ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು ತಂಪಾಗಿಸುತ್ತದೆ. ಅಂತಹದರಲ್ಲಿ ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಸಮವೆನಿಸುವ ಬೆಲ್ಲವೂ ಒಂದು.

ಬೆಲ್ಲ ಒಂದು ಉಷ್ಣ ಸಂಬಂಧಿ ಪದಾರ್ಥವಾಗಿದ್ದು, ಮನುಷ್ಯನ ದೇಹದಲ್ಲಿ ಬಿಸಿ ಉತ್ಪತ್ತಿ ಮಾಡುತ್ತದೆ. ಇದರಲ್ಲಿ ಕ್ಯಾಲೊರಿಗಳ ಅಂಶ ಜೋರಾಗಿದ್ದು ನಮ್ಮ ದೇಹವನ್ನು ಬಿಸಿಯಾಗಿಡುವುದರ ಬೆನ್ನಲ್ಲೇ ದೇಹಕ್ಕೆ ಶಕ್ತಿಯನ್ನು ಸಹ ನೀಡುತ್ತದೆ. ಅದಕ್ಕೆ ನೋಡಿ ಯಾವ ಸಮಯದಲ್ಲಿ ಆದರೂ ನಮಗೆ ಶೀತ ಆದಂತಹ ಸಂಧರ್ಭದಲ್ಲಿ ಸ್ವಲ್ಪ ಬೆಲ್ಲ ತಿನ್ನುತ್ತಾ ಬಂದರೆ ಶೀತ, ನೆಗಡಿ ಮತ್ತು ಕೆಮ್ಮಿನ ಲಕ್ಷಣಗಳು ಬಹಳ ಬೇಗನೆ ಮಾಯವಾಗುತ್ತವೆ.

ಕೆಲವೊಂದು ಉತ್ತಮ ಗುಣಮಟ್ಟ ಹೊಂದಿರುವ ಬೆಲ್ಲ, ದೇಹಕ್ಕೆ ಅಸ್ವಸ್ಥತೆ ಉಂಟು ಮಾಡುವ ಜ್ವರ ಮತ್ತು ಶೀತದಂತಹ ಖಾಯಿಲೆಗಳ ವಿರುದ್ಧ ಹೋರಾಡುತ್ತದೆ. ಏಕೆಂದರೆ ಬೆಲ್ಲದ ಸೇವನೆಯಿಂದ ದೇಹದ ಉಷ್ಣಾಂಶ ಏರಿಕೆಯಾಗಿ ರೋಗಾಣುಗಳ ಬೆಳವಣಿಗೆಯನ್ನು ಆರಂಭದಲ್ಲೇ ತಡೆ ಹಾಕುತ್ತದೆ. ಜೊತೆಗೆ ಬೆಲ್ಲದಲ್ಲಿ ವಿವಿಧ ಬಗೆಯ ಖನಿಜಾಂಶಗಳಾದ ಕಬ್ಬಿಣ, ಮೆಗ್ನೀಷಿಯಂ, ಜಿಂಕ್, ಸೆಲೆನಿಯಮ್ ಮತ್ತು ಪೊಟ್ಯಾಸಿಯಂ ಅಂಶಗಳು ಅಡಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿ ದೇಹಕ್ಕೆ ಯಾವುದೇ ಬಗೆಯ ಸೋಂಕು ಉಂಟಾಗುವುದನ್ನು ದೂರ ಮಾಡುತ್ತದೆ.

ಇನ್ನು ಚಳಿಗಾಲದ ಸಮಯದಲ್ಲಿ ಬೆಲ್ಲದ ಸೇವನೆ ಗಂಟಲು ಸಂಬಂಧಿತ ಸಮಸ್ಯೆಗಳಾದ ಗಂಟಲು ನೋವು, ಗಂಟಲು ಕೆರೆತ, ಒಣ ಕೆಮ್ಮು ಇತ್ಯಾದಿ ಸಮಸ್ಯೆಗಳನ್ನು ಗಂಟಲಿನ ಒಳ ಭಾಗದ ಮೇಲೆ ಒಂದು ಸಣ್ಣ ಪದರವನ್ನು ಏರ್ಪಾಡು ಮಾಡಿ ನಿವಾರಣೆ ಮಾಡುತ್ತದೆ. ಇನ್ನು ಉಸಿರಾಟದ ಸಮಸ್ಯೆಗಳಾದ ಕೆಮ್ಮು, ಕಫ ಕಟ್ಟಿದ ಎದೆ ಮುಂತಾದ ಸಮಸ್ಯೆಗಳನ್ನು ದೇಹದ ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ರಕ್ತ ನಾಳಗಳಲ್ಲಿ ಅಧಿಕ ರಕ್ತ ಹರಿಯುವಂತೆ ಮಾಡಿ ಶ್ವಾಸಕೋಶದ ನಾಳವನ್ನು ಬಿಸಿಯಾಗುವಂತೆ ಮಾಡಿ ಕಡಿಮೆ ಮಾಡುತ್ತದೆ. ಬೆಲ್ಲ ಮಾಡುವ ಇನ್ನೊಂದು ಮುಖ್ಯ ಚಮತ್ಕಾರ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಸಂಖ್ಯೆಯನ್ನು ಕಾಯ್ದುಕೊಳ್ಳುವ ಮೂಲಕ ರಕ್ತದಲ್ಲಿ ಅನಗತ್ಯ ವಸ್ತುಗಳನ್ನು ತೆಗೆದು ಹಾಕಿ ರಕ್ತವನ್ನು ಶುದ್ಧೀಕರಣ ಮಾಡುತ್ತದೆ. ಇದರಿಂದ ರಕ್ತ ಸಂಚಾರದಲ್ಲಿ ಯಾವುದೇ ಬಗೆಯ ರೋಗಕಾರಕ ಸೂಕ್ಷ್ಮಾಣುಗಳು ಸುಳಿಯದಂತೆ ಎಚ್ಚರಿಕೆ ವಹಿಸುತ್ತದೆ.

ಚಳಿಗಾಲದಲ್ಲಿ ನಮ್ಮ ದೇಹ ಸೋಂಕುಗಳಿಗೆ ಆಹ್ವಾನ ಮಾಡುವ ಕಾರಣವೆಂದರೆ ನಮ್ಮ ಸುತ್ತಮುತ್ತ ಸುಳಿದಾಡುವ ತಣ್ಣನೆಯ ಮತ್ತು ಒಣ ಗಾಳಿ ರೋಗಾಣುಗಳ ಉತ್ಪತ್ತಿಗೆ ಮತ್ತು ಬೆಳವಣಿಗೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಬೆಲ್ಲ ಮನುಷ್ಯನ ದೇಹದ ಎಲ್ಲ ಅಂಗಗಳಿಂದ ಅಂದರೆ ಶ್ವಾಸನಾಳ, ಹೊಟ್ಟೆಯ ಭಾಗ, ಕರುಳಿನ ಭಾಗ, ಶ್ವಾಸಕೋಶ ಮತ್ತು ಅನ್ನನಾಳ ಗಳಿಂದ ಅನಗತ್ಯ ಕಣಗಳನ್ನು ತೆಗೆದು ಹಾಕುವುದರ ಮೂಲಕ ಮನುಷ್ಯನ ದೇಹ ಯಾವುದೇ ಬಗೆಯ ದುಷ್ಟ ಕಾಯಿಲೆಗಳಿಗೆ ಒಳಗಾಗದಂತೆ ಕಾಪಾಡುತ್ತದೆ.
ಹೀಗೆ ಬೆಲ್ಲ ಕೇವಲ ಅಡುಗೆಗೆ ಮಾತ್ರವಲ್ಲದೇ ನಮ್ಮ ದೇಹದ ಹಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…
ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…