ಸ್ಪೂರ್ತಿ

ಬದುಕನ್ನು ವ್ಯರ್ಥ ಮಾಡಬೇಡಿ, ಸಮಯವನ್ನು ಅರ್ಥ ಮಾಡಿಕೊಂಡು ಬದುಕಿ ರವಿ ಚನ್ನಣ್ಣನವರ್.

45

ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ. ಇದರ ಉದ್ದೇಶ ಜನರನ್ನು ಬದುಕಿನಡೆ ನಡೆಯುವಂತೆ ಮಾಡಿದೆ ಎಂದರು.

ಒಬ್ಬರು ಇನ್ನೊಬ್ಬರ ಮೂಲಕ ಕಲಿತು ಬದುಕನ್ನು ಸುಂದರ ಮಾಡಿಕೊಳ್ಳಬೇಕು. ನಾವು ಕಾಯಕಯೋಗಿಗಳಾಗಿ ಕೆಲಸ ಮಾಡಬೇಕು. ಬದುಕು ವ್ಯರ್ಥ ಮಾಡದೆ ಸಮಯ ಅರ್ಥ ಮಾಡಿಕೊಂಡು ಬದುಕನ್ನು ಮುನ್ನಡೆಸಬೇಕು ಎಂದರು. ಇಂದು ಸಮಾಜ ಸರಿಯಿಲ್ಲ. ಆದರೆ ಅದನ್ನು ಸರಿ ಮಾಡದೇ ಬಿಡಬಾರದು. ಎಲ್ಲರೂ ತಿಳಿದು ಮುನ್ನಡೆಯಬೇಕು. ಇಲ್ಲಿನ ಪರಂಪರೆ ನೋಡಿದರೆ ಎಲ್ಲವೂ ಜೀವಂತವಾಗಿದೆ ಎಂದೆನಿಸುತ್ತದೆ. ಶ್ರೀಗಳ ಸಂಕಲ್ಪದೊಂದಿಗೆ ಜಾತ್ರೆ ನಡೆದಿದೆ ಎಂದು ಜಾತ್ರೆಯ ಬಗ್ಗೆ ಮಾತನಾಡಿದರು.

ಇಲ್ಲಿನ ಭಕ್ತ ಸಮೂಹ ಯುವಕರು ಸಮಾಜದಲ್ಲಿ ಒಂದು ನಿಮಿಷವೂ ವ್ಯರ್ಥ ಮಾಡಬಾರದು. ಆದರೆ ಇಲ್ಲಿನ ಯುವಕರಲ್ಲಿ ಕೀಳರಿಮೆಯ ಭಾವನೆ ತುಂಬಾ ಇದೆ. ತಾನು ಏನು ಮಾಡಿದೆ ಎನ್ನುವುದಕ್ಕಿಂತ ಇನ್ನೊಬ್ಬರ ಬಗ್ಗೆಯೇ ಹೆಚ್ಚು ಮಾತನಾಡುತ್ತಿದ್ದಾರೆ. ನಮ್ಮಲ್ಲಿ ಸಂಕಲ್ಪದ ಕೊರತೆ ಕಾಡುತ್ತಿದೆ. ಏನಾದರೂ ಮಾಡು, ಖಾಲಿ ಕೂಡಬೇಡ. ಮಾಡುವ ಕೆಲಸ ಶ್ರದ್ಧೆಯಿಂದ ಮಾಡು. ಕೀಳರಿಮೆ ದೂರವಿಡಬೇಕು ಎಂದರು.

ಪಾಲಕರು ಮಕ್ಕಳಿಗೆ ಸ್ನೇಹಿತರಂತೆ ಕಾಣಬಾರದು. ಅದು ನಿಜಕ್ಕೂ ಕೆಟ್ಟ ಸಂಸ್ಕೃತಿ. ಇದರಿಂದ ಮಕ್ಕಳ ಜೀವನ ಹಾಳಾಗುತ್ತದೆ. ಅವರು ತಪ್ಪು ಮಾಡಿದ ತಕ್ಷಣ ಅದನ್ನು ಅವರಿಗೆ ಮನವರಿಕೆ ಮಾಡಿ ಕೊಡಬೇಕು. ಒಳ್ಳೆಯ ಸಂಸ್ಕಾರ ನಮ್ಮ ಬದುಕನ್ನೇ ಬದಲಿಸಲಿದೆ. ನಾವು ವಯಕ್ತಿಕ ಸಬಲರಾದರೆ ದೇಶವೇ ಅಭಿವೃದ್ಧಿಯಾಗಲಿದೆ ಎಂದು ರವಿ ಚನ್ನಣ್ಣನವರ್ ತಿಳಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ, ಭವಿಷ್ಯ

    ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

    ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…

  • ಸುದ್ದಿ

    ಸರ್ಕಾರಿ ಶಾಲೆ ಒಂದರಲ್ಲಿ ಬಿಸಿ ಊಟದಲ್ಲಿ ಹಾವು ಪತ್ತೆ…ಎಲ್ಲಿ ಗೊತ್ತೇ?

    ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…

  • ಸುದ್ದಿ

    ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ ವಿಧಿಸಿದ ಕೋರ್ಟ್ ….!

    ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…

  • ತಂತ್ರಜ್ಞಾನ

    ವಾಟ್ಸ್ಆಫ್ ಗ್ರೂಪ್ ನಲ್ಲಿ ಯಾರನ್ನಾದರು ಟ್ಯಾಗ್ ಮಾಡಬೇಕೇ…? ತಿಳಿಯಲು ಈ ಲೇಖನ ಓದಿ..

    ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?

  • ದೇಶ-ವಿದೇಶ

    ಸೌದಿಯಲ್ಲಿ ಈಗ ಯೋಗಕ್ಕೆ ನೀಡಲಾಗಿದೆ ಕ್ರೀಡೆಯ ಮಾನ್ಯತೆ..!ತಿಳಿಯಲು ಈ ಲೇಖನ ಓದಿ…

    ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್‌ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ

  • ಸುದ್ದಿ

    ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

    ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…