ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ.

ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ. ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.

ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ಧ್ಯುತಿ, ವಿಜಿಗೀಶ, ಕಾಂತಿ, ಸ್ತುತಿ, ವ್ಯವಹಾರ, ಕ್ರೀಡಾ, ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.
ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.

ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.
ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.
ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.
ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.
ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.

ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ ‘ದೇವ’ ಹೀಗೆ ಅನೇಕ ಅರ್ಥಗಳನ್ನು ‘ದಿವ್ಯ’ ಎನ್ನುವ ಪದದಲ್ಲಿ ಕಂಡುಕೊಳ್ಳಬಹುದು. “ಓ ದೇವರೇ” ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.
ಜ್ಯೋತಿಷ್ಯ ವಿದ್ವಾನ್ ಹಾಗೂ ದೈವಜ್ಞ ಕೊಲ್ಲುರು ಶ್ರೀ ಮೂಕಾಂಬಿಕಾ ದೇವಿ ಆರಾಧಕರು ನಿಮ್ಮ ಜೀವನದ ಸರ್ವಸಮಸ್ಯೆಗಳಿಗೆ ಅಷ್ಟದಶಶಕ್ತಿಪೀಠಗಳ ದೈವಸಿದ್ದಿಯಿಂದ ಶಾಶ್ವತ ಪರಿಹಾರ ಕರೆ ಮಾಡಿ ನೇರವಾಗಿ ಭೇಟಿಯಾಗಲು ಪೋನಿನ ಮೂಖಾಂತರ ಖಚಿತಪಡಿಸಿಕೊಳ್ಳಿ 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…
ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…