ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ.
ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ ಅಪಾಯ ಕಟ್ಟಿಟ್ಟಬುತ್ತಿ. ಆಹಾರಗಳ ಮೇಲೆ ಜಿರಳೆಗಳು ಓಡಾಡುವುದರಿಂದ ಫುಡ್ ಪಾಯಿಸನ್ ಹಾಗೂ ಇನ್ನಿತರ ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

ಸಾಮಾನ್ಯವಾಗಿ ಜಿರಳೆಗಳು ತೇವಾಂಶ ಮತ್ತು ಕತ್ತಲೆಯಲ್ಲಿ ಬಹಳ ವೇಗವಾಗಿ ಮತ್ತು ಸುಲಭವಾಗಿ ಸಂತಾನೋತ್ಪತಿ ಮಾಡಿಕೊಳ್ಳುತ್ತವೆ. ಅವುಗಳನ್ನು ತೊಡೆದುಹಾಕುವುದು ಕೂಡ ಅಷ್ಟು ಸುಲಭವಲ್ಲ. ಏಕೆಂದರೆ ಇಂದಿನ ಮಾಡ್ಯುಲರ್ ಅಡಿಗೆ ಮನೆಗಳಲ್ಲಿ ಅವರು ಸಾಕಷ್ಟು ಮರೆಮಾಚುವ ಸ್ಥಳಗಳನ್ನು ಕೀಟಗಳು ಬಹಳ ಸುಲಭವಾಗಿ ವಾಸಸ್ಥಾನವಾಗಿಸುತ್ತದೆ. ಕತ್ತಲೆ ಹೊಂದಿರುವ ಜಾಗ ಮತ್ತು ನೀರಿನ ಸಿಂಕ್ನಿಂದ ತೇವಾಂಶ ಹೊಂದಿರುವ ಸ್ಥಳಗಳು ಜಿರಳೆಗಳಿಗೆ ಅನುಕೂಲಕರವಾಗಿರುತ್ತದೆ.
ಜಿರಳೆಗಳನ್ನು ಹೋಗಲಾಡಿಸಲು ಮಾರುಕಟ್ಟೆಯಲ್ಲಿ ಅನೇಕ ಕೀಟನಾಶಕಗಳಿದ್ದರೂ, ಅವುಗಳ ಬಳಕೆಯಿಂದ ನಿಮಗೆ ಅಥವಾ ನಿಮ್ಮ ಮಕ್ಕಳಿಗೆ ಅಲರ್ಜಿಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಆದ್ದರಿಂದ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಅವುಗಳನ್ನು ಹೇಗೆ ತೊಡೆದುಹಾಕಬೇಕು ಎಂದು ನಾವು ನಿಮಗೆ ತಿಳಿಸುತ್ತೇವೆ.

ಬೇವಿನ ಎಲೆಗಳ ಬಳಕೆ : ಅಡುಗೆಮನೆಯಲ್ಲಿ ಜಿರಳೆಗಳನ್ನು ಹೋಗಲಾಡಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಬೇವಿನ ಎಲೆಗಳ ಬಳಕೆ. ಅಡುಗೆಮನೆಯ ವಿವಿಧ ಮೂಲೆಗಳಲ್ಲಿ ಬೇವಿನ ಎಲೆಗಳನ್ನು ಅರೆದು ಇಟ್ಟುಬಿಡಿ. ಇದರ ಸುಗಂಧದಿಂದ ಜಿರಳೆಗಳು ಓಡಿಹೋಗುತ್ತವೆ. ಹಾಗೆಯೇ ಇದನ್ನು ಬದಲಾಯಿಸುತ್ತಿದ್ದರೆ ಜಿರಳೆಗಳು ಸಮಸ್ಯೆ ಇರುವುದಿಲ್ಲ.
ಲವಂಗಗಳ ಬಳಕೆ : ಲವಂಗವನ್ನು ಕಿಚನ್ ಡ್ರಾಯರ್ಗಳಲ್ಲಿ ಇರಿಸಿದರೂ ಜಿರಲೆಗಳು ಬರುವುದಿಲ್ಲ. ಇದರ ವಾಸನೆಯಿಂದ ಜಿರಳೆಗಳು ಹೊರ ಹೋಗುತ್ತವೆ. ವಾರಕ್ಕೊಮ್ಮೆ ಜಿರಳೆಗಳಿರುವ ಜಾಗದಲ್ಲಿ ಲವಂಗವನ್ನು ಇರಿಸುವುದರಿಂದ ಕೀಟಗಳ ತೊಂದರೆಯನ್ನು ದೂರ ಮಾಡಬಹುದು.

ಬೋರಿಕ್ ಪೌಡರ್ ಮತ್ತು ಸಕ್ಕರೆಯ ಮಿಶ್ರಣ : ಬೋರಿಕ್ ಪುಡಿ ಮತ್ತು ಸಕ್ಕರೆಯನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಜಿರಲೆಗಳಿರುವ ಮೂಲೆಗಳಲ್ಲಿ ಇರಿಸಿ. ವಿಶೇಷವಾಗಿ ಹೆಚ್ಚು ಕತ್ತಲೆ ಮತ್ತು ತೇವಾಂಶ ಇರುವ ಸ್ಥಳಗಳಲ್ಲಿ ಈ ಮಿಶ್ರಣವನ್ನು ಹಾಕಿದರೆ ಜಿರಲೆಗಳು ಓಡಿ ಹೋಗುತ್ತವೆ.
ಬೇವಿನ ಬಳಕೆ : ಬೇವು ಮತ್ತು ಅದರ ಎಲೆಗಳು ಅನೇಕ ಸಮಸ್ಯೆಗಳಿಗೆ ರಾಮಬಾಣ. ಹಾಗೆಯೇ ಜಿರಳೆಗಳನ್ನು ತೊಡೆದುಹಾಕಲು ನೀವು ಬೇವಿನ ಎಣ್ಣೆ ಅಥವಾ ಪುಡಿ ಎರಡನ್ನೂ ಬಳಸಬಹುದು. ರಾತ್ರಿಯ ವೇಳೆ ಅಡುಗೆಮನೆಯಲ್ಲಿ ಮತ್ತು ಒದ್ದೆಯಾದ ಸ್ಥಳದಲ್ಲಿ ಬೇವಿನ ಎಣ್ಣೆ ಅಥವಾ ಪುಡಿಯನ್ನು ಹಾಕಿದರೆ ಜಿರಲೆಗಳು ಬರುವುದಿಲ್ಲ. ದಿನ ಕಳೆದಂತೆ ಇದೇ ಕ್ರಮವನ್ನು ಪುನರಾವರ್ತಿಸುತ್ತಿದ್ದರೆ ಜಿರಲೆ ಸಮಸ್ಯೆ ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…