ವಿಚಿತ್ರ ಆದರೂ ಸತ್ಯ

7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

137

ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ ನಿಶ್ಚಿತ. ಇನ್ನು ಈ ಸೃಷ್ಟಿಯಲ್ಲಿ ಕೆಲವು ಪ್ರಾಣಿಗಳು ವಾರಗಟ್ಟಲೆ ಆಹಾರವನ್ನ ಸೇವನೆ ಮಾಡದೆ ಬದುಕುತ್ತದೆ, ಆದರೆ ನಾವು ಹೇಳುವ ಈ ಜೀವಿ ಮಾತ್ರ ಏಳು ವರ್ಷದಿಂದ ಏನನ್ನೂ ಕೂಡ ತಿನ್ನದೇ ನಿಂತಲ್ಲೇ ನಿಂತಿದೆ ಮತ್ತು ಅಷ್ಟೇ ಅಲ್ಲದೆ ಬದುಕಿದೆ ಕೂಡ.

ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಆ ಜೀವಿ ಯಾವುದು ಅನ್ನುವುದರ ಬಗ್ಗೆ ತಿಳಿಯೋಣ. ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಈ ಪ್ರಾಣಿಯ ಹೆಸರು ಕೇವ್ ಸಲಮೆಂಡರ ಅನ್ನುವ ಹಲ್ಲಿ ಜಾತಿಗೆ ಸೇರಿದ ಜೀವಿ, ಇನ್ನು ಈ ಜೀವಿಗಳು ಹೆಚ್ಚಾಗಿ ಯೂರೋಪ್ ನ ಬೋಸ್ನಿಯಾ ದೇಶದ ನೈಸರ್ಗಿಕ ಗುಹೆಗಳಲ್ಲಿ ವಾಸ ಮಾಡುತ್ತದೆ, ಗುಹೆಗಳಲ್ಲಿ ವಾಸ ಮಾಡುವ ಈ ಜೀವಿ ತುಂಬಾ ವಿಚಿತ್ರವಾದ ಪ್ರಾಣಿಗಳು ಆಗಿವೆ ಮತ್ತು ಇದಕ್ಕೆ ಕಾರಣ ಅವುಗಳು ಕ್ರಮಿಸುವ ದೂರ ಆಗಿದೆ.

ಇನ್ನು ಈ ಹಲ್ಲಿಗಳನ್ನ ಸೋಮಾರಿ ಹಲ್ಲಿಗಳೆಂದು ಕರೆಯಲಾಗುತ್ತದೆ, ಹೌದು ಹತ್ತು ವರ್ಷದಲ್ಲಿ ಈ ಹಲ್ಲಿಗಳು ಕ್ರಮಿಸುವ ದೂರ ಕೇವಲ 32 ಮೀಟರ್ ಮಾತ್ರ, ಈಗ ವಿಜ್ಞಾನಿಗಳಿಗೆ ಸವಾಲಾಗಿ ನಿಂತಿರುವುದು ಎಲ್ಲಾ ಸಲಮೆಂಡರ ಜಾತಿಯ ಹಲ್ಲಿಗಳು ಅಲ್ಲ ಬದಲಾಗಿ ಒಂದು ಹಲ್ಲಿ ಮಾತ್ರ. ಹೌದು ಬರೋಬ್ಬರಿ ಏಳು ವರ್ಷದಿಂದ ನಿಂತಲ್ಲೇ ನಿಂತಿರುವ ಈ ಒಂದು ಹಲ್ಲಿ ನಿಂತ ಜಾಗದಿಂದ ಸ್ವಲ್ಪನೂ ಕದಲದೆ ಯಾವುದೇ ಆಹಾರ ಕೂಡ ಸೇವನೆ ಮಾಡದೆ ಇನ್ನು ಜೀವಂತವಾಗಿದೆ. ಇನ್ನು ಏಳು ವರ್ಷದಿಂದ ಯಾವುದೇ ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಹೇಗೆ ಬದುಕಿದೆ ಎಂದು ತಿಳಿಯಲು ವಿಜ್ಞಾನಿಗಳು ಎಷ್ಟೇ ಪ್ರಯತ್ನ ಮಾಡಿದರು ಅವರಿಂದ ಅದನ್ನ ತಿಳಿದುಕೊಳ್ಳಲು ಸಾಧ್ಯವಾಗಿಲ್ಲ.

ಇನ್ನು ಸಿಕ್ಕಿರುವ ಕೆಲವು ಮಾಹಿತಿಗಳ ಪ್ರಕಾರ ಈ ಜಾತಿಯ ಹಲ್ಲಿಗಳು ಹತ್ತಾರು ವರ್ಷ ಬದುಕುತ್ತದೆ ಮತ್ತು ಕೆಲವೊಮ್ಮೆ ನೂರು ವರ್ಷ ಬದುಕುವುದು ಕೂಡ ಉಂಟು, ಆದರೆ ಯಾವುದೇ ಆಹಾರವನ್ನ ಸೇವನೆ ಮಾಡದೆ ನಿಂತಲ್ಲೇ ಏಳು ವರ್ಷದಿಂದ ನಿಂತಿಯುವ ಈ ಹಲ್ಲಿ ವಿಜ್ಞಾನ ಲೋಕಕ್ಕೆ ದೊಡ್ಡ ಸವಾಲಾಗಿ ನಿಂತು ದೊಡ್ಡ ದಾಖಲೆಯನ್ನ ಮಾಡಿದೆ. ತನಗೆ ಎಲ್ಲಾ ಗೊತ್ತು ಎಂದು ಭೀಗುವ ಮಾನವನಿಗೆ ನಿನಗೆ ಏನು ಗೊತ್ತಿಲ್ಲ ಎಂದು ಈ ಹಲ್ಲಿಯ ಮೂಲಕ ಸವಾಲನ್ನ ಎಸೆಯುತ್ತಿದೆ ಪ್ರಕೃತಿ, ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಇನ್ನು ಎಷ್ಟು ವರ್ಷ ಬದುಕುತ್ತದೆ ಎಂದು ನಾವು ಕಾದು ನೋಡಬೇಕಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

    ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…

  • ಕರ್ನಾಟಕ

    ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ಸುದ್ದಿ

    ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…

  • ರಾಜಕೀಯ

    ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

    ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

  • ಸುದ್ದಿ

    ಮೂತ್ರ ವಿಸರ್ಜನೆ ಮಾಡುವುದಕ್ಕಾಗಿ ಚಲಿಸುತ್ತಿದ್ದ ರೈಲನ್ನೇ ನಿಲ್ಲಿಸಿದ ಚಾಲಕ- ಕ್ರಮಕ್ಕೆ ಆಗ್ರಹ….!

    ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್‌ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…