದರು. ವಿಪರ್ಯಾಸ ಎಂಬಂತೆ ಟೈಗರ್ ಕೊನೆಗಾಲದಲ್ಲಿ ಅವರ ಜೊತೆ ಮಗ ವಿನೋದ್ ಬಿಟ್ಟರೆ ಬೇರೆ ಯಾರೂ ಇರಲಿಲ್ಲವಾಗಿತ್ತು. ತನಗೆ ಎಲ್ಲಾ ಮೋಸ ಮಾಡಿಬಿಟ್ಟರು ಎಂಬುದಾಗಿ ಕೊನೆಯ ದಿನಗಳಲ್ಲಿ ಮಗನ ಜೊತೆ ಟೈಗರ್ ಹೇಳಿಕೊಂಡಿದ್ದರಂತೆ. ಕೊನೆಗೆ 1948ರಲ್ಲಿ ಜನಿಸಿದ್ದ ಟೈಗರ್ ಬಹುಅಂಗಾಂಗ ವೈಫಲ್ಯದಿಂದ ತನ್ನ 52ನೇ ವಯಸ್ಸಿನಲ್ಲಿ (2001ರ ಮಾರ್ಚ್ 25ರಂದು ) ವಿಧಿವಶರಾಗಿದ್ದರು. ಸುಮಾರು ನಾಲ್ಕು ವರ್ಷಗಳ ಬಳಿಕ ಟೈಗರ್ ನಿರ್ದೇಶಿಸಿದ್ದ ಗುಡ್ ಬ್ಯಾಡ್ ಅಂಡ್ ಅಗ್ಲಿ ಸಿನಿಮಾ ತೆರೆಕಂಡಿತ್ತು..ಅದು ಪ್ರಭಾಕರ್ ಅವರ ಬದುಕು ಮತ್ತು ಅಂತ್ಯಕ್ಕೆ ಮುನ್ನುಡಿ ಬರೆದಂತೆ ಇತ್ತು..ಇವೆಲ್ಲದರ ನಡುವೆ ಟೈಗರ್ ಇನ್ನೂ ಚಿತ್ರರಸಿಕರ ಮನದಲ್ಲಿ ಉಳಿದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

    ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…

  • ಜ್ಯೋತಿಷ್ಯ

    ಆದಿ ಪರಾಶಕ್ತಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…

  • ಸುದ್ದಿ

    ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ ಭಾರತವನ್ನು ಸರ್ವನಾಶ ಮಾಡಲಿ’ ಗದಗ್ ಯುವಕನ ಪೋಸ್ಟ್.

    ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…

  • ದೇಶ-ವಿದೇಶ

    ಇದು ಭಾರತದ ಮಿನಿ ಇಸ್ರೇಲ್! ಆದ್ರೆ ಇಲ್ಲಿ ನಮ್ಮ ಭಾರತೀಯರಿಗೆ ಪ್ರವೇಶವಿಲ್ಲ !!!

    ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.

  • ಉಪಯುಕ್ತ ಮಾಹಿತಿ

    ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

    ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…

  • ಮನರಂಜನೆ

    ಕಿಶನ್ ಕಣ್ಣೀರು ಹಾಕ್ತಿದ್ದಂತೆ, ವೇದಿಕೆ ಮೇಲೆ ಸ್ಪೆಷಲ್ ಗಿಫ್ಟ್ ನೀಡಿದ ಕಿಚ್ಚ.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್‍ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್‍ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್‍ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….