ಜೀವನಶೈಲಿ

ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

5282

ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು.  ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ.  ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

ಆದರೆ ಇದು ಆರೋಗ್ಯಕರವೇ? ತಜ್ಞರಲ್ಲಿ ಈ ಪ್ರಶ್ನೆಯನ್ನು ಕೇಳಿದರೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದು ಅತ್ಯಂತ ಅನಾರೋಗ್ಯಕರ ಅಭ್ಯಾಸ ಎಂಬ ಉತ್ತರ ಸಿಗುತ್ತದೆ.ಹಾಗಾದರೆ ಟೀ ಯಾವಾಗ ಕುಡಿಯಬೇಕು ಎಂಬ ಪ್ರಶ್ನೆಗೆ ತಜ್ಞರು ಬೆಳಗ್ಗಿನ ಉಪಾಹಾರದ ಬಳಿಕ ಸೇವಿಸುವುದು ಉತ್ತಮ ಎಂಬ ಉತ್ತರ ನೀಡುತ್ತಾರೆ. ಆದರೆ ಟೀ ಸೇವನೆಯ ಪ್ರಮಾಣ ಇಡಿಯ ದಿನದಲ್ಲಿ ಮಿತವಾಗಿರುವುದೂ ಅಗತ್ಯ.

ಹಾಗಾದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಹುದೇ? ಮುಂದೆ ಓದಿ….

 ವಾಕರಿಕೆ ಬರುತ್ತದೆಯೇ?

ಟೀ ಕ್ಷಾರೀಯವೂ ಆಗಿದೆ ಕೊಂಚ ಆಮ್ಲೀಯವೂ ಆಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಜೀರ್ಣರಸಗಳ ಪ್ರಭಾವ ಏರುಪೇರಾಗುತ್ತದೆ. ಈ ಏರುಪೇರು ವಾಕರಿಕೆ ಬರಿಸುತ್ತದೆ.

ಕಪ್ಪು (ಬ್ಲಾಕ್) ಟೀ ಸುರಕ್ಷಿತವೇ?

ಕಪ್ಪು ಟೀ ಎಂದರೆ ಹೆಚ್ಚು ಕುದಿಸದ ಮತ್ತು ಹಾಲು ಸೇರಿಸದ ಟೀ. ಇದು ತೂಕ ಇಳಿಸಲು ಉತ್ತಮವಾದರೂ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಮೂಲಕ ಆಮ್ಲೀಯತೆ ಹೆಚ್ಚುತ್ತದೆ, ಇದರಿಂದ ಹೊಟ್ಟೆಯ ಜೀರ್ಣರಸಗಳೂ ಪ್ರಭಾವಕ್ಕೊಳಗಾಗಿ ಹೊಟ್ಟೆಯುಬ್ಬರಿಕೆ ಮತ್ತು ಹೊಟ್ಟೆ ತುಂಬಿರುವ ಹುಸಿಭಾವನೆಯನ್ನು ಮೂಡಿಸುತ್ತದೆ.

ಹಾಲು ಸೇರಿಸಿದ ಟೀ ಕುಡಿದರೆ ಆಗುವ ಅಡ್ಡಪರಿಣಾಮಗಳೇನು?

ಭಾರತದಲ್ಲಿ ಟೀ ಕುಡಿಯುವ ತೊಂಭತ್ತು ಶೇಖಡಾ ಜನರಲ್ಲಿ ಎಂಭತ್ತೊಂಭತ್ತು ಶೇಖಡಾ ಜನರು ಹಾಲು ಸೇರಿಸಿದ ಟೀ ಕುಡಿಯುತ್ತಾರೆ. ಆದರೆ ದಿನಕ್ಕೆ ಮೂರಕ್ಕಿಂತ ಹೆಚ್ಚು ಕಪ್ ಕುಡಿದರೆ ಇದು ಅನಗತ್ಯ ಕೊಬ್ಬು, ಆಮ್ಲೀಯತೆ ಮತ್ತು ಟಿನ್ನಿಟಸ್  ಅಥವಾ ಕಿವಿಗಳಲ್ಲಿ ಗುಂಯ್ಗುಡುವ ತೊಂದರೆಯನ್ನು ತಂದಿಡುತ್ತದೆ.

ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಸುಸ್ತಾದ ಭಾವನೆ, ಹೊಟ್ಟೆಯುಬ್ಬರಿಕೆ, ಜೀರ್ಣರಸಗಳು ಪ್ರಭಾವ ಕಳೆದುಕೊಳ್ಳುವುದು ಮೊದಲಾದ ತೊಂದರೆಗಳು ಎದುರಾಗಬಹುದು. ಇಲ್ಲಿ ಓದಿ :- ಗರ್ಭಿಣಿ ಮಹಿಳೆಯರು ಇವನ್ನು ಬಳಸಿದರೆ, ಹುಟ್ಟುವ ಮಕ್ಕಳಿಗೆ ಅಪಾಯ..!

ಸ್ಟ್ರಾಂಗ್ ಟೀ ಕುಡಿದರೆ ಯಾವ ದುಷ್ಪರಿಣಾಮಗಳಾಗುತ್ತವೆ?

ಹೆಚ್ಚಿನ ರುಚಿ ಪಡೆಯಲು ಎರಡು ವಿಧಾನಗಳಿವೆ. ಮೊದಲನೆಯದು ಟೀಪುಡಿಯನ್ನು ಹೆಚ್ಚು ಸಮಯದವರೆಗೆ ಕುದಿಸುವುದು. ಎರಡನೆಯದು ಹೆಚ್ಚಿನ ಪ್ರಮಾಣದ ಟೀ ಪುಡಿಹಾಕಿ ಕೊಂಚ ಸಮಯದ ವರೆಗೆ ಕುದಿಸುವುದು. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದಾದರೆ ಎರಡೂ ವಿಧಾನಗಳು ಮಾರಕವಾಗಿವೆ. ಅದರಲ್ಲೂ ಹಾಲಿಲ್ಲದ ಸ್ಟ್ರಾಂಗ್ ಟೀ ಕುಡಿಯುವುದರ ಮೂಲಕ ಜೀರ್ಣವ್ಯವಸ್ಥೆ ಹಾಳಾಗುತ್ತದೆ. ಏಕೆಂದರೆ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಆಮ್ಲಗಳು ಜೀರ್ಣರಸಗಳ ರಚನೆಯನ್ನು ಬದಲಿಸಿಬಿಡುತ್ತವೆ. ಇದು ಅಲ್ಸರ್, ಹುಳಿತೇಗು, ಹೊಟ್ಟೆಯುರಿ, ಎದೆಯುರಿ ಮೊದಲಾದವುಗಳಿಗೆ ನೇರವಾಗಿ ಕಾರಣವಾಗುತ್ತದೆ.

ನಾಲ್ಕೈದು ಬಗೆಯ ಟೀಪುಡಿ ಬೆರೆಸಿದರೆ ಏನಾಗುತ್ತದೆ

ಫ್ಯಾಕ್ಟರಿಯಲ್ಲಿ ತ್ಯಾಜ್ಯವಾಗಿ ಹೋಗಬಹುದಾದ, ಆದರೆ ಕೊಂಚ ಟೀ ಅಂಶವಿರುವ ಪುಡಿಯನ್ನು ಅಲ್ಪ ಪ್ರಮಾಣದಲ್ಲಿ ಟೀಪುಡಿಯಲ್ಲಿ ಬೆರೆಸಿ ಲಾಭ ಮಾಡಿಕೊಳ್ಳಲಾಗುತ್ತದೆ. ಅಗ್ಗದ ಟೀಪುಡಿಯನ್ನು ದುಬಾರಿ ಟೀಪುಡಿಯೊಂದಿಗೂ ಬೆರೆಸಿ ಮಾರಾಟ ಮಾಡುತ್ತಾರೆ.

ಆದರೆ ಪ್ರತಿಷ್ಠಿತ ಸಂಸ್ಥೆಗಳು ನುರಿತ ಚಹಾ ರುಚಿ ನೋಡುವವರ ಮೂಲಕ , ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಎರಡು ಅಥವಾ ಹೆಚ್ಚು ಪುಡಿಗಳನ್ನು ಬೆರೆಸಿ ಪರೀಕ್ಷಿಸಿ ಸುರಕ್ಷಿತ ಎಂದು ಖಚಿತಪಡಿಸಿದ ಮೇಲೆ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಇದಕ್ಕೆ ಬ್ಲೆಂಡ್ಎಂದು ಕರೆಯುತ್ತಾರೆ.

ಈ ಬ್ಲೆಂಡ್ ಟೀಪುಡಿ ಕುಡಿಯುವುದು ಸುರಕ್ಷಿತವೇ ಹೊರತು ನಾವಾಗಿ ನಮ್ಮ ಮನಸ್ಸಿಗೆ ಬಂದಂತೆ ಎರಡು ಅಥವಾ ಹೆಚ್ಚಿನ ಟೀಪುಡಿಗಳನ್ನು ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಮಾರಕ ಹಾಗೂ ಇದು ಪಾನಮತ್ತನಾಗಿರುವ ಅನುಭವವನ್ನೂ ನೀಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಥ್ರೀಮಿಕ್ಸ್, ಸೆವೆನ್ ಮಿಕ್ಸ್ ಎಲ್ಲವೂ ವ್ಯಾಪಾರದ ತಂತ್ರಗಳೇ ಹೊರತು ಆರೋಗ್ಯಕರವಲ್ಲ.

ಟೀ ಮತ್ತು ಬಿಸ್ಕತ್
ಭಾರತದಲ್ಲಿ ಅತಿ ಸಾಮಾನ್ಯವಾದ ಧಿಡೀರ್ ತಿಂಡಿ ಎಂದರೆ ಟೀ ಮತ್ತು ಬಿಸ್ಕತ್.  ಟೀ ಮತ್ತು ಬಿಸ್ಕತ್ ತಿನ್ನುವುದು ಉತ್ತಮ ಅಭ್ಯಾಸ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಬಿಸ್ಕತ್ ಬದಲಿಗೆ ಟೋಸ್ಟ್, ರಸ್ಕ್ ಮೊದಲಾದವುಗಳನ್ನೂ ಸೇವಿಸಬಹುದು. ಇವುಗಳಲ್ಲಿರುವ ಹಿಟ್ಟಿನ ಅಂಶ ಟೀ ಯಲ್ಲಿರುವ ಆಮ್ಲೀಯತೆಯನ್ನು ಹೀರಿಕೊಳ್ಳುವ ಕಾರಣ ಜೀರ್ಣರಸಗಳು ಹೆಚ್ಚು ಪ್ರಭಾವಕ್ಕೊಳಗಾಗುವುದಿಲ್ಲ. ಟೀ ಒಟ್ಟಿಗೆ ಸಿಹಿ ಅಥವಾ ಉಪ್ಪಿನ ಅಂಶವಿರುವ ತಿಂಡಿಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಸೋಡಿಯಂ ಅಂಶವನ್ನು ಪಡೆದುಕೊಂಡು ಹೊಟ್ಟೆಯ ಮತ್ತು ಕರುಳಿನ ಹುಣ್ಣು (ಅಲ್ಸರ್) ನಿಂದ ಪಾರಾಗಬಹುದು

ಟೀ ಕುಡಿಯುವುದರಲ್ಲಿ ಅತಿಕೆಟ್ಟ ಅಭ್ಯಾಸ 

ಆಹಾರ ಸೇವನೆಯ ಬಳಿಕ ಟೀ ಕುಡಿಯುವುದು ಕೆಟ್ಟ ಅಭ್ಯಾಸವಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಸುದ್ದಿ

    ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ…

  • ಸುದ್ದಿ

    ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

    ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….