ಸುದ್ದಿ

ರೈತನ ಹೆಸರಿಗೆ ರೈಲನ್ನ ಬರೆದುಕೊಟ್ಟ ನ್ಯಾಯಾಲಯ, ಕಾರಣ ಮಾತ್ರ ಶಾಕಿಂಗ್.

86

ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ. ನಾವು ಈಗ ಹೇಳುತ್ತಿರುವ ಘಟನೆಯನ್ನ ಕೇಳಿದರೆ ನಿಮಗೆ ಒಂದು ಕ್ಷಣ ಶಾಕ್ ಆಗುವುದು ಗ್ಯಾರೆಂಟಿ, ಹೌದು ಒಂದು ಶತಾಬ್ದಿ ಎಕ್ಸ್ಪ್ರೆಸ್ ರೈಲನ್ನ ಒಬ್ಬ ರೈತನ ಹೆಸರಿಗೆ ಬರೆದುಕೊಟ್ಟ ಪ್ರಕರಣದ ಬಗ್ಗೆ ನೀವು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ.

ಈ ವಿಚಿತ್ರವಾದ ಪ್ರಕರಣ ನಡೆದಿದ್ದು ಚಂಡೀಗಢದ ಲೂಧಿಯಾನ ಅನ್ನುವ ಪ್ರದೇಶದಲ್ಲಿ, ಇಲ್ಲಿನ ಜಿಲ್ಲಾ ಸೆಕ್ಷನ್ ಕೋರ್ಟ್ ಇಂತಹ ಒಂದು ಸಂಚಲವನ್ನ ಉಂಟುಮಾಡುವ ತೀರ್ಪನ್ನ ಕೊಡುತ್ತದೆ, ಹಾಗಾದರೆ ಆ ತೀರ್ಪು ಏನು ಮತ್ತು ಅಂತಹ ತೀರ್ಪು ಕೊಡಲು ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ. ರೈಲು ಹಳಿಗಳ ನಿರ್ಮಾಣದ ಸಮಯದಲ್ಲಿ ಭೂಮಿಯನ್ನ ಕಳೆದುಕೊಂಡ ರೈತರಿಗೆ ಅವರ ಭೂಮಿಗೆ ಆ ಸಮಯದಲ್ಲಿ ಇದ್ದ ಬೆಲೆಯನ್ನ ಕೊಡಲಾಗಿತ್ತು ಮತ್ತು ಆ ಕುಟುಂಬದ ಸದಸ್ಯರಿಗೆ ರೈಲ್ವೆ ಇಲಾಖೆಯನ್ನ ನೌಕರಿಯನ್ನ ಕೂಡ ಕೊಡಲಾಗಿತ್ತು.

2012 ರಲ್ಲಿ ರೈಲು ಹಳಿಗಳ ನಿರ್ಮಾಣ ಮಾಡುವ ಸಲುವಾಗಿ ಸಂಪೂರಣ್ ಸಿಂಗ್ ಅನ್ನುವ 45 ವರ್ಷದ ಒಬ್ಬ ರೈತನಿಂದ ಭೂಮಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು ಮತ್ತು ರೈತನಿಗೆ ಭೂಮಿಯ ನಷ್ಟ ಭರ್ತಿಗಾಗಿ 1.45 ಕೋಟಿ ರೂಪಾಯಿಯನ್ನ ರೈಲ್ವೆ ಇಲಾಖೆಯವರು ಕೊಡಬೇಕಾಗಿತ್ತು. ರೈಲ್ವೆ ಇಲಾಖೆಯವರು ಆ ರೈತನಿಗೆ ಅಷ್ಟು ಹಣವನ್ನ ಕೊಡದೆ ಕೇವಲ 42 ಲಕ್ಷ ಹಣವನ್ನ ಕೊಟ್ಟು ಸುಮ್ಮನಾಗಿತ್ತು, ತನಗೆ ಹಣ ಸಿಗದ ಕಾರಣ ಸಂಪೂರಣ್ ಸಿಂಗ್ ನ್ಯಾಯಾಲದ ಮೊರೆ ಹೋಗಿದ್ದಾರೆ. ಇನ್ನು ಈತನ ಕೇಸ್ ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲಯ 2015 ರಲ್ಲಿ ಜಿಲ್ಲಾ ನ್ಯಾಯಾಲಯವು ರೈತನಿಗೆ ಕೊಡಬೇಕಾಗಿದ್ದ ಪೂರ್ತಿ ಹಣವನ್ನ ಕೊಡಬೇಕು ಎಂದು ರೈಲ್ವೆ ಇಲಾಖೆಗೆ ಆದೇಶವನ್ನ ಹೊರಡಿಸುತ್ತದೆ ಜಿಲ್ಲಾ ನ್ಯಾಯಾಲಯ.

ನ್ಯಾಯಾಲಯದ ಈ ಆದೇಶಕ್ಕೆ ರೈಲ್ವ ಇಲಾಖೆ ಯಾವುದೇ ರೀತಿಯ ಸ್ಪಂಧನೆಯನ್ನ ಕೊಡುವುದಿಲ್ಲ, ಈ ಸಮಯದಲ್ಲಿ ಏನು ಮಾಡಬೇಕು ಎಂದು ತೋಚದ ಸಂಪೂರಣ್ ಸಿಂಗ್ ಮತ್ತೇ ನ್ಯಾಯಾಲಯದ ಮೊರೆ ಹೋಗುತ್ತಾರೆ. ಈ ಸಮಯದಲ್ಲಿ ಆತನ ಕೇಸನ್ನು ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲದ ಹೆಚ್ಚುವರಿ ನ್ಯಾಯಾಧೀಶರಾದ ಜೈಪಾಲ್ ವರ್ಮಾ ಅವರು ಸ್ವರ್ಣ ಶತಾಬ್ದಿ ಎಕ್ಪ್ರೆಸ್ಸ್ ನಂಬರ್ 12030 ರೈಲನ್ನ ಆ ರೈತನ ಕೊಡಬೇಕು ಎಂದು ಒಂದು ಸಂಚಲನದ ತೀರ್ಪನ್ನ ಹೊರಡಿಸುತ್ತಾರೆ. ಈ ತೀರ್ಪನ್ನ ಕೇಳಿದ ರೈಲ್ವೆ ಇಲಾಖೆಗೆ ಅವರ ತಪ್ಪಿನ ಅರಿವಾಗಿ ನ್ಯಾಯಾಲದ ಬಳಿ ಕ್ಷಮೆಯನ್ನ ಕೋರಿ ಆ ರೈತನಿಗೆ ಕೊಡಬೇಕಾಗಿದ್ದ ಭಾಕಿ ಹಣವನ್ನ ಕೊಡುತ್ತಾರೆ. ನ್ಯಾಯಾಲಯ ಕೊಟ್ಟ ಆ ಸಂಚಲನ ತೀರ್ಪಿನಿಂದ ರೈಲ್ವೆ ಇಲಾಖೆಗೆ ಭಾರಿ ಮುಖಭಂಗ ಆಗಿದ್ದು ಮಾತ್ರ ನಿಜ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಒಂದೇ ದಿನಕ್ಕೆ 1.26 ಲಕ್ಷ ಸರ್ಕಾರಿ ಉದ್ಯೋಗ….! ಯಾರ್ಯಾರಿಗೆ,ಇಲ್ಲಿದೆ ನೋಡಿ ಮಾಹಿತಿ,.!!

    ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…

  • ಉಪಯುಕ್ತ ಮಾಹಿತಿ

    ಕಾರಿನ ಹಿಂಭಾಗದಲ್ಲಿ ಈ ರೀತಿ ಶೇಪ್ ಯಾಕೆ ಇರುತ್ತದೆ ಗೊತ್ತಾ?

    ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…

  • ಸುದ್ದಿ

    ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ನೀಡುವಂತೆ ಸಚಿವ ಸಂಪುಟ ಅಸ್ತು…!

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ‌ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…

  • ಸುದ್ದಿ

    ಬೆಳಕಿನ ಹಬ್ಬ ದೀಪಾವಳಿಯ ಸೊಬಗು ಹೆಚ್ಚಿಸುವ ದೀಪಗಳ ಇಂದಿರುವ ಮಹತ್ವಗಳೇನು ಗೊತ್ತಾ..?

    ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…