ಸುದ್ದಿ

ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

1146

ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ ಇತ್ತು. ಫೈಟ್ ಅನ್ನು ಇಷ್ಟ ಪಡುವ ಪ್ರಭಾಕರ್ ಅದ್ಭುತವಾಗಿ ಫೈಟ್ ಮಾಡೋದು ಇನ್ನೊಂದು ವಿಶೇಷ. ತನಗೂ ಸೇರಿದಂತೆ ಹಲವಾರು ಸ್ಟಾರ್ ಗಳಿಗೂ ಫೈಟ್ ಅನ್ನು ಕಂಪೋಸ್ ಮಾಡುತ್ತಿದ್ದರು. ತನ್ನ 14ನೇ ವಯಸ್ಸಿನಲ್ಲಿಯೇ ಬಾಕ್ಸರ್ ಅನ್ನು ಎರಡು ಬಾರಿ ನೆಲಕ್ಕೆ ಕೆಡುವಿಹಿದ ಬಲಿಷ್ಠ ದೇಹಿ ಅವರಾಗಿದ್ದರು.

ಸುಮಾರು ನಾಲ್ಕು ದಶಕಗಳ ಹಿಂದೆ ಪ್ರಭಾಕರ್ ಕನ್ನಡ ಸಿನಿಮಾ ರಂಗದಲ್ಲಿ ಸ್ಟಂಟ್ ಮ್ಯಾನ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಹೀಗೆ ಸ್ಟಂಟ್ ಮಾಸ್ಟರ್ ಆಗಿ ಖ್ಯಾತರಾಗಿದ್ದರು. ತನ್ನ ಫೈಟ್ಸ್ ನೋಡಲಿಕ್ಕಾಗಿಯೇ ಪ್ರೇಕ್ಷಕರು ತನ್ನ ಸಿನಿಮಾ ನೋಡಲು ಬರುತ್ತಾರೆ ಎಂಬ ಹೆಮ್ಮೆ ಪ್ರಭಾಕರ್ ಅವರಿಗೆ ಇತ್ತಂತೆ. ಅವೆಲ್ಲಕ್ಕಿಂತ ಹೆಚ್ಚಾಗಿ ಪ್ರಭಾಕರ್ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಎಲ್ಲಾ ಫೈಟ್ ದೃಶ್ಯಗಳನ್ನು ತಾನೇ ಖುದ್ದಾಗಿ ಮಾಡುತ್ತಿದ್ದರು. ಇದರಿಂದಾಗಿಯೇ ತಾನು ಇಂದು ಸೋತು ಹೋದ ವ್ಯಕ್ತಿಯಾಗಿದ್ದೇನೆ. ನನ್ನೆಲ್ಲಾ ಮುರಿದ ಮೂಳೆಗಳು ಸರ್ಜರಿಯಲ್ಲಿ ನಿಂತಿವೆ ಎಂದು ಸಂದರ್ಶನವೊಂದರಲ್ಲಿ ಪ್ರಭಾಕರ್ ಹೇಳಿದ್ದರು.

ಟೈಗರ್ ಪ್ರಭಾಕರ್ ಖಳನಟ, ನಿರ್ದೇಶಕ, ನಿರ್ಮಾಪಕ, ಹೀರೋ ಎಲ್ಲಕ್ಕಿಂತ ಹೆಚ್ಚಾಗಿ ಅವರೊಬ್ಬ ಹೃದಯವಂತ ವ್ಯಕ್ತಿ. ಕನ್ನಡ, ತೆಲುಗು, ತಮಿಳು ಸೇರಿ 450 ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುತೇಕರಿಂದ ಮೋಸಕ್ಕೊಳಗಾಗಿದ್ದ ವ್ಯಕ್ತಿ ಟೈಗರ್. ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಅನೇಕ ಕಲಾವಿದರಿಗೆ, ಅನಾಥಾಶ್ರಮಗಳಿಗೆ, ಸಂಘ, ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದರು. ಬೈಕ್ ಅಪಘಾತದ ಬಳಿಕ ಪ್ರಭಾಕರ್ ಆರೋಗ್ಯ ಹದಗೆಡ ತೊಡಗಿತ್ತು..ನಿಧಾನಕ್ಕೆ ಸ್ಟಾರ್ ವ್ಯಾಲ್ಯೂ ಕೂಡಾ ಕಡಿಮೆಯಾಗತೊಡಗಿತ್ತು.

ಅಧಿಕೃತವಾಗಿ ಮೂರು ಮದುವೆಯಾಗಿದ್ದ ಟೈಗರ್ ಗೆ ಇಬ್ಬರು ಪುತ್ರಿಯರು ಭಾರತಿ ಮತ್ತು ಗೀತಾ ಹಾಗೂ ಪುತ್ರ ವಿನೋದ್(ಮೊದಲ ಹೆಂಡತಿ ಮಕ್ಕಳು), 2ನೇ ವಿವಾಹವಾಗಿದ್ದು ನಟಿ ಜಯಮಾಲಾ ಜೊತೆ. ಇವರಿಗೆ ಸೌಂದರ್ಯ ಎಂಬ ಮಗಳು ಹುಟ್ಟಿದ್ದಳು. ಮೂರನೆಯ ಮದುವೆ ಅಂಜು ಜೊತೆ..ಈಕೆಗೆ ಅರ್ಜುನ್ ಎಂಬ ಮಗ ಜನಿಸಿದ್ದ. 2 ಮದುವೆಗಳು ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ತಾನೇನಿದ್ದರೂ ನೇರವಾಗಿ ಮಾತನಾಡುವ ಮನುಷ್ಯ ಎಂದೇ ಹೇಳಿಕೊಳ್ಳುತ್ತಿದ್ದ ಪ್ರಭಾಕರ್ ಅದೇ ರೀತಿ ಬದುಕಿದ್ದರು. ತನ್ನ ವೈಯಕ್ತಿಕ ಸೇರಿದಂತೆ ಎಲ್ಲಾ ವಿಚಾರವನ್ನು ಮುಚ್ಚಿಡದೇ ಹೇಳುತ್ತಿದ್ದ ನಟ ಅವರಾಗಿದ್ದರು. ವಿಪರ್ಯಾಸ ಎಂಬಂತೆ ಟೈಗರ್ ಕೊನೆಗಾಲದಲ್ಲಿ ಅವರ ಜೊತೆ ಮಗ ವಿನೋದ್ ಬಿಟ್ಟರೆ ಬೇರೆ ಯಾರೂ ಇರಲಿಲ್ಲವಾಗಿತ್ತು. ತನಗೆ ಎಲ್ಲಾ ಮೋಸ ಮಾಡಿಬಿಟ್ಟರು ಎಂಬುದಾಗಿ ಕೊನೆಯ ದಿನಗಳಲ್ಲಿ ಮಗನ ಜೊತೆ ಟೈಗರ್ ಹೇಳಿಕೊಂಡಿದ್ದರಂತೆ. ಕೊನೆಗೆ 1948ರಲ್ಲಿ ಜನಿಸಿದ್ದ ಟೈಗರ್ ಬಹುಅಂಗಾಂಗ ವೈಫಲ್ಯದಿಂದ ತನ್ನ 52ನೇ ವಯಸ್ಸಿನಲ್ಲಿ (2001ರ ಮಾರ್ಚ್ 25ರಂದು ) ವಿಧಿವಶರಾಗಿದ್ದರು. ಸುಮಾರು ನಾಲ್ಕು ವರ್ಷಗಳ ಬಳಿಕ ಟೈಗರ್ ನಿರ್ದೇಶಿಸಿದ್ದ ಗುಡ್ ಬ್ಯಾಡ್ ಅಂಡ್ ಅಗ್ಲಿ ಸಿನಿಮಾ ತೆರೆಕಂಡಿತ್ತು..ಅದು ಪ್ರಭಾಕರ್ ಅವರ ಬದುಕು ಮತ್ತು ಅಂತ್ಯಕ್ಕೆ ಮುನ್ನುಡಿ ಬರೆದಂತೆ ಇತ್ತು..ಇವೆಲ್ಲದರ ನಡುವೆ ಟೈಗರ್ ಇನ್ನೂ ಚಿತ್ರರಸಿಕರ ಮನದಲ್ಲಿ ಉಳಿದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ 5 ಸಂಚಿಕೆಯ ಎಲ್ಲಾ ಸ್ಪರ್ಧಿಗಳು ವಾರಕ್ಕೆ ಗಳಿಸುತ್ತಿದ್ದ ಸಂಭಾವನೆ ಎಷ್ಟು ಗೊತ್ತಾ..?ಯಾರಿಗೆ ಹೆಚ್ಚು, ಯಾರಿಗೆ ಅತೀ ಕಡಿಮೆ..ತಿಳಿಯಲು ಇದನ್ನು ಓದಿ…

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…

  • ಜ್ಯೋತಿಷ್ಯ

    ರೈತರ ಗಮನಕ್ಕೆ: ‘ಕಿಸಾನ್ ಸಮ್ಮಾನ್’ ಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ

    ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…