ಆರೋಗ್ಯ

ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

179

ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ.

ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ ತಿಳಿಸಿವೆ.

ಆರೋಗ್ಯಕರ ಗುಣವಿರುವ ನಿಂಬೆಹಣ್ಣಿನ ರಸವನ್ನು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದು ತಿಳಿಯದಿದ್ದರೆ ಅಪಾಯ ತಪ್ಪಿದ್ದಲ್ಲ. ನಿಂಬೆ ಹಣ್ಣಿನಲ್ಲಿರುವ ಆಮ್ಲೀಯ ಗುಣ ಹೆಚ್ಚಾಗಿ ದೇಹ ಸೇರಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.

ಎಷ್ಟು ಪ್ರಮಾಣದಲ್ಲಿ ನಿಂಬೆರಸ ಸೇವನೆ ಮಾಡಬೇಕು?
ನಿಂಬೆರಸ ಎಷ್ಟು ಸೇವಿಸಬೇಕು ಎಂಬುದು ವ್ಯಕ್ತಿಯ ವಯಸ್ಸು, ಆರೋಗ್ಯ ಮುಂತಾದವುಗಳ ಮೇಲೆ ಅವಲಂಬಿತವಾಗಿರುತ್ತೆ. ನಿಂಬೆರಸವನ್ನು ಇಷ್ಟೇ ಪ್ರಮಾಣದಲ್ಲಿ ಸೇವಿಸಬೇಕು ಎಂದು ನಿರ್ಧರಿಸಲು ಸಾಕಷ್ಟು ವೈಜ್ಞಾನಿಕ ಮಾಹಿತಿಗಳಿಲ್ಲ. ಆದರೆ ವೈದ್ಯರ ಪ್ರಕಾರ, ದಿನಕ್ಕೆ ಒಂದು ಲೋಟ ಅಥವಾ ಎರಡು ಲೋಟ ನಿಂಬೆರಸ (ಸುಮಾರು 120 ಮಿಲಿ) ಸುರಕ್ಷಿತವೆಂದು ಸೂಚಿಸಲಾಗಿದೆ. ಅದಕ್ಕಿಂತ ಹೆಚ್ಚು ನಿಂಬೆರಸ ಸೇವಿಸುವುದು ಒಳ್ಳೆಯದಲ್ಲ ಎನ್ನಲಾಗುತ್ತೆ.

ಹೆಚ್ಚು ನಿಂಬೆರಸ ಸೇವಿಸಿದ್ರೆ ಏನಾಗುತ್ತೆ?

1. ಹಲ್ಲಿನ ಸಮಸ್ಯೆ
ಅತಿಯಾದ ನಿಂಬೆರಸ ಸೇವನೆಯಿಂದ ಅದರಲ್ಲಿರುವ ಆಮ್ಲೀಯ ಗುಣ ಹಲ್ಲಿನ ಮೆರುಗನ್ನು ನಾಶಗೊಳಿಸಬಹುದು. ಇತರೆ ತಂಪು ಪಾನೀಯಗಳಂತೆ ನಿಂಬೆರಸ ಕೂಡ ಹಲ್ಲಿನ ಸಮಸ್ಯಗೆ ಕಾರಣವಾಗಿದೆ. ಆದರೆ ನಿಂಬೆರಸ ಸೇವನೆಯ ಬಳಿಕ ಹಲ್ಲನ್ನು ಉಜ್ಜುವುದರಿಂದ ಹಲ್ಲಿನ ಸವೆತವನ್ನು ತಡೆಗಟ್ಟಬಹುದು.

2. ಮೈಗ್ರೇನ್ ಹೆಚ್ಚಿಸುತ್ತದೆ
ಸಿಟ್ರಸ್ ಹಣ್ಣುಗಳು ಮೈಗ್ರೇನ್ ಅನ್ನು ಹೆಚ್ಚು ಮಾಡುತ್ತದೆ. ಸಿಟ್ರಸ್ ಹಣ್ಣುಗಳನ್ನು ಮಿತಿಮೀರಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ. ಈ ಹಣ್ಣುಗಳು ಅಲರ್ಜಿ ಉಂಟುಮಾಡುವುದರ ಮೂಲಕ ಮೈಗ್ರೇನ್‍ಗೆ ಕಾರಣವಾಗಬಹುದು. ಸಿಟ್ರಸ್ ಹಣ್ಣುಗಳಲ್ಲಿ ಟೈರಮೈನ್ ಅಂಶ ಇರುತ್ತದೆ. ಇದು ಮೈಗ್ರೇನ್ ಗೆ ಪ್ರಮುಖ ಕಾರಣವಾಗಿದೆ.

3. ಎದೆಯುರಿ ಉಂಟುಮಾಡುತ್ತದೆ
ಕೆಲವು ಸಂಶೋಧನೆಗಳ ಪ್ರಕಾರ, ಸಿಟ್ರಸ್ ಅಂಶ ಒಳಗೊಂಡ ಹಣ್ಣುಗಳು ಎದೆಯುರಿ ಅಥವಾ ಆಸಿಡ್ ರಿಫ್ಲಕ್ಸ್ ಗೆ ಕಾರಣವಾಗಬಹುದು. ನಿಂಬೆರಸ ಎದೆಯುರಿಯನ್ನು ಹೆಚ್ಚಿಸಬಹುದು ಮತ್ತು ಕಡಿಮೆ ಮಾಡಲೂ ಬಹುದು. ಆದರೆ ಅತೀಯಾಗಿ ನಿಂಬೆರಸ ಸೇವಿಸಿದರೆ ಎದೆಯುರಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಎದೆಯುರಿ ಸಮಸ್ಯೆ ಇದ್ದರೆ ನಿಂಬೆರಸ ಅಥವಾ ಯಾವುದೇ ಸಿಟ್ರಿಕ್ ಅಂಶದ ಪಾನಿಯ ಕುಡಿಯುವ ಮೊದಲು ವೈದ್ಯರ ಸಲಹೆ ಪಡೆಯೋದು ಸೂಕ್ತ.

4. ಬಾಯಿ ಹುಣ್ಣನ್ನು ಉಲ್ಬಣಗೊಳಿಸಬಹುದು
ಬಾಯಿ ಹುಣ್ಣುಗಳಲ್ಲಿ ಕ್ಯಾಂಕರ್ ಹುಣ್ಣುಗಳು ಒಂದು ರೂಪ. ಇವು ಬಾಯಿಯೊಳಗೆ ಉಂಟಾಗುವ ಹುಣ್ಣುಗಲಾಗಿದ್ದು, ಹೆಚ್ಚು ನೋವಿನಿಂದ ಕೂಡಿರುತ್ತವೆ. ಸಿಟ್ರಿಕ್ ಆಮ್ಲವು ಬಾಯಿಯ ಹುಣ್ಣುಗಳನ್ನು ಇನ್ನಷ್ಟು ಹೆಚ್ಚು ಮಾಡುವುದರಿಂದ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

    ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…