ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು. ಇನ್ನು ಈ ಸಿನೆಮಾ ಅಂದಿನ ಕಾಲದಲ್ಲೇ ಸುಮಾರ 20 ಕೋಟಿ USD ಯಲ್ಲಿ ನಿರ್ಮಾಣ ಮಾಡಲಾಗಿತ್ತು, ಜೇಮ್ಸ್ ಕ್ಯಾಮರೂನ್ ಇರ್ದೆಶಿಸಿದ ಈ ಚಿತ್ರ ಇಂದಿಗೂ ಒಂದು ದೊಡ್ಡ ಸಾಧನೆಯೇ ಸರಿ.

ಇನ್ನು ಈ ಟೈಟಾನಿಕ್ ಮುಳುಗಿ ಅದರ ಅವಶೇಷಗಳು ಈಗಲೂ ಸುಮುದ್ರದಾಳದಲ್ಲಿ ಇರುವುದು ನಮಗೆಲ್ಲ ತಿಳಿದೇ ಇದೆ. ಪ್ರಪಂಚದ ಅತಿ ದೊಡ್ಡ ಹಡಗು ಮುಳುಗಿ ಎಷ್ಟೊಂದು ಜನ ಸಾವನ್ನಪ್ಪಿದರೂ ಕೂಡ ಈ ಹಡಗನ್ನು ಮೇಲೆತ್ತುವ ಕೆಲಸವನ್ನು ಇಂದಿಗೂ ಕೂಡ ಮಾಡಿಲ್ಲ ಯಾಕೆ ಗೊತ್ತಾ. ಯಾಕೆ ಟೈಟಾನಿಕ್ ಇನ್ನು ಸಮುದ್ರದಲ್ಲೇ ಇದೆ ಇದನ್ನು ಎತ್ತುವ ಪ್ರಯತ್ನ ಮಾಡಿ ಯಾವುದಾದರೂ ಒಂದು ಮ್ಯೂಸಿಯಂ ಮಾಡಾಬಹುದಲ್ಲ ಎನ್ನುವ ಪ್ರಶ್ನೆ ಹಲವರನ್ನು ಕಾಡುತ್ತದೆ, ಸ್ನೇಹಿತರೆ ಈ ವಿಶಾಲ ಹಡಗಿನ ಬಗ್ಗೆ ಇರುವ ರೋಚಕ ಸಂಗತಿ ತಿಳಿಯಿರಿ. 1912 ರಲ್ಲಿ ಮುಳುಗಿದ ಈ ಶಿಪ್ ಬಹಳ ವಿಶಾಲವಾದ ಗಾತ್ರ ಹೊಂದಿತ್ತು, ಈ ಶಿಪ್ ಮುಳುಗಿ ಈಗಾಗಲೇ ನೂರಕ್ಕೂ ಅಧಿಕ ವರ್ಷವಾಗಿದೆ.

ಪ್ರಸ್ತುತ ಈ ಹಡಗು ಈಗ 12,500 ಅಡಿಗಳಷ್ಟು ಆಳದಲ್ಲಿದೆ, ಅಷ್ಟೊಂದು ಆಳದಲ್ಲಿರುವ ಇದನ್ನು ಎತ್ತುವುದು ಕೂಡ ಅಸಾಧ್ಯದ ಕೆಲಸ ಏಕೆಂದರೆ ಅಷ್ಟೊಂದು ಆಳದಿಂದ ಮೇಲ್ಬರುವ ಸಮಯದಲ್ಲಿ ಇದು ಹಲವಾರು ಒತ್ತಡಗಳನ್ನು ಅನುಭವಿಸುತ್ತದೆ ಹೀಗಾಗಿ ಯಾವುದೇ ಕ್ಷಣದಲ್ಲೂ ಕೂಡ ಇದು ಕುಸಿದು ಮತ್ತೆ ನೀರಿನ ಆಳಕ್ಕೆ ಬೀಳಬಹುದು. ಟೈಟಾನಿಕ್ ಅನ್ನು ಮೇಲೆತ್ತಿದರೂ ಕೂಡ ನೀವು ಆ ಹಡಗನ್ನು ಎಲ್ಲಿ ಇಡುತ್ತೀರಿ ಎನ್ನುವುದೇ ಒಂದು ದೊಡ್ಡ ಪ್ರಶ್ನೆಯಾಗಿದೆ, 1912 ರಲ್ಲಿ ಟೈಟಾನಿಕ್ 882 ಅಡಿ ಉದ್ದವಿತ್ತು, ಇದು ಈಗಲೂ ಸಾಕಷ್ಟು ದೊಡ್ಡ ಗಾತ್ರವಾಗಿದೆ. ನೀರೊಳಗಿನ ಈ ಅವಶೇಷ ಸದ್ಯಕ್ಕೆ ಸಂಪೂರ್ಣ ಹದಗೆಟ್ಟಿದೆ ಮತ್ತು ಅದನ್ನು ತಂದು ಭೂಮಿ ಮೇಲೆ ಇಡುವುದು ಮೂರ್ಖತನ ಎನ್ನುವುದು ಹಲವರ ವಾದ ಇನ್ನು ಮತ್ತೊಂದು ಮುಖ್ಯ ಕಾರಣ ಎಂದರೆ ಟೈಟಾನಿಕ್ ಹಡಗಿನ ವಾರಸುದಾರ ಯಾರು ಎನ್ನುವ ಬಗ್ಗೆ ಹಲವಾರು ಗೊಂದಲಗಳಿವೆ, ಇದು ಯಾವ ಕಂಪನಿಯ ಸೊತ್ತು ಎನ್ನುವುದರ ಬಗ್ಗೆ ಕೆಲವು ಸಮಸ್ಯೆಗಳಿವೆ.

ಟೈಟಾನಿಕ್ ಮೇಲೆತ್ತದೆ ಇರಲು ಮತ್ತೊಂದು ಮುಖ್ಯ ಕಾರಣ ಎಂದರೆ ಹಣದ ದುಂದು ವೆಚ್ಚ, ಉದಾಹರಣೆಗೆ 50 ಅಡಿ ವಿಹಾರ ನೌಕೆಯನ್ನು ನೀವು ಮೇಲೆತ್ತಲು ಕೇವಲ ಏರ್ಬ್ಯಾಗ್ಗಳ ಬಳಕೆಗಾಗಿ ಗಂಟೆಗೆ $ 250 ಖರ್ಚಾಗುತ್ತದೆ. ಇನ್ನು ಇಷ್ಟೊಂದು ಭಾರಿ ಗಾತ್ರದ ಹಡಗನ್ನು ಈ ಬ್ಯಾಗ್ ಗಳ ಮೂಲಕ ಎತ್ತುವುದು ಎಂದರೆ ಅದು ದುಬಾರಿ ಮತ್ತು ಕೆಲಸಕ್ಕೆ ಬಾರದ್ದು ಎನ್ನಲಾಗಿದೆ. ಇನ್ನು ಈ ದುರಂತದಲ್ಲಿ ಮೃತಪಟ್ಟವರ ನೆನಪಿನ ಜೀವಂತ ಸಮಾಧಿ ಇದು ಎಂದು ಎಷ್ಟೋ ಜನರು ಇವತ್ತಿಗೂ ಕೂಡ ಅಂದುಕೊಂಡಿದ್ದಾರೆ, ಹಾಗಾಗಿ ಇದಕ್ಕೆ ಅಡಚಣೆ ಮಾಡಬಾರದು ಎನ್ನುವ ವಾದ ಕೂಡ ಇದೆ. ಈ ಎಲ್ಲಾ ಕಾರಣದಿಂದ ಟೈಟಾನಿಕ್ ಮೇಲೆತ್ತುವ ಗೋಜಿಗೆ ಯಾರು ಕೂಡ ಹೋಗಿಲ್ಲ ಮತ್ತು ಹೋದರು ಕೂಡ ಅದೊಂದು ವ್ಯರ್ಥ ಪ್ರಯತ್ನ ಎಂದು ಎಷ್ಟೋ ಕಂಪನಿಗಳು ಈಗಾಗಲೇ ನಂಬಿ ಬಿಟ್ಟಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…