ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ.

ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ. ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.

ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ಧ್ಯುತಿ, ವಿಜಿಗೀಶ, ಕಾಂತಿ, ಸ್ತುತಿ, ವ್ಯವಹಾರ, ಕ್ರೀಡಾ, ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.
ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.

ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.
ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.
ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.
ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.
ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.

ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ ‘ದೇವ’ ಹೀಗೆ ಅನೇಕ ಅರ್ಥಗಳನ್ನು ‘ದಿವ್ಯ’ ಎನ್ನುವ ಪದದಲ್ಲಿ ಕಂಡುಕೊಳ್ಳಬಹುದು. “ಓ ದೇವರೇ” ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.
ಜ್ಯೋತಿಷ್ಯ ವಿದ್ವಾನ್ ಹಾಗೂ ದೈವಜ್ಞ ಕೊಲ್ಲುರು ಶ್ರೀ ಮೂಕಾಂಬಿಕಾ ದೇವಿ ಆರಾಧಕರು ನಿಮ್ಮ ಜೀವನದ ಸರ್ವಸಮಸ್ಯೆಗಳಿಗೆ ಅಷ್ಟದಶಶಕ್ತಿಪೀಠಗಳ ದೈವಸಿದ್ದಿಯಿಂದ ಶಾಶ್ವತ ಪರಿಹಾರ ಕರೆ ಮಾಡಿ ನೇರವಾಗಿ ಭೇಟಿಯಾಗಲು ಪೋನಿನ ಮೂಖಾಂತರ ಖಚಿತಪಡಿಸಿಕೊಳ್ಳಿ 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…