News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

144

ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು.

ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು, ಉಫ್ ಅಂದ್ರೆ ಹಾರಿ ಹೋಗ್ತಿ ಅಂತ ರೇಗಿಸ್ಕೊಂಡು ಈ ಸಣಕಲು ಶರೀರದವರು ಬೇಸತ್ತು ಹೋಗಿರ್ತಾರೆ. ವೀಕ್ನೆಸ್, ಸುಸ್ತು, ನಿರುತ್ಸಾಹ, ನಿಶ್ಯಕ್ತಿಯಿಂದ ಬಳಲಿರ್ತಾರೆ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಇವರ ಅಳಲು. ನೀವೂ ಇವರಲ್ಲಿ ಒಬ್ಬರಾಗಿದ್ದಲ್ಲಿ, ಬರೀ ಊಟವಲ್ಲ, ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ. ಜೊತೆಗೆ ಚೆನ್ನಾಗಿ ನಿದ್ದೆ, ಸರಿಯಾದ ವ್ಯಾಯಾಮ ಮೈಗೂಡಿಸಿಕೊಳ್ಳಿ. ವ್ಯಾಯಾಮದಲ್ಲಿ ವ್ಹೈಟ್ ಟ್ರೇನಿಂಗ್ ಕೂಡಾ ಇದ್ದರೆ ಬರೀ ಫ್ಯಾಟ್ ದೇಹ ಸೇರುವ ಬದಲು ಚೆನ್ನಾಗಿ ಮಸಲ್ ಬಿಲ್ಡ್ ಆಗುತ್ತದೆ.

ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.

ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್‌ನೊಂದಿಗೆ ಕೂಡಾ ಸೇವಿಸಬಹುದು.

ಮೊಟ್ಟೆ
ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್‌ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್‌ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.

ಸೋಯಾ ಸೋಯಾಬೀನ್‌ನಲ್ಲಿ ಅಮೈನೋ ಆಸಿಡ್ ಇದ್ದು, ಬಾಡಿ ಬಿಲ್ಡ್ ಮಾಡಲು ಸಹಕಾರಿಯಾಗಿದೆ.

ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್‌ಗೆ ಸೇರಿಸಿಕೊಳ್ಳಿ.

ದವಸ ಧಾನ್ಯಗಳು
– ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.

ಡ್ರೈಫ್ರೂಟ್ಸ್
ವಾಲ್‌ನಟ್, ದ್ರಾಕ್ಷಿ, ಗೋಡಂಬಿ, ಅಂಜೂರ ಮುಂತಾದ ಡ್ರೈ ಫ್ರೂಟ್‌ಗಳಲ್ಲಿ ಶುಗರ್ ಹೆಚ್ಚಿದ್ದು, ತೂಕ ಹೆಚ್ಚಿಸುವುದಕ್ಕೆ ಸಹಕಾರಿ. ರುಚಿಯಲ್ಲಿ ಕೂಡಾ ರಾಜಿ ಮಾಡಿಕೊಳ್ಳಬೇಕಿಲ್ಲ.

ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.

ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್‌ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್‌ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್‌ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.

ಚೀಸ್
– ಡಾರ್ಕ್ ಚಾಕೋಲೇಟ್‌ನಂತೆಯೇ ಚೀಸ್ ಕೂಡಾ ಹೆಚ್ಚು ಕ್ಯಾಲೋರಿಗಳನ್ನೂ, ಫ್ಯಾಟನ್ನೂ ಹೊಂದಿದೆ. ನಿಮ್ಮ ಆಹಾರದಲ್ಲಿ ಚೀಸ್ ಬಳಕೆ ಹೆಚ್ಚಿಸಿದರೆ ಪ್ರೋಟೀನ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ದೇಹಕ್ಕೆ ಸಿಗುತ್ತದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…

  • ಕ್ರೀಡೆ

    “ಭಾರತವೇ ಕ್ರಿಕೆಟ್ನಲ್ಲಿ” ಗೆಲ್ಲಲಿ ಎಂದು ಪ್ರಾರ್ಥಿಸುವ ‘ಪಾಕಿಸ್ತಾನಿ ಕ್ರಿಕೆಟ್’ ಅಭಿಮಾನಿ !!! ನೀವು ನಂಬಲೇಬೇಕು?

    ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ

  • ಉಪಯುಕ್ತ ಮಾಹಿತಿ

    ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

    ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…

  • ಸುದ್ದಿ

    ಪರೀಕ್ಷೆ ನಡಸೆ ಬೇಕಂದ್ರೆ ವಿದ್ಯಾರ್ಥಿ ಹೆಸರಿನಲ್ಲಿ 50 ಲಕ್ಷ, ಶಿಕ್ಷಕರಿಗೆ 25 ಲಕ್ಷ, ಡೆಪಾಸಿಟ್ ಮಾಡಿ . ವಾಟಾಳ್ ನಾಗರಾಜ್ ಆಕ್ರೋಶ.

    ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…

  • ಸುದ್ದಿ

    ಬಯಲಾಯ್ತು ಜೆಡಿಎಸ್ ಶಾಸಕ ಮಾತನಾಡಿರುವ ಆಡಿಯೋ..!ಆ ಆಡಿಯೋದಲ್ಲಿ ಮಾತನಾಡಿದ್ದು ಏನು ಗೊತ್ತಾ?

    ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…