God

ದೇವರ ಹುಡುಕಾಟದಲ್ಲಿ… ಈ ಲೇಖನ ಓದಿ

97

ದೇವರ ಹುಡುಕಾಟದಲ್ಲಿ…

ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.

ನಮಗಿಂತ ಮೇಲೆ ‌ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.

ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.

ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.

ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ‌ಆತ್ಮವಿಶ್ವಾಸ ಹೆಚ್ಚಿಸಬಹುದು.

ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.

ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.

ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.

ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.

ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ‌ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.

ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.

ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.

ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.

ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.

ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.

ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.

ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ‌ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.

ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.

ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.

ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.

ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.

ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?

ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ‌ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.

ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.

ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.

ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.

ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

    ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಸುದ್ದಿ

    ವಿಶೇಷ ರೀತಿಯಲ್ಲಿ ಗಣೇಶನ ವಿಸರ್ಜನೆ ಮಾಡಿದ ಕೋಲಾರದ ಜನ..ಕಣ್ಮನ ಸೆಳೆದ ಆ ಮೆರವಣಿಗೆ ಹೇಗಿತ್ತು ಗೊತ್ತ.?

    ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…

  • ಉಪಯುಕ್ತ ಮಾಹಿತಿ

    ಕಾರಿನ ಹಿಂಭಾಗದಲ್ಲಿ ಈ ರೀತಿ ಶೇಪ್ ಯಾಕೆ ಇರುತ್ತದೆ ಗೊತ್ತಾ?

    ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…

  • ಆಧ್ಯಾತ್ಮ

    ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

    ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…