News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಜ್ಞಾನ

ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

107

ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ.

1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ ಉದ್ದೇಶವೇನೆಂದರೆ ಈ ಪ್ರಪಂಚದಲ್ಲಿ ಎಲ್ಲಾ ವಿಮಾನಗಳಿಗಿಂತ ಅತ್ಯಂತ ವೇಗವಾಗಿ ಚಲಿಸುವ ವಿಮಾನವೊಂದನ್ನು ಪ್ರಯಾಣಿಕರಿಗೆ ಹೇಗಾದರೂ ಮಾಡಿ ನಾವು ಒದಗಿಸಬೇಕೆಂಬುದು ಅವರ ಆಸೆಯಾಗಿತ್ತು. ಇನ್ನು ಅವರ ಆಸೆಯಂತೆ ಒಂದು ವಿಮಾನ ಸಿದ್ಧವಾಗಿತ್ತು. ಗಾಳಿಯಲ್ಲಿ ಶಬ್ದದ ವೇಗ ಗಂಟೆಗೆ 1,235 ಕಿ.ಮೀ ಇರುತ್ತದೆ. ಆದರೆ ಇವರು ಸಿದ್ಧಪಡಿಸಿದ ಕಾನ್ ಕಾರ್ಡ್ ವಿಮಾನ ಗಂಟೆಗೆ 2,170 ಕಿ.ಮೀ. ಚಲಿಸುವಂತಹ ಸಾಮರ್ಥ್ಯವನ್ನ ಹೊಂದಿತ್ತು. ಅಂದರೆ ಶಬ್ದದ ವೇಗಕ್ಕಿಂತ 2 ಪಟ್ಟು ಜಾಸ್ತಿ. ಆದರೆ ಆ ಕಾಲಕ್ಕೆ ಆ ಒಂದು ವಿಮಾನ ಸಿದ್ಧ ಹೊಂದುವುದಕ್ಕೆ ಖರ್ಚಾದ ಹಣ ಭಾರಿ ಮೊತ್ತದು.

ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ ಸುಮಾರು 1200 ಕೋಟಿ ರೂಪಾಯಿ ಖರ್ಚಾಗಿತ್ತು.ಇನ್ನೂ ಈ ಒಂದು ವಿಮಾನ ಹೆಚ್ಚಾಗಿ ಸಮುದ್ರ ಮಾರ್ಗದಲ್ಲೇ ತನ್ನ ಪ್ರಯಾಣವನ್ನು ಬೆಳೆಸುತ್ತಿತ್ತು. ಏಕೆಂದರೆ ಈ ಒಂದು ವಿಮಾನದಿಂದ ಬರುತ್ತಿದ್ದಂತಹ ಶಬ್ದ ಭಾರಿ ಶಬ್ದವಾಗಿತ್ತು. ಇನ್ನು ಈಗಿರುವ ವಿಮಾನಗಳು 30ರಿಂದ 38 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತವೆ. ಆದರೆ ಈ ಒಂದು ವಿಮಾನ ಅತ್ಯಂತ ವೇಗವಾಗಿ ಚಲಿಸುವುದಕ್ಕೆ ಸುಮಾರು 60 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತಿತ್ತು. ಇನ್ನೂ ಆಗಿನ ಕಾಲಕ್ಕೆ ಈ ಒಂದು ವಿಮಾನದಲ್ಲಿ ಪ್ರಯಾಣ ಮಾಡಬೇಕೆಂದರೆ ಈಗಿನ ಟೀಕೆಟ್ ಗಳ ದರ ಏನ್ನಿದೆ ಅದರ 30 ರಿಂದ 40 ಪಟ್ಟು ಹೆಚ್ಚು ಹಣವನ್ನ ಕೊಡಬೇಕಾಗಿತ್ತು.

ಏಕೆಂದರೆ ಆಗಿನ ಕಾಲದಲ್ಲೇ ಇದರಲ್ಲಿ ಲಂಡನ್ನಿಂದ ನ್ಯೂಯಾರ್ಕ್ ಗೆ ಪ್ರಯಾಣ ಬೆಳೆಸಬೇಕೆಂದರೆ ಸುಮಾರು 7 ಸಾವಿರಕ್ಕೂ ಹೆಚ್ಚು ಡಾಲರ್ ಹಣವನ್ನು ಕೊಡಬೇಕಾಗಿತ್ತು.ಅಂದರೆ ನಮ್ಮ ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳಬೇಕೆಂದರೆ ಸುಮಾರು 5ಲಕ್ಷ ರೂಪಾಯಿ ಆಗುತ್ತದೆ.ಮತ್ತೆ ಈ ಒಂದು ವಿಮಾನದ ಮೇಂಟೆನೆನ್ಸ್ ತುಂಬಾ ಕಷ್ಟವಾದ್ದರಿಂದ ಆರ್ಥಿಕವಾಗಿ ಈ ಒಂದು ವಿಮಾನ ಹೆಚ್ಚಿನ ಲಾಭವನ್ನು ಮಾಡಲಿಲ್ಲ. 1969 ರಿಂದ ಬೇರೆ ವಿಮಾನಗಳಿಗೆ ಹೋಲಿಸಿದರೆ ಈ ಒಂದು ವಿಮಾನದಲ್ಲಿ ಯಾವುದೇ ರೀತಿಯ ಪ್ರಾಣಹಾನಿಗಳಾಗಿರುವ ಘಟನೆ ನಡೆದ್ದಿಲ್ಲ. ಆದರೆ ಜುಲೈ 25,2000ನೇ ಇಸವಿಯಲ್ಲಿ ಜರುಗಿದ ಈ ಘಟನೆ ಕಾನ್ ಕಾರ್ಡ್ ವಿಮಾನವನ್ನ ಇತಿಹಾಸ ಸೇರಿಕೊಳ್ಳುವಂತೆ ಮಾಡಿತು.  ಅವತ್ತಿನ ದಿನ ಟೇಕಾಫ್ ಆಗುವಂತ ಸಮಯದಲ್ಲಿ ಈ ಒಂದು ವಿಮಾನ ಕ್ರ್ಯಾಶ್ ಆಗಿ ಸುಮಾರು 113 ಜನ ಸಾವನ್ನಪ್ಪಿದ್ದರು. ಈ ಘಟನೆಯಾದ ನಂತರ ಆ ವಿಮಾನ ಮತ್ತೆ ಕಾಣಿಸಿಕೊಳ್ಳಲಿಲ್ಲ.

ಮತ್ತೆ ಕೆಲವೊಂದು ಸೇಫ್ಟಿಗಳೊಂದಿಗೆ 2001ರಲ್ಲಿ ಮತ್ತೆ ತನ್ನ ಸೇವೆಯನ್ನ ಆರಂಭಿಸಿದರು 2003ರ ಹೊತ್ತಿಗೆ ಬ್ರಿಟಿಷ್ ಏರ್ ವೇಸ್ ಇದರವೊಂದು ಸೇವೆಯನ್ನ ನಿಲ್ಲಿಸಿತು. ಕಾನ್ ಕಾರ್ಡ್ ವಿಮಾನ ತಂತ್ರಜ್ಞಾನದಲ್ಲಿ ಒಂದು ಅದ್ಭುತ ವಿಮಾನ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಇವೊಂದು ವಿಮಾನಕ್ಕೆ ಬೇಕಾದಂತಹ ಎನರ್ಜಿ ಮತ್ತೆ ಇವೊಂದು ವಿಮಾನವನ್ನ ಚಲಾಯಿಸಲು ಬೇಕಾದಂತಹ ಇಂಧನ ಇವೆಲ್ಲವನ್ನು ಮೇನ್ಟೇನ್ ಮಾಡುವುದು ತುಂಬಾ ಕಷ್ಟವಾಗಿತ್ತು. ಇಂಧನದ ಬೆಲೆ ಕೂಡ ಹೆಚ್ಚಾಗುತ್ತಿದ್ದುದರಿಂದ ಇದರ ಮೇಂಟೆನೆನ್ಸ್ ತುಂಬಾ ಕಷ್ಟ ಆಗಿತ್ತು. ಆದ್ದರಿಂದ ಬ್ರಿಟಿಷ್ ಏರ್ವೇಸ್ ಇದರ ಸೇವೆಯನ್ನು ನಿಲ್ಲಿಸಿತು. ಈ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಚಲಿಸುವಂತಹ ವಿಮಾನ ಈಗ ಇತಿಹಾಸ ಸೇರಿಕೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt

    ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

    ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌…

  • ಆರೋಗ್ಯ

    ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

    ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

  • ಸುದ್ದಿ

    ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಸಚಿವ. ಈ ಸುದ್ದಿ ನೋಡಿ.!

    ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…

  • ಹಣ ಕಾಸು

    ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

    ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…

  • ಸುದ್ದಿ

    ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

    ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…