ಆರೋಗ್ಯ

ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

126

ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.
ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.
ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು ಎಂಬುದನ್ನು ತಜ್ಞರು ಹೇಳಿದ್ದಾರೆ ನೋಡಿ.

1. ಚಳಿಗಾಲದಲ್ಲಿ ಆಗಾಗ ಏನಾದರೂ ತಿನ್ನುತ್ತಿದ್ದರೆ ದೇಹ ಬೆಚ್ಚಗಿರುತ್ತದೆ.
ಇದೊಂದು ಶುದ್ಧ ತಪ್ಪು ಕಲ್ಪನೆ ಎಂದು ಹೇಳುತ್ತಾರೆ ಪೌಷ್ಟಿಕತಜ್ಞರು. ಚಳಿಗಾಲ ಬಂತೆಂದರೆ ಸಾಕು, ಜಾಸ್ತಿ ಆಹಾರ ಸೇವಿಸಿ. ಆಗಾಗ ಏನಾದರೂ ಸ್ವಲ್ಪ ತಿನ್ನುತ್ತಿರಿ. ಇದರಿಂದ ದೇಹ ಬೆಚ್ಚಗಿರುತ್ತದೆ. ಅನಾರೋಗ್ಯಕ್ಕೆ ಒಳಗಾಗುವುದೂ ತಪ್ಪುತ್ತದೆ ಎಂದು ಮನೆಯಲ್ಲಿ ಹಿರಿಯರು, ಪಾಲಕರು ಹೇಳುವುದನ್ನು ಕೇಳಿದ್ದೇವೆ.
ಆದರೆ ತಜ್ಞರು ಹೇಳುವ ಪ್ರಕಾರ, ಹೀಗೆ ಪದೇಪದೆ ತಿನ್ನುವುದರಿಂದ ದೇಹದ ತೂಕ ಹೆಚ್ಚುತ್ತದೆ ಹೊರತು ಬೇರೇನೂ ಉಪಯೋಗ ಆಗುವುದಿಲ್ಲ. ಅದರ ಬದಲಾಗಿದೆ ಚಳಿಗಾಲದಲ್ಲಿ ಸರಿಯಾದ ಕ್ರಮದಲ್ಲಿ ಡಯಟ್​ ಮಾಡುವ ಮೂಲಕ ಕಾಯಿಲೆ ಬರುವುದನ್ನು ತಡೆಗಟ್ಟಬಹುದು. ಹಾಗಾಗಿ ಆಗಾಗ ಏನಾದರೂ ಆಹಾರ ಸೇವನೆ ಮಾಡುವುದರಿಂದ ಏನೂ ಉಪಯೋಗವಿಲ್ಲ.

2. ಮಸಾಲೆಯುಕ್ತ ಆಹಾರ ಸೇವನೆ ದೇಹವನ್ನು ಬೆಚ್ಚಗಿಡುತ್ತದೆ.
ಮಸಾಲೆಯುಕ್ತ, ಖಾರ, ಸ್ಪೈಸಿ ಆಹಾರಗಳ ಸೇವನೆಯಿಂದ ಖಂಡಿತ ಮೈ ಬೆವರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿರುವ ಆಹಾರ ಸೇವನೆಯಿಂದ ದೇಹದ ಉಷ್ಣತೆ ಹೆಚ್ಚಾಗಿ ನಾವು ಚಳಿಯಿಂದ ಪಾರಾಗಬಹುದು ಎಂದುಕೊಂಡಿದ್ದರೆ ಅದು ದೊಡ್ಡ ತಪ್ಪು.
ಆಹಾರ ತಜ್ಞರ ಪ್ರಕಾರ, ಮಸಾಲೆಯುಕ್ತ ಸ್ಪೈಸಿ ಆಹಾರಗಳು ನಮ್ಮ ದೇಹದ ಉಷ್ಣತೆಯ ಮೇಲೆ ಯಾವುದೇ ಗುರುತರ ಪ್ರಭಾವವನ್ನೂ ಬೀರುವುದಿಲ್ಲ. ಅದನ್ನು ತಿಂದ ಕ್ಷಣಕ್ಕೆ ಖಾರದಿಂದ ಮೈ ಬಿಸಿಯಾಗಬಹುದು. ಬೆವರಬಹುದು. ಆದರೆ ನಂತರ ಏನೂ ಪ್ರಯೋಜನವಿಲ್ಲ.

3. ನೀವು ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಸಿಟ್ರಸ್ ಹಣ್ಣುಗಳನ್ನು ತಿನ್ನಬಾರದು
ಯಾರಾದರೂ ಹೀಗೆ ಹೇಳಿದರೆ ಅದನ್ನು ಕೇಳಲೇಬೇಡಿ ಎನ್ನುತ್ತಾರೆ ತಜ್ಞರು.

ಕಿತ್ತಳೆ, ಲಿಂಬುವಿನಂತಹ ಸಿಟ್ರಸ್​​ ಹಣ್ಣುಗಳು ಚಳಿಗಾಲದಲ್ಲಿ ದೇಹಕ್ಕೆ ಅತ್ಯವಶ್ಯಕ. ವಿಟಮಿನ್​ ಸಿಯನ್ನು ಹೇರಳವಾಗಿ ಹೊಂದಿರುವ ಈ ಹಣ್ಣುಗಳಲ್ಲಿ ನೀರಿನ ಅಂಶವೂ ಹೆಚ್ಚಾಗಿರುತ್ತದೆ.
ಕಿತ್ತಳೆಗಳು ಚಳಿಗಾಲದ ಹಣ್ಣುಗಳು. ಅವು ಚಳಿಗಾದಲ್ಲಿ ಸಿಗುತ್ತವೆ ಎಂದರೆ ಆ ಸಮಯದಲ್ಲಿಯೇ ನಮ್ಮ ದೇಹಕ್ಕೆ ಬೇಕು ಎಂದರ್ಥ. ಕೆಮ್ಮು, ನೆಗಡಿಯಾದಾಗ ಕಿತ್ತಳೆ, ಲಿಂಬು ಹಣ್ಣುಗಳ ಸೇವನೆ ಮಾಡಬೇಕು. ನಮ್ಮೊಳಗಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಅಲ್ಲದೆ ಪೌಷ್ಟಿಕಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಕಟ್ಟಿಕೊಂಡ ಕಫವನ್ನು ಸಡಿಲಗೊಳಿಸುತ್ತವೆ ಹಾಗೂ ಶೀತವನ್ನು ತೊಡೆದುಹಾಕುತ್ತದೆ ಎಂದು ನ್ಯೂಟ್ರಿಷಿಯನಿಸ್ಟ್​ ಹೇಳುತ್ತಾರೆ.

4. ಡೇರಿ ಉತ್ಪನ್ನಗಳಿಂದ ದೂರವಿರಿ
ಈ ಮಾತನ್ನು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಮೊದಲೇ ಚಳಿ ಇರುತ್ತದೆ. ಶೀತ, ಕೆಮ್ಮು, ಜ್ವರ, ಕಫ ಇರುತ್ತದೆ. ಹೀಗಿರುವಾಗ ಡೇರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪಗಳ ಸೇವನೆಯಿಂದ ಮತ್ತಷ್ಟು ಕಫ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಬಹುತೇಕರ ನಂಬಿಕೆ. ಆದರೆ ನಿಜಕ್ಕೂ ಹಾಗೇನೂ ಆಗುವುದಿಲ್ಲ ಎಂಬುದನ್ನು ಆಹಾರತಜ್ಞರು ಪತ್ತೆಹಚ್ಚಿದ್ದಾರೆ.
ಚಳಿಗಾಲದಲ್ಲಿ ರಾತ್ರಿ ವೇಳೆ ಬಿಸಿ ಹಾಲಿಗೆ ಸ್ವಲ್ಪ ಕೇಸರಿ ಬೆರಸಿ ಕುಡಿಯುವುದು ತುಂಬ ಉತ್ತಮ. ಹಾಲಿನ ಉತ್ಪನ್ನಗಳನ್ನು ಹಿತಮಿತವಾಗಿ ಸೇವಿಸುವುದರಿಂದ ಪೋಷಕಾಂಶ ಸಿಗುತ್ತದೆ ಎಂದು ಹೇಳಿದ್ದಾರೆ.

5.ಚಳಿಗಾಲದಲ್ಲಿ ವಿಟಮಿನ್​ ಸಪ್ಲಿಮೆಂಟ್ಸ್​ ತೀರ ಅಗತ್ಯ
ವಿಟಮಿನ್​ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದೇ. ಆದರೆ ಉಳಿದ ಕಾಲಗಳಿಗಿಂತ ಚಳಿಗಾಲದಲ್ಲೇ ತೆಗೆದುಕೊಳ್ಳಬೇಕು ಎಂಬುದು ತಪ್ಪು ಅಭಿಪ್ರಾಯ.
ಒಬ್ಬ ಮನುಷ್ಯ ತನ್ನ ದೇಹಕ್ಕೆ ಬೇಕಾದ ವಿಟಮಿನ್​ಗಳನ್ನು ಪಡೆಯಲು ಸಮತೋಲನಯುಕ್ತ ಡಯಟ್​ ಮಾಡುವುದು ಉತ್ತಮ. ಸುಮ್ಮನೆ ತೆಗೆದುಕೊಳ್ಳುವ ಅನಗತ್ಯ ಸಪ್ಲಿಮೆಂಟ್ಸ್​ಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…

  • ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರುವ ಮೆಕ್ಕೆಜೋಳದ ರೇಷ್ಮೆಯ ಉಪಯೋಗಗಳು..!ತಿಳಿಯಲು ಈ ಲೇಖನ ಓದಿ…

    ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.

  • ಸುದ್ದಿ

    ಕಾಡಂದಿಯ ಹೊಟ್ಟೆಯಲ್ಲಿ ಸಿಕ್ಕ ಈ ವಸ್ತುವಿನಿಂದ ಕೋಟ್ಯಾಧಿಪತಿ ಆದ ರೈತ, ಅದು ಹೇಗೆ?

    ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಸುದ್ದಿ

    ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

    ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…

  • ವಿಚಿತ್ರ ಆದರೂ ಸತ್ಯ

    ಒಂದೇ ದಿನದಲ್ಲಿ 36 ಮೊಟ್ಟೆ ಇಟ್ಟ ಕೋಳಿ..!ಇದು ನಿಜ…ನಂಬಲೇಬೇಕು…ಶಾಕ್ ಆಗ್ಬೇಡಿ ಮುಂದೆ ಓದಿ…

    ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್‌ಗೇಟ್‌ನಲ್ಲಿರುವ ಹುಝೂರಿ ಛೋಟಾ ಪಾರ್ಕ್‌ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.