ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಆಯೋಗದ ಸಮಿತಿ ಸದಸ್ಯರು, ಮನುಷ್ಯರಾಗಿ ಇಂತಹ ಹೀನ ಕೃತ್ಯಗಳನ್ನು ಸಹಿಸಲಸಾಧ್ಯ ಎಂದು ಆಯೋಗ ಸದಸ್ಯರು ಹೇಳಿದ್ದಾರೆ. ಸಂತ್ರಸ್ತ ಯುವಕ ಫಾರೂಖ್ ಅಹ್ಮದ್ ದಾರ್ಗೆ ಮುಂದಿನ 6 ವಾರದ ಒಳಗಡೆ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ದೇಶದಲ್ಲಿ ಶಾಂತಿ ಸುವ್ಯವಸ್ಥೆ ರಕ್ಷಣೆಗೆ ಹಲವು ಕಾನೂನುಗಳಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲೂ ಇಂತಹ ಕೃತ್ಯಗಳಿಗೆ ಕಾನೂನು ನೆರವು ನಾಗರಿಕ ಸಮಾಜದಲ್ಲಿ ಆರೋಪಿಯನ್ನು ಹೀಗೆ ಹೀನಾಯವಾಗಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ಮಾನವ ಹಕ್ಕು ಆಯೋಗ ಹೇಳಿದೆ.
ಈ ಪ್ರಕರಣದ ನಡೆದ ಬಳಿಕ ಭಾರತೀಯ ಸೇನೆ ಮಾನವ ಗುರಾಣಿಯಾಗಿ ಯುವಕನನ್ನು ಬಳಸಿದ್ದಕ್ಕೆ, ಲೀತುಲ್ ಗೊಗೋಯ್ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿತ್ತು. ಈ ಸುದ್ದಿ ಚರ್ಚೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಗರಿಕರ ಜೀವ ರಕ್ಷಿಸಲು ನಾನು ಈ ಕೆಲಸ ಮಾಡಬೇಕಾಯಿತು ಎಂದು ಹೇಳಿದ್ದರು.
ಏನಿದು ಪ್ರಕರಣ?
ಕಳೆದ ಏಪ್ರಿಲ್’ನಲ್ಲಿ ಶ್ರೀನಗರ ಲೋಕಸಭೆಯ ಉಪಚುನಾವಣೆ ನಡೆದಿದ್ದು,ಈ ಚುನಾವಣೆಯನ್ನು ಕಾಶ್ಮೀರ ಪ್ರತ್ಯೇಕವಾದಿಗಳು ವಿರೋಧಿಸಿದ್ದರು. ಚುನಾವಣೆಗೆ ನಿಯೋಜನೆಗೊಂಡಿದ್ದ ಸೇನಾ ಸಿಬ್ಬಂದಿಯನ್ನು ಪ್ರತಿಭಟನಾಕಾರರು ಸುತ್ತುವರೆದು ದಾಳಿ ನಡೆಸುತ್ತಿದ್ದರು. ಆಗ ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ವ್ಯಾಪಕ ಹಿಂಸಾಚಾರ ಮತ್ತು ಕಲ್ಲು ತೂರಾಟ ನಿಗ್ರಹಕ್ಕಾಗಿ ಸೇನಾ ಯೋಧ ಮೇಜರ್ ನಿತಿನ್ ಗಗೋಯ್ ಅವರು, ಕಲ್ಲು ತೂರಾಟಗಾರರ ನಾಯಕ ರೂಕ್ ಅಹ್ಮದ್ ದಾರ್ ನನ್ನು ಸೇನಾವಾಹನಕ್ಕೆ ಕಟ್ಟಿ ಮಾನವ ಗುರಾಣಿಯಾಗಿ ಬಳಕೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.
ಈ ಕುರಿತು ಸೇನೆ ತನಿಖೆಗೆ ಆದೇಶಿಸಿದ್ದು, ನಿತಿನ್ ಗಗೋಯ್ಅ ವರ ವಿರುದ್ಧ ಪೊಲೀಸರು ಎಫ್ಐಆರ್ ಸಹ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೇನಾ ಕೋರ್ಟ್ ಕ್ಲೀನ್ ಚಿಟ್ ನೀಡಿ ನಿತಿನ್ ಗಗೋಯ್ ಅವರನ್ನು ಶ್ಲಾಘಿಸಿತ್ತು.
ಇದರ ಬಗ್ಗೆ ಮಾತನಾಡಿದ್ದ ನಿತಿನ್ ಗಗೋಯ್’ರವರು, ಕಲ್ಲು ತೂರಾಟಗಾರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಮಕ್ಕಳು, ಮಹಿಳೆಯರೂ ಇದ್ದರು. ನಾನು ಧ್ವನಿವರ್ಧಕದಲ್ಲಿ ಎಚ್ಚರಿಕೆ ಕೊಟ್ಟಿದ್ದರೂ ಪ್ರತಿಭಟನೆಕಾರರು ಮಣಿಯಲಿಲ್ಲ. ಹೀಗಾಗಿ ಅಲ್ಲಿದ್ದ ಚುನಾವಣಾ ಅಧಿಕಾರಿಗಳನ್ನು, ಜನರನ್ನು, ಪೊಲೀಸರನ್ನು ರಕ್ಷಿಸಲು ನಾನು ಆತನನ್ನು ಸೇನಾ ಜೀಪಿಗೆ ಕಟ್ಟಿದ್ದೆ. ಒಂದು ವೇಳೆ ನಾವು ಗೋಲಿಬಾರ್ ನಡೆಸಲು ಆದೇಶಿಸಿದ್ದರೆ ಅಲ್ಲಿನ ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದರು ಎಂದು ನಿತಿನ್ ಗಗೋಯ್’ರವರು ಅವರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…