ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ ನಂಬರ್ ಒಂದು ಹಣ್ಣು ಎಂದರೆ ಬಾಳೆಹಣ್ಣು ಎಂದು ಹೇಳಿದರೆ ಅಚ್ಚರಿಪಡಬೇಕಾಗಿಲ್ಲ. ಸರ್ವಕಾಲದಲ್ಲಿ ಲಭ್ಯ, ಅಗ್ಗ ಹಾಗೂ ಸುಲಭವಾಗಿ ಜೀರ್ಣಿಸಿಕೊಳ್ಳಬಲ್ಲ ಹಣ್ಣು ಎಂದರೆ ಬಾಳೆಹಣ್ಣು. ಅದರಲ್ಲೂ ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಟ್ಯೂಮರ್ ನೆಕ್ರೋಸಿಸ್ ಫ್ಯಾಕ್ಟರ್ (ಟಿಎನ್ಎಫ್) ಎಂಬ ಪೋಷಕಾಂಶವಿದ್ದು ಇವು ಕ್ಯಾನ್ಸರ್ ಗೆಡ್ಡೆಗಳನ್ನು ನಾಶಪಡಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಇನ್ನು ಸಾಮಾನ್ಯವಾಗಿ ನೀವು ಬಾಳೆಹಣ್ಣನ್ನು ತಿನ್ನುವಾಗ ಅದರ ಸಿಪ್ಪೆ ಮೇಲೆ ಚುಕ್ಕೆಗಳನ್ನು ನೋಡಿರಬಹುದು, ಈ ಸಿಪ್ಪೆಗಳು ಹೇಗೆ ನಮ್ಮ ಆರೋಗ್ಯಕ್ಕೆ ಲಾಭಕಾರಕ ಎನ್ನುವುದನ್ನು ಎಂದಾದರೂ ಯೋಚಿಸಿದ್ದೀರಾ, ಹಾಗಾದರೆ ಚುಕ್ಕೆ ಇರುವ ಬಾಳೆ ಹಣ್ಣು ನಮ್ಮ ದೇಹಕ್ಕೆ ಹೇಗೆ ಆರೋಗ್ಯಕರ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮಾ ಅನಿಸಿಕೆಯನ್ನ ನಮಗೆ ತಿಳಿಸಿ. ಚುಕ್ಕೆಗಳು ಗಾಢ ಮತ್ತು ಅಗಲವಾಗಿದ್ದಷ್ಟೂ ಬಾಳೆಹಣ್ಣು ಹೆಚ್ಚು ಹೆಚ್ಚು ಹಣ್ಣಾಗುತ್ತಾ ಬಂದಿದೆ ಎಂದು ತಿಳಿದುಕೊಳ್ಳಬಹುದು, ಚುಕ್ಕೆಬೀಳಲು ತೊಡಗಿದ ಬಳಿಕ ಬಾಳೆಹಣ್ಣು ತನ್ನ ಎಲ್ಲಾ ಉತ್ತಮ ಗುಣಗಳನ್ನು ಪಡೆದಿರುತ್ತದೆ ಹಾಗಾಗಿ ಈ ಚುಕ್ಕೆಗಳು ಅಗಲವಾಗುವುದನ್ನು ಕಾಯುವ ಅಗತ್ಯವಿಲ್ಲ ಮತ್ತು ಚಿಕ್ಕ ಚುಕ್ಕೆಗಳಿದ್ದರೂ ಸಾಕು.
ಎದೆಯುರಿಯನ್ನು ಶಮನಗೊಳಿಸುತ್ತದೆ
ಅಜೀರ್ಣತೆಯ ಪ್ರಭಾವವನ್ನು ವಿರುದ್ಧ ದಿಕ್ಕಿನತ್ತ ಹೊರಳಿಸಲು ಬಾಳೆಹಣ್ಣು ಅತ್ಯುತ್ತಮವಾಗಿದೆ. ಪ್ರಾಯಶಃ ಮೊಸರಿನ ಬಳಿಕ ನಾವು ಅತಿ ಸುಲಭವಾಗಿ ಜೀರ್ಣಿಸಿಕೊಳ್ಳಬಹುದಾದ ಆಹಾರಗಳಲ್ಲಿ ಬಾಳೆಹಣ್ಣು ಪ್ರಮುಖವಾಗಿದೆ. ತನ್ಮೂಲಕ ಈಗಾಗಲೇ ಕೆಟ್ಟಿರುವ ಹೊಟ್ಟೆಯನ್ನು ಈ ಆಹಾರ ಇನ್ನಷ್ಟು ಕೆಡಿಸಲಾರದು, ಬದಲಿಗೆ ಉಂಟಾಗಿರುವ ಎದೆಯುರಿ ಮತ್ತು ಹುಳಿತೇಗನ್ನು ಶಮನಗೊಳಿಸಬಲ್ಲುದು. ಹಾಗಾಗಿ ಮುಂದಿನ ಬಾರಿ ಈ ತೊಂದರೆ ಎದುರಾದರೆ ತಕ್ಷಣ ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣೊಂದನ್ನು ಸೇವಿಸಿದರೆ ಸಾಕು.

ಕ್ಯಾನ್ಸರ್ ವಿರುದ್ಧ ಹೆಚ್ಚುವರಿ ರಕ್ಷಣೆ
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಟ್ಯೂಮರ್ ನೆಕ್ರೋಸಿಸ್ ಫ್ಯಾಕ್ಟರ್ (ಟಿಎನ್ಎಫ್) ಎಂಬ ಪೋಷಕಾಂಶವಿದ್ದು ಇವು ಕ್ಯಾನ್ಸರ್ ಗೆಡ್ಡೆಗಳನ್ನು ನಾಶಪಡಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಈ ಮೂಲಕ ಕ್ಯಾನ್ಸರ್ ವಿರುದ್ದ ಹೆಚ್ಚುವರಿ ರಕ್ಷಣೆ ಪಡೆಯಲು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣೇ ಸೇವನೆಗೆ ಅತ್ಯುತ್ತಮವಾಗಿದೆ.
ಮಾಸಿಕ ದಿನಗಳ ಸೋವಿನಿಂದ ಶಮನ ನೀಡುತ್ತದೆ
ಮಾಸಿಕ ದಿನಗಳಲ್ಲಿ ಎದುರಾಗುವ ಕೆಳಹೊಟ್ಟೆಯ ಭಾಗದ ಸ್ನಾಯುಗಳ ಸೆಡೆತವನ್ನು ಸಡಿಲಿಸಲು ಬಾಳೆಹಣ್ಣಿನ ಪೊಟ್ಯಾಶಿಯಂ ನೆರವಾಗುತ್ತದೆ. ಅಲ್ಲದೇ ಇದರಲ್ಲಿರುವ ವಿಟಮಿನ್ B6 ಹೊಟ್ಟೆಯುಬ್ಬರಿಕೆಯಾಗದಂತೆ ಹಾಗೂ ಕೆಳಹೊಟ್ಟೆಯ ಭಾಗದಲ್ಲಿ ನೀರು ತುಂಬಿಕೊಳ್ಳದಂತೆ ತಡೆಯುತ್ತದೆ. ಹಾಗಾಗಿ ಮಾಸಿಕ ದಿನಗಳಲ್ಲಿ ಸೇವೆಸಲು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಅತ್ಯುತ್ತಮ ಆಹಾರವಾಗಿದೆ.
ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸುತ್ತದೆ
ನಿಮ್ಮ ರಕ್ತದೊತ್ತಡವನ್ನು ಆರೋಗ್ಯಕರ ಮಟ್ಟಗಳ ಮಿತಿಯೊಳಗೇ ಇರುವಂತೆ ಕಾಪಾಡಿಕೊಳ್ಳಲು, ನಿಮ್ಮ ರಕ್ತದಲ್ಲಿ ನೀವು ಉತ್ತಮ ಪೊಟ್ಯಾಸಿಯಮ್ ಮಟ್ಟವನ್ನು ಹೊಂದಿರಬೇಕು ಮತ್ತು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಪೊಟ್ಯಾಶಿಯಂನ ಆಗರವಾಗಿದೆ. ಹಾಗೂ ಹೃದಯದ ಒತ್ತಡವನ್ನು ಹೆಚ್ಚು ಮಾಡುವ ಸೋಡಿಯಂ ಪ್ರಮಾಣ ಅತಿ ಕಡಿಮೆ ಇದೆ. ಮತ್ತು ಕಡಿಮೆ ಸೋಡಿಯಂ ಅಂಶವನ್ನು ಹೊಂದಿರುತ್ತವೆ,

ಖಿನ್ನತೆಯನ್ನು ನಿವಾರಿಸುತ್ತದೆ
ಬಾಳೆಹಣ್ಣಿನಲ್ಲಿರುವ ಟ್ರಿಪ್ಟೋಫ್ಯಾನ್ ಎಂಬ ಅಮೈನೋ ಆಮ್ಲ ಮೆದುಳಿನಲ್ಲಿ ಸೆರೋಟೋನಿನ್ ಎಂಬ ರಸದೂತವನ್ನು ಉತ್ಪಾದಿಸಲು ಪ್ರಚೋದನೆ ನೀಡುತ್ತದೆ. ಇದು ಮನೋಭಾವವನ್ನು ನಿಯಂತ್ರಿಸುವ ಹಾಗೂ ಸುಖನಿದ್ದೆ ಆವರಿಸಲು ಅಗತ್ಯವಾದ ರಸದೂತವಾಗಿದೆ. ಹಾಗಾಗಿ ಬಾಳೆಹಣ್ಣು ತಿಂದ ಬಳಿಕ ನಿರಾಳತೆ ದೊರಕುವ ಜೊತೆಗೇ ಸುಖನಿದ್ದೆಯೂ ಆವರಿಸುತ್ತದೆ.
ಅವು ಶಕ್ತಿಯ ತ್ವರಿತ ಶಕ್ತಿಯ ಮೂಲವಾಗಿದೆ
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣು ಮೂರು ನೈಸರ್ಗಿಕ ಸಕ್ಕರೆಗಳನ್ನು ಹೊಂದಿರುತ್ತದೆ – ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೂಕೋಸ್ ಮತ್ತು ಕರಗುವ ನಾರಿನೊಂದಿಗೆ ಸಂಯೋಜಿಸಲ್ಪಟ್ಟಿದೆ. ಶ್ರಮದಾಯಕ ವ್ಯಾಯಾಮದ ಮೊದಲು ಕೇವಲ 2 ಬಾಳೆಹಣ್ಣುಗಳನ್ನು ತಿನ್ನುವುದರಿಂದ ದೇಹದ ಸಹಿಷ್ಣುತೆಯನ್ನು ಒಂದು ಗಂಟೆ ಅಥವಾ ಅದಕ್ಕಿಂತ ಹೆಚ್ಚು ಹೆಚ್ಚಿಸಬಹುದು ಎಂದು ಸಂಶೋಧನೆಗಳು ವಿವರಿಸಿವೆ. ಪೊಟ್ಯಾಸಿಯಮ್ ಸ್ನಾಯು ಸೆಳೆತವನ್ನು ತಡೆಯಲು ಸಹಾ ಸಹಾಯ ಮಾಡುತ್ತದೆ.

ತಕ್ಷಣವೇ ಶಕ್ತಿ ದೊರಕುತ್ತದೆ
ಬಾಳೆಹಣ್ಣಿನಲ್ಲಿ ಹೆಚ್ಚಿನ ಕ್ಯಾಲೋರಿಗಳಿದ್ದು ತಿಂದ ಬಳಿಕ ಕ್ಷಿಪ್ರ ಸಮಯದಲ್ಲಿಯೇ ರಕ್ತದ ಮೂಲಕ ದೇಹದಲ್ಲಿ ಹೆಚ್ಚಿನ ಶಕ್ತಿ ಒದಗಿಸಲು ಸಾಧ್ಯವಾಗುತ್ತದೆ. ಹಾಗಾಗಿ ಹೆಚ್ಚಿನ ಶಕ್ತಿಯ ಅಗತ್ಯವಿರುವ ಸಂದರ್ಭದಲ್ಲಿ ಅನಾರೋಗ್ಯಕರ ಶಕ್ತಿಪೇಯಗಳನ್ನು ಕುಡಿಯುವ ಬದಲು ಕೆಲವು ಬಾಳೆಹಣ್ಣುಗಳನ್ನು ತಿಂದರೆ ಸಾಕು. ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್ ನಿಮ್ಮ ಸ್ನಾಯುಗಳನ್ನು ಸೆಳೆತದಿಂದ ತಡೆಯುತ್ತದೆ. ಇತರ ಖನಿಜಗಳು ಮತ್ತು ಪೋಷಕಾಂಶಗಳು ದೀರ್ಘಕಾಲದ ದೈಹಿಕ ಸಹಿಷ್ಣುತೆಯನ್ನು ಪಡೆಯಲು ನಿಮಗೆ ಸಹಾಯ ಮಾಡುತ್ತದೆ.
ಜೀರ್ಣಾಂಗದಲ್ಲಿ ಉಂಟಾಗಿದ್ದ ಹುಣ್ಣುಗಳು ಬೇಗನೇ ಮಾಗುತ್ತವೆ
ಆಮ್ಲೀಯ ಆಹಾರದ ಕಾರಣ ಎದುರಾಗಿರುವ ಹೊಟ್ಟೆ ಮತ್ತು ಕರುಳಿನ ಹುಣ್ಣುಗಳು (ಅಲ್ಸರ್) ನಿಮ್ಮ ಆಹಾರಸೇವನೆಯನ್ನೇ ಬಾಧಿತಗೊಳಿಸಬಹುದು. ಹೊಟ್ಟೆಯ ಹುಣ್ಣು ಇದ್ದರೆ ಖಾರ, ಹುಳಿ ಉಪ್ಪು ಯಾವುದನ್ನೂ ತಿನ್ನಲು ಸಾಧ್ಯವಾಗುವುದಿಲ್ಲ. ಆದರೆ ಈ ಹುಣ್ಣುಗಳ ಮೇಲೆ ಬಾಳೆಹಣ್ಣು ಶಮನಕಾರಿ ಪ್ರಭಾವ ನೀಡುತ್ತದೆ ಹಾಗೂ ಉರಿಯನ್ನೂ ಉಂಟುಮಾಡುವುದಿಲ್ಲ. ಈ ಮೂಲಕ ಈ ತೊಂದರೆ ಇರುವ ವ್ಯಕ್ತಿಗಳಿಗೆ ಅಗತ್ಯವಿರುವ ಅಮೂಲ್ಯ ಪೋಷಕಾಂಶಗಳನ್ನೂ ಒದಗಿಸುತ್ತದೆ.
ಮಲಬದ್ದತೆಯನ್ನು ಇಲ್ಲವಾಗಿಸುತ್ತದೆ
ಬಾಳೆಹಣ್ಣಿನಲ್ಲಿರುವ ಕರಗುವ ನಾರು ಜೀರ್ಣಗೊಂಡ ಆಹಾರ ಕರುಳುಗಳಲ್ಲಿ ಸುಲಭವಾಗಿ ಚಲಿಸಲು ನೆರವಾಗುವ ಮೂಲಕ ತ್ಯಾಜ್ಯಗಳು ಗಟ್ಟಿಯಾಗದಂತೆ ಹಾಗೂ ಮಲಬದ್ದತೆಯಾಗದಂತೆ ನೆರವಾಗುತ್ತವೆ. ಮುಂದಿನ ಬಾರಿ ಮಲಬದ್ದತೆಯ ತೊಂದರೆ ಕಾಣಿಸಿಕೊಂಡರೆ ರಾತ್ರಿ ಮಲಗುವ ಮುನ್ನ ಎರಡು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣುಗಳನ್ನು ತಿಂದರೆ ಸಾಕು.

ರಕ್ತಹೀನತೆಯನ್ನು ಇಲ್ಲವಾಗಿಸುತ್ತದೆ
ಬಾಳೆಹಣ್ಣಿನದಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ನಮ್ಮ ಪು ರಕ್ತ ಕಣಗಳ ಮುಖ್ಯ ಅಂಶಗಳಲ್ಲಿ ಕಬ್ಬಿಣವೂ ಒಂದು, ಅದು ನಮ್ಮ ರಕ್ತದ ಮೂಲಕ ಪೋಷಕಾಂಶಗಳು ಮತ್ತು ಆಮ್ಲಜನಕವನ್ನು ಸಾಗಿಸಲು ಅಗತ್ಯವಾಗಿದೆ. ಬಾಳೆಹಣ್ಣುಗಳು ನಿಮ್ಮ ದೇಹದ ಕಬ್ಬಿಣದ ಅಗತ್ಯವನ್ನು ಪೂರೈಸುತ್ತವೆ, ಇದರಿಂದಾಗಿ ರಕ್ತಹೀನತೆಯ ಸಂಭವವನ್ನು ಕಡಿಮೆ ಮಾಡುತ್ತದೆ. ರಕ್ತಹೀನತೆಯಿರುವ ವ್ಯಕ್ತಿಗಳ ರಕ್ತದಲ್ಲಿ ಬ್ಬಿಣದ ಅಂಶದ ಕೊರತೆ ಇರುತ್ತದೆ ಮತ್ತು ರೋಗಪೀಡಿತ ಕೆಂಪು ರಕ್ತ ಕಣಗಳು ಹೆಚ್ಚಿರುತ್ತವೆ.
ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣಿನಲ್ಲಿ ಹೆಚ್ಚು ಪೊಟ್ಯಾಶಿಯಂ ಇರುತ್ತದೆ
ಚುಕ್ಕೆಬೀಳಲು ಪ್ರಾರಂಭವಾದ ಬಳಿಕ ತಿರುಳಿನಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚುತ್ತಾ ಹೋಗುವುದು ಒಂದು ವಿಸ್ಮಯ. ಆದರೆ ಸೋಡಿಯಂ ಮಟ್ಟ ಮಾತ್ರ ಅಲ್ಪವೇ ಇರುತ್ತದೆ. “Journal of the American Medical Association”ಮಾಧ್ಯಮದಲ್ಲಿ ಪ್ರಕಟವಾದ ಪಿ.ಕೆ ವ್ಹೆಲ್ಟನ್ ಮತ್ತು ತಂಡದವರ ವರದಿಯ ಪ್ರಕಾರ ನಿತ್ಯವೂ ಬಾಳೆಹಣ್ಣು ಸೇವಿಸುತ್ತಾ ಬಂದರೆ ಇದು ಸಂಕೋಚನದ ಒತ್ತಡವನ್ನು 3 mmHg ಹಾಗೂ ವಿಕಸನದ ಒತ್ತಡವನ್ನು2 mmHg ವರೆಗೆ ತಗ್ಗಿಸುತ್ತದೆ. “Health foodstyle.net” ಪ್ರಕಾರ, ದಿನಕ್ಕೆರಡು ಚುಕ್ಕೆಬಿದ್ದ ಸಿಪ್ಪೆಯ ಬಾಳೆಹಣ್ಣನ್ನು ಸೇವಿಸಿದಾಗ ಇದರಲ್ಲಿರುವ ಪೋಷಕಾಂಶಗಳು ನಿಮ್ಮ ಆರೋಗ್ಯಕ್ಕೆ ಈ ಕೆಳಗಿನ ಪ್ರಯೋಜನಗಳನ್ನು ಒದಗಿಸುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…