ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ ಹೇಳಿದ್ದವು ಆದರೆ ಸದ್ಯಕ್ಕೆ ಸರ್ಕಾರ ಈ ಸುದ್ದಿಯನ್ನು ತಳ್ಳಿ ಹಾಕಿದೆ. ಹೌದು ದೇಶ ಹಿಂದೆಂದೂ ಕಂಡಿರದ ಅದ್ಬುತ ಯಶಸ್ಸೊಂದನ್ನು ಪತ್ತೆಹಚ್ಚುವಲ್ಲಿ ವಿಜ್ಞಾನಿಗಳು ಯಶಸ್ಸನ್ನು ಪಡೆದಿರುವುದು ನಿಜ. ಆದರೆ ನಿಜಕ್ಕೂ ಈ ಸ್ಥಳದಲ್ಲಿ ಅಷ್ಟೊಂದು ಪ್ರಮಾಣದ ಚಿನ್ನದ ಗಣಿ ಇದೆಯಾ ಇದರ ಬಗ್ಗೆ ವಿಜ್ಞಾನಿಗಳು ಹೇಳಿದ್ದೇನು ನೋಡೋಣ.

ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್ಐ) ಮತ್ತು ಉತ್ತರ ಪ್ರದೇಶ ಭೂವಿಜ್ಞಾನ ಮತ್ತು ಗಣಿಗಾರಿಕೆ ನಿರ್ದೇಶನಾಲಯವು ಉತ್ತರಪ್ರದೆಶದಲ್ಲಿನ ಸೋನ್ಭದ್ರ ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪಗಳನ್ನು ಕಂಡುಹಿಡಿದಿದೆ. ವರದಿಗಳ ಪ್ರಕಾರ, ಚಿನ್ನದ ನಿಕ್ಷೇಪಗಳು ಸೋನ್ಪಹಡಿ ಮತ್ತು ಹಾರ್ಡಿ ಕ್ಷೇತ್ರ ಎಂಬ ಎರಡು ಸ್ಥಳಗಳಲ್ಲಿ ಕಂಡುಬಂದಿವೆ. ಆದರೆ ಈ ಪ್ರದೇಶದಲ್ಲಿ ಟನ್ ಗಟ್ಟಲೆ ಚಿನ್ನ ಸಿಕ್ಕಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ಈಗ ತಳ್ಳಿ ಹಾಕಿದ್ದಾರೆ. ನಮಗೆ ಸಿಕ್ಕಿರುವ ಅಂದಾಜಿನ ಪ್ರಕಾರ 160 ಕೆಜಿ ಚಿನ್ನವನ್ನಷ್ಟೇ ತೆಗೆಯಬಹುದಾಗಿದೆ. ಒಟ್ಟಾರೆ 56000 ಟನ್ ಚಿನ್ನದ ಅದಿರು ದೊರಕಬಹುದು ಅಷ್ಟೇ ಅದರಿಂದ ಶುದ್ದೀಕರಣ ಆದ ಬಳಿಕ ಏನಿಲ್ಲವೆಂದರೂ 160 ಕೆಜಿ ಚಿನ್ನ ಸಿಗಬಹುದು ಎಂದಿದ್ದಾರೆ.

ಉತ್ತರ ಪ್ರದೇಶದ ಸೋನ್ಭದ್ರದಲ್ಲಿ ಸುಮಾರು 3,350 ಟನ್ ಚಿನ್ನದ ಠೇವಣಿ ಪತ್ತೆಯಾಗಿಲ್ಲ ಎಂದು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್ಐ) ಶನಿವಾರ ತಿಳಿಸಿದೆ ಎಂದು ಸ್ಥಳೀಯ ಗಣಿಗಾರಿಕೆ ಅಧಿಕಾರಿಗಳನ್ನು ಉಲ್ಲೇಖಿಸಿ ಹೇಳಲಾಗಿದೆ. ನಮ್ಮ ಹುಡುಕಾಟದ ಸಮಯದಲ್ಲಿ, ನಾವು 120 ಮೀಟರ್ ಮತ್ತು 50 ಮೀಟರ್ ಆಳದ ಕಂದಕವನ್ನು ಹೊಂದಿರುವ ಬಾವಿಗಳನ್ನು ಅಗೆದಿದ್ದೇವೆ. ನಮ್ಮ ವರದಿಯಲ್ಲಿ, ನಾವು ಆಳವಾಗಿ ಹೋದರೆ ಮತ್ತು ಬಾವಿಗಳನ್ನು ಹತ್ತಿರಕ್ಕೆ ಅಗೆದರೆ (120 ಮೀ ಗಿಂತ ಕಡಿಮೆ) ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಚಿನ್ನವನ್ನು ಕಂಡುಹಿಡಿಯುವ ಸಾಧ್ಯತೆಯಿದೆ ಎಂದು ನಾವು ಸೂಚಿಸಿದ್ದೇವೆ. ಆದರೆ ಖಂಡಿತವಾಗಿಯೂ 3,350 ಟನ್ ಅಲ್ಲ ” ವಿಜ್ಞಾನಿ ಓರ್ವರು ತಿಳಿಸಿದ್ದಾರೆ.

ಸದ್ಯಕ್ಕೆ ಏಳು ಸದಸ್ಯರ ತಂಡವೊಂದು ಈ ಜಾಗದಲ್ಲಿ ಇನ್ನು ಅಧ್ಯಯನ ನಡೆಸುತ್ತಿದೆ. ಚಿನ್ನದ ಹೊರತಾಗಿ, ಈ ಪ್ರದೇಶದಲ್ಲಿ ಯುರೇನಿಯಂನಂತಹ ಅಪರೂಪದ ಖನಿಜಗಳ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಉತ್ತರಪ್ರದೇಶದ ಬುಂದೇಲ್ಖಂಡ್ ಮತ್ತು ವಿಂಧ್ಯಾನ್ ಜಿಲ್ಲೆಗಳಲ್ಲಿ ಚಿನ್ನ, ವಜ್ರ, ಪ್ಲಾಟಿನಂ, ಸುಣ್ಣದ ಕಲ್ಲು, ಗ್ರಾನೈಟ್, ಫಾಸ್ಫೇಟ್, ಸ್ಫಟಿಕ ಶಿಲೆ ಮತ್ತು ಚೀನಾ ಜೇಡಿಮಣ್ಣಿನಂತಹ ಖನಿಜಗಳಿವೆ ಎನ್ನಲಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಚಿನ್ನದ ರಾಶಿ ರಾಶಿ ಗಣಿಯೆ ಸಿಕ್ಕರೆ ಭಾರತ ಮತ್ತಷ್ಟು ಸೂಪರ್ ಪವರ್ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.