News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

145

ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು.

ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು, ಉಫ್ ಅಂದ್ರೆ ಹಾರಿ ಹೋಗ್ತಿ ಅಂತ ರೇಗಿಸ್ಕೊಂಡು ಈ ಸಣಕಲು ಶರೀರದವರು ಬೇಸತ್ತು ಹೋಗಿರ್ತಾರೆ. ವೀಕ್ನೆಸ್, ಸುಸ್ತು, ನಿರುತ್ಸಾಹ, ನಿಶ್ಯಕ್ತಿಯಿಂದ ಬಳಲಿರ್ತಾರೆ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಇವರ ಅಳಲು. ನೀವೂ ಇವರಲ್ಲಿ ಒಬ್ಬರಾಗಿದ್ದಲ್ಲಿ, ಬರೀ ಊಟವಲ್ಲ, ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ. ಜೊತೆಗೆ ಚೆನ್ನಾಗಿ ನಿದ್ದೆ, ಸರಿಯಾದ ವ್ಯಾಯಾಮ ಮೈಗೂಡಿಸಿಕೊಳ್ಳಿ. ವ್ಯಾಯಾಮದಲ್ಲಿ ವ್ಹೈಟ್ ಟ್ರೇನಿಂಗ್ ಕೂಡಾ ಇದ್ದರೆ ಬರೀ ಫ್ಯಾಟ್ ದೇಹ ಸೇರುವ ಬದಲು ಚೆನ್ನಾಗಿ ಮಸಲ್ ಬಿಲ್ಡ್ ಆಗುತ್ತದೆ.

ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.

ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್‌ನೊಂದಿಗೆ ಕೂಡಾ ಸೇವಿಸಬಹುದು.

ಮೊಟ್ಟೆ
ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್‌ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್‌ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.

ಸೋಯಾ ಸೋಯಾಬೀನ್‌ನಲ್ಲಿ ಅಮೈನೋ ಆಸಿಡ್ ಇದ್ದು, ಬಾಡಿ ಬಿಲ್ಡ್ ಮಾಡಲು ಸಹಕಾರಿಯಾಗಿದೆ.

ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್‌ಗೆ ಸೇರಿಸಿಕೊಳ್ಳಿ.

ದವಸ ಧಾನ್ಯಗಳು
– ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.

ಡ್ರೈಫ್ರೂಟ್ಸ್
ವಾಲ್‌ನಟ್, ದ್ರಾಕ್ಷಿ, ಗೋಡಂಬಿ, ಅಂಜೂರ ಮುಂತಾದ ಡ್ರೈ ಫ್ರೂಟ್‌ಗಳಲ್ಲಿ ಶುಗರ್ ಹೆಚ್ಚಿದ್ದು, ತೂಕ ಹೆಚ್ಚಿಸುವುದಕ್ಕೆ ಸಹಕಾರಿ. ರುಚಿಯಲ್ಲಿ ಕೂಡಾ ರಾಜಿ ಮಾಡಿಕೊಳ್ಳಬೇಕಿಲ್ಲ.

ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.

ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್‌ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್‌ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್‌ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.

ಚೀಸ್
– ಡಾರ್ಕ್ ಚಾಕೋಲೇಟ್‌ನಂತೆಯೇ ಚೀಸ್ ಕೂಡಾ ಹೆಚ್ಚು ಕ್ಯಾಲೋರಿಗಳನ್ನೂ, ಫ್ಯಾಟನ್ನೂ ಹೊಂದಿದೆ. ನಿಮ್ಮ ಆಹಾರದಲ್ಲಿ ಚೀಸ್ ಬಳಕೆ ಹೆಚ್ಚಿಸಿದರೆ ಪ್ರೋಟೀನ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ದೇಹಕ್ಕೆ ಸಿಗುತ್ತದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಜಾತಿ/ಆದಾಯ ಪ್ರಮಾಣಪತ್ರವನ್ನು ಪಡೆಯಲು, ನೀವು ಕುಳಿತಲ್ಲಿಯೇ ನಿಮ್ಮ ಮೊಬೈಲ್’ನಲ್ಲಿ ಅರ್ಜಿ ಸಲ್ಲಿಸಿ, ಕೆಲವೇ ದಿನಗಳಲ್ಲಿ ಪಡೆಯಿರಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

    ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…

  • ಸೌಂದರ್ಯ

    ಟೊಮೊಟೋದಲ್ಲಿದೆ ಸನ್ ಟ್ಯಾನ್ ಕಡಿಮೆ ಮಾಡುವ ಗುಣಗಳು..!ತಿಳಿಯಲು ಈ ಲೇಖನ ಓದಿ…

    ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.

  • ಆಧ್ಯಾತ್ಮ

    ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

    ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • ಸುದ್ದಿ

    8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಸುನಿಲ್ ನಾಯ್ಕರಿಂದ ಉಚಿತ ಬೈಸಿಕಲ್ ವಿತರಣೆ

    ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…