ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ ಬೇಕಾದರೂ ಆಗಬಹುದು.. ಆದರೆ ಪ್ರೀತಿ ಮಾಡುವುದು ದೊಡ್ಡ ವಿಚಾರವಲ್ಲ. ಪ್ರೀತಿ ಮಾಡಿ ವಿವಾಹವಾಗಿ ಬದುಕಿ ಬಾಳಿ ತೋರಿಸಿದರೆ ನಮ್ಮ ಪ್ರೀತಿ ಮತ್ತು ಜೀವನಕ್ಕೆ ಒಂದು ಅರ್ಥ ಸಿಗುತ್ತದೆ.

ಅಂತೆಯೇ ಇಲ್ಲೊಬ್ಬ ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಗೆ ಸಿಕ್ಕಾಪಟ್ಟೆ ಪ್ರೀತಿಯಾಗಿದೆ. ವಿಶೇಷವೇನೆಂದರೆ ಪ್ರಥಮ ಬಾರಿಗೆ ಅಂದರೆ ಒಂದೇ ನೋಟದಲ್ಲಿ ಆ ಹುಡುಗನ ಮೇಲೆ ಈಕೆಗೆ ಪ್ರೀತಿಯಾಗಿದೆ.ದ್ರೋಹ ಹುಡುಗಿ ವಿದೇಶದಲ್ಲಿ ಯಾವ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಕೊಂಡರೆ ಒಂದು ಕ್ಷಣ ನೀವು ಆಶ್ಚರ್ಯ ಪಡುತ್ತೀರಿ..
ಕುಗ್ರಾಮದಲ್ಲಿ ಹುಟ್ಟಿದ ನರೇಂದ್ರ ಅನ್ನುವ ಹುಡುಗ.. ಆದರೆ ಬಿಸಿಲಿಗೆ ಸರಸ್ವತಿ ಒಲಿದು ಬರಲಿಲ್ಲ. ಒಂದು ಅಕ್ಷರವೂ ತಲೆಗೆ ಹೋಗುತ್ತಿರಲಿಲ್ಲ. ಹಳ್ಳಿಯಲ್ಲಿ ಇದ್ದ ಕಾರಣ ಓದು ತಲೆಗೆ ಹತ್ತದ ಕಾರಣ ತಮಗಿದ್ದ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಮತ್ತು ಬಿಡುವಿನ ಸಮಯದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದ.. ವ್ಯವಸಾಯ ನಂಬಿಕೊಂಡರೆ ಅಷ್ಟಾಗಿ ಹಣ ಗಳಿಸಲು ಸಾಧ್ಯವಿಲ್ಲ ಎಂದು ಕೆಲವರು ಅಂದುಕೊಂಡಿರುತ್ತಾರೆ. ಅಂತೆಯೇ ಈ ಹುಡುಗನ ಜೀವನದಲ್ಲೂ ಇದೇ ನಡೆದಿದೆ.

ಮಾಡುತ್ತಿದ್ದ ವ್ಯವಸಾಯ ಮತ್ತು ಕೂಲಿ ಕೆಲಸದಲ್ಲಿ ಆತನಿಗೆ ಬಿಡುಗಾಸು ಸಿಗುತ್ತಿದ್ದ ಕಾರಣ ಕರ್ನಾಟಕ ಮತ್ತು ಗೋವಾ ಗಡಿಯಲ್ಲಿ ಇರುವ ಒಂದು ಬಾರ್ ನಲ್ಲಿ ಕೆಲಸಕ್ಕೆ ಸೇರಿಕೊಂಡ. ಗೋವಾ ಗಡಿ ಎಂದರೆ ತಮಗೆಲ್ಲರಿಗೂ ತಿಳಿದಿರುತ್ತದೆ. ಆ ಬಾರ್ ನಲ್ಲಿ ಹೆಚ್ಚಾಗಿ ವಿದೇಶಿಗರೇ ಬರುತ್ತಿರುತ್ತಾರೆ.. ಇನ್ನು ನರೇಂದ್ರ ಕೆಲಸ ಮಾಡುತ್ತಿದ್ದ ಬಾರ್ ನಲ್ಲಿ ಒಮ್ಮೆ ಒಂದು ರಷ್ಯಾ ದೇಶದ ಸುಂದರ ಹುಡುಗಿ ಬರುತ್ತಾಳೆ. ನಂತರ ನರೇಂದ್ರ ನನ್ನು ಕರೆದು ಒಂದು ಬಿಯರ್ ತರುವಂತೆ ಹೇಳುತ್ತಾಳೆ.
ವಿದೇಶಿ ಹುಡುಗಿಯ ಮಾತಿನಂತೆ ಒಂದು ಬಿಯರನ್ನು ತೆಗೆದುಕೊಂಡು ಬಂದು, ಅವಳ ಮುಂದೆ ಇಟ್ಟು ಗ್ಲಾಸ್ ನಲ್ಲಿ ಬಿಯರ್ ಹಾಕುತ್ತಾನೆ .ಆ ಕ್ಷಣದಲ್ಲಿ ಆಕೆಗೆ ಏನಾಯಿತೋ ಏನೋ? ನರೇಂದ್ರನ ಕಣ್ಣಿನಲ್ಲಿ ಒಂದು ಆಕರ್ಷಣೆ ಕಂಡಿತ್ತಂತೆ. ನಂತರ ಏನಾಯಿತೋ ಗೊತ್ತಿಲ್ಲ, ಅ ಕ್ಷಣದಿಂದ ಆ ರಷ್ಯಾ ಹುಡುಗಿ ನರೇಂದ್ರನನ್ನು ಇಷ್ಟಪಡಲು ಆರಂಭಿಸಿದಳು,ಅಲ್ಲದೆ ನೇರವಾಗಿ ನರೇಂದ್ರನಿಗೆ ತನ್ನ ಪ್ರೇಮದ ವಿಚಾರವನ್ನುಹೇಳಿಬಿಡುತ್ತಾಳೆ .ವಿಶೇಷವೇನೆಂದರೆ ಆಕೆ ಪ್ರಪೋಸ್ ಮಾಡಿದ ತಕ್ಷಣವೇ ಇವಳು ಬೇರೆ ದೇಶದವಳು, ಬೇರೆ ಜಾತಿಯವಳು, ಬೇರೆ ಧರ್ಮದವಳು ಎಂದು ಲೆಕ್ಕಿಸದೇ ಆಕೆಯ ಪ್ರೀತಿಗೆ ಬೆಲೆ ಕೊಟ್ಟು ನರೇಂದ್ರ ಒಪ್ಪಿಕೊಂಡು ಬಿಡುತ್ತಾನೆ.

ನಂತರ ಅವರ ಪ್ರೀತಿ ಚಿಗುರೊಡೆದು ಎಲ್ಲರಿಗೂ ತಿಳಿಯುತ್ತದೇ. ಅಲ್ಲದೇ ಅಲ್ಲಿ ಇಲ್ಲಿ ಸುತ್ತಾಡುತ್ತಿರುತ್ತಾರೆ.ಹೀಗೆ ದಿನಗಳುರುಳಿದಂತೆ ನರೇಂದ್ರನಿಗೆ ಒಂದು ಅಚ್ಚರಿಯ ಸುದ್ದಿ ತಿಳಿದು ಬರುತ್ತದೆ.
ಹೌದು ರಷ್ಯಾದ ಆ ದೇಶದ ಹುಡುಗಿಯ ಹೆಸರು ಅನಸ್ತತ. ಮತ್ತು ಆಕೆ ರಷ್ಯಾದ ಪಾರ್ಲಿಮೆಂಟಿನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ ಎಂಬುದು ನರೇಂದ್ರನಿಗೆ ತಿಳಿಯುತ್ತದೆ ಮತ್ತು ಇದನ್ನು ಕೇಳಿದ ಅವನು ಆಶ್ಚರ್ಯನಾಗುತ್ತಾನೆ.
ಇನ್ನು ಕೆಲಸದ ಕಾರಣದಿಂದ ಆಕೆ ರಷ್ಯಾಗೆ ಹೋಗಿಬಿಡುತ್ತಾಳೆ. ಆಕೆಯನ್ನು ಬಿಟ್ಟಿರಲಾರದ ನರೇಂದ್ರ ಎರಡು ಭಾರಿ ರಷ್ಯಾ ದೇಶಕ್ಕೆ ಹೋಗಿ ಬರುತ್ತಾನೆ. ನಂತರ ಕೆಲಸವನ್ನು ಮುಗಿಸಿ ಮರಳಿ ಭಾರತಕ್ಕೆ ಬಂದ ಅನಸ್ತತ, ನರೇಂದ್ರನನ್ನು ಮದುವೆ ಮಾಡಿಕೊಳ್ಳುತ್ತಾಳೆ. ನಂತರ ಆಕೆಯನ್ನು ನರೇಂದ್ರ ತನ್ನ ಊರಿಗೆ ಕರೆದುಕೊಂಡು ಹೋಗುತ್ತಾನೆ. ಹಳ್ಳಿಯವರು ಈ ಜೋಡಿಯನ್ನು ನೋಡಿ ಸಿಕ್ಕಾಪಟ್ಟೆ ಶಾಕ್ ಆಗುತ್ತಾರೆ.

ಸದ್ಯಕ್ಕೆ ರಷ್ಯಾ ದೇಶದಲ್ಲಿ ನೆಲೆಯೂರಲು ಆಲೋಚನೆ ಮಾಡಿರುವ ನರೇಂದ್ರ ಮತ್ತು ಅನಸ್ತತ ,ವರ್ಷದಲ್ಲಿ ಮೂರು ತಿಂಗಳು ಭಾರತದಲ್ಲಿ ಇರಲು ನಿರ್ಧಾರ ಮಾಡಿದ್ದಾರಂತೆ. ಅನಸ್ತತ ದೊಡ್ಡ ಹುದ್ದೆಯಲ್ಲಿ ಇರುವುದರಿಂದ ಅವಳು ಹೇಳಿದಂತೆ ನರೇಂದ್ರ ಬದುಕಬೇಕು ಎಂದು ನೀವು ಅಂದುಕೊಂಡಿದ್ದರೆ ಅದು ಅಕ್ಷರಶ ತಪ್ಪು, ನರೇಂದ್ರನನ್ನು ತುಂಬಾ ಪ್ರೀತಿ ಮಾಡುವ ಈ ಹುಡುಗಿ ಆತನಿಗೆ ಗೌರವ ಕೊಡುವುದರ ಜೊತೆಗೆ ಆತನ ಮಾತನ್ನ ಚಾಚೂತಪ್ಪದೆ ಪಾಲಿಸುತ್ತಾಳೆ.ನೋಡಿದ್ರಲ್ಲ ಅದೆಷ್ಟು ಜನ ನಾವು ಸುಂದರವಾಗಿಲ್ಲ ನಾವು ಬಿಳುಪಾಗಿಲ್ಲ ಎಂದು ಕೊರಗುತ್ತಿರುತ್ತಾರೆ.. ಆದರೆ ನಿಮ್ಮ ನಡವಳಿಕೆಯನ್ನ ಗಾಡವಾಗಿ ಪ್ರೀತಿ ಮಾಡುವವರು ಒಬ್ಬರಾದವು ಇದ್ದೆ ಇರುತ್ತಾರೆ ಅನ್ನುವುದು ಈ ಪ್ರೇಮಿಗಳಿಂದ ತಿಳಿದು ಬಂದಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು…
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…