ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಆದರೆ ಇದು ಆರೋಗ್ಯಕರವೇ? ತಜ್ಞರಲ್ಲಿ ಈ ಪ್ರಶ್ನೆಯನ್ನು ಕೇಳಿದರೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದು ಅತ್ಯಂತ ಅನಾರೋಗ್ಯಕರ ಅಭ್ಯಾಸ ಎಂಬ ಉತ್ತರ ಸಿಗುತ್ತದೆ.ಹಾಗಾದರೆ ಟೀ ಯಾವಾಗ ಕುಡಿಯಬೇಕು ಎಂಬ ಪ್ರಶ್ನೆಗೆ ತಜ್ಞರು ಬೆಳಗ್ಗಿನ ಉಪಾಹಾರದ ಬಳಿಕ ಸೇವಿಸುವುದು ಉತ್ತಮ ಎಂಬ ಉತ್ತರ ನೀಡುತ್ತಾರೆ. ಆದರೆ ಟೀ ಸೇವನೆಯ ಪ್ರಮಾಣ ಇಡಿಯ ದಿನದಲ್ಲಿ ಮಿತವಾಗಿರುವುದೂ ಅಗತ್ಯ.
ಹಾಗಾದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಹುದೇ? ಮುಂದೆ ಓದಿ….
ವಾಕರಿಕೆ ಬರುತ್ತದೆಯೇ?
ಟೀ ಕ್ಷಾರೀಯವೂ ಆಗಿದೆ ಕೊಂಚ ಆಮ್ಲೀಯವೂ ಆಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಜೀರ್ಣರಸಗಳ ಪ್ರಭಾವ ಏರುಪೇರಾಗುತ್ತದೆ. ಈ ಏರುಪೇರು ವಾಕರಿಕೆ ಬರಿಸುತ್ತದೆ.
ಕಪ್ಪು (ಬ್ಲಾಕ್) ಟೀ ಸುರಕ್ಷಿತವೇ?
ಕಪ್ಪು ಟೀ ಎಂದರೆ ಹೆಚ್ಚು ಕುದಿಸದ ಮತ್ತು ಹಾಲು ಸೇರಿಸದ ಟೀ. ಇದು ತೂಕ ಇಳಿಸಲು ಉತ್ತಮವಾದರೂ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಮೂಲಕ ಆಮ್ಲೀಯತೆ ಹೆಚ್ಚುತ್ತದೆ, ಇದರಿಂದ ಹೊಟ್ಟೆಯ ಜೀರ್ಣರಸಗಳೂ ಪ್ರಭಾವಕ್ಕೊಳಗಾಗಿ ಹೊಟ್ಟೆಯುಬ್ಬರಿಕೆ ಮತ್ತು ಹೊಟ್ಟೆ ತುಂಬಿರುವ ಹುಸಿಭಾವನೆಯನ್ನು ಮೂಡಿಸುತ್ತದೆ.
ಹಾಲು ಸೇರಿಸಿದ ಟೀ ಕುಡಿದರೆ ಆಗುವ ಅಡ್ಡಪರಿಣಾಮಗಳೇನು?
ಭಾರತದಲ್ಲಿ ಟೀ ಕುಡಿಯುವ ತೊಂಭತ್ತು ಶೇಖಡಾ ಜನರಲ್ಲಿ ಎಂಭತ್ತೊಂಭತ್ತು ಶೇಖಡಾ ಜನರು ಹಾಲು ಸೇರಿಸಿದ ಟೀ ಕುಡಿಯುತ್ತಾರೆ. ಆದರೆ ದಿನಕ್ಕೆ ಮೂರಕ್ಕಿಂತ ಹೆಚ್ಚು ಕಪ್ ಕುಡಿದರೆ ಇದು ಅನಗತ್ಯ ಕೊಬ್ಬು, ಆಮ್ಲೀಯತೆ ಮತ್ತು ಟಿನ್ನಿಟಸ್ ಅಥವಾ ಕಿವಿಗಳಲ್ಲಿ ಗುಂಯ್ಗುಡುವ ತೊಂದರೆಯನ್ನು ತಂದಿಡುತ್ತದೆ.
ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಸುಸ್ತಾದ ಭಾವನೆ, ಹೊಟ್ಟೆಯುಬ್ಬರಿಕೆ, ಜೀರ್ಣರಸಗಳು ಪ್ರಭಾವ ಕಳೆದುಕೊಳ್ಳುವುದು ಮೊದಲಾದ ತೊಂದರೆಗಳು ಎದುರಾಗಬಹುದು. ಇಲ್ಲಿ ಓದಿ :- ಗರ್ಭಿಣಿ ಮಹಿಳೆಯರು ಇವನ್ನು ಬಳಸಿದರೆ, ಹುಟ್ಟುವ ಮಕ್ಕಳಿಗೆ ಅಪಾಯ..!
ಸ್ಟ್ರಾಂಗ್ ಟೀ ಕುಡಿದರೆ ಯಾವ ದುಷ್ಪರಿಣಾಮಗಳಾಗುತ್ತವೆ?
ಹೆಚ್ಚಿನ ರುಚಿ ಪಡೆಯಲು ಎರಡು ವಿಧಾನಗಳಿವೆ. ಮೊದಲನೆಯದು ಟೀಪುಡಿಯನ್ನು ಹೆಚ್ಚು ಸಮಯದವರೆಗೆ ಕುದಿಸುವುದು. ಎರಡನೆಯದು ಹೆಚ್ಚಿನ ಪ್ರಮಾಣದ ಟೀ ಪುಡಿಹಾಕಿ ಕೊಂಚ ಸಮಯದ ವರೆಗೆ ಕುದಿಸುವುದು. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದಾದರೆ ಎರಡೂ ವಿಧಾನಗಳು ಮಾರಕವಾಗಿವೆ. ಅದರಲ್ಲೂ ಹಾಲಿಲ್ಲದ ಸ್ಟ್ರಾಂಗ್ ಟೀ ಕುಡಿಯುವುದರ ಮೂಲಕ ಜೀರ್ಣವ್ಯವಸ್ಥೆ ಹಾಳಾಗುತ್ತದೆ. ಏಕೆಂದರೆ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಆಮ್ಲಗಳು ಜೀರ್ಣರಸಗಳ ರಚನೆಯನ್ನು ಬದಲಿಸಿಬಿಡುತ್ತವೆ. ಇದು ಅಲ್ಸರ್, ಹುಳಿತೇಗು, ಹೊಟ್ಟೆಯುರಿ, ಎದೆಯುರಿ ಮೊದಲಾದವುಗಳಿಗೆ ನೇರವಾಗಿ ಕಾರಣವಾಗುತ್ತದೆ.
ನಾಲ್ಕೈದು ಬಗೆಯ ಟೀಪುಡಿ ಬೆರೆಸಿದರೆ ಏನಾಗುತ್ತದೆ
ಫ್ಯಾಕ್ಟರಿಯಲ್ಲಿ ತ್ಯಾಜ್ಯವಾಗಿ ಹೋಗಬಹುದಾದ, ಆದರೆ ಕೊಂಚ ಟೀ ಅಂಶವಿರುವ ಪುಡಿಯನ್ನು ಅಲ್ಪ ಪ್ರಮಾಣದಲ್ಲಿ ಟೀಪುಡಿಯಲ್ಲಿ ಬೆರೆಸಿ ಲಾಭ ಮಾಡಿಕೊಳ್ಳಲಾಗುತ್ತದೆ. ಅಗ್ಗದ ಟೀಪುಡಿಯನ್ನು ದುಬಾರಿ ಟೀಪುಡಿಯೊಂದಿಗೂ ಬೆರೆಸಿ ಮಾರಾಟ ಮಾಡುತ್ತಾರೆ.
ಆದರೆ ಪ್ರತಿಷ್ಠಿತ ಸಂಸ್ಥೆಗಳು ನುರಿತ ಚಹಾ ರುಚಿ ನೋಡುವವರ ಮೂಲಕ , ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಎರಡು ಅಥವಾ ಹೆಚ್ಚು ಪುಡಿಗಳನ್ನು ಬೆರೆಸಿ ಪರೀಕ್ಷಿಸಿ ಸುರಕ್ಷಿತ ಎಂದು ಖಚಿತಪಡಿಸಿದ ಮೇಲೆ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಇದಕ್ಕೆ ಬ್ಲೆಂಡ್ಎಂದು ಕರೆಯುತ್ತಾರೆ.
ಈ ಬ್ಲೆಂಡ್ ಟೀಪುಡಿ ಕುಡಿಯುವುದು ಸುರಕ್ಷಿತವೇ ಹೊರತು ನಾವಾಗಿ ನಮ್ಮ ಮನಸ್ಸಿಗೆ ಬಂದಂತೆ ಎರಡು ಅಥವಾ ಹೆಚ್ಚಿನ ಟೀಪುಡಿಗಳನ್ನು ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಮಾರಕ ಹಾಗೂ ಇದು ಪಾನಮತ್ತನಾಗಿರುವ ಅನುಭವವನ್ನೂ ನೀಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಥ್ರೀಮಿಕ್ಸ್, ಸೆವೆನ್ ಮಿಕ್ಸ್ ಎಲ್ಲವೂ ವ್ಯಾಪಾರದ ತಂತ್ರಗಳೇ ಹೊರತು ಆರೋಗ್ಯಕರವಲ್ಲ.
ಟೀ ಮತ್ತು ಬಿಸ್ಕತ್
ಭಾರತದಲ್ಲಿ ಅತಿ ಸಾಮಾನ್ಯವಾದ ಧಿಡೀರ್ ತಿಂಡಿ ಎಂದರೆ ಟೀ ಮತ್ತು ಬಿಸ್ಕತ್. ಟೀ ಮತ್ತು ಬಿಸ್ಕತ್ ತಿನ್ನುವುದು ಉತ್ತಮ ಅಭ್ಯಾಸ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಬಿಸ್ಕತ್ ಬದಲಿಗೆ ಟೋಸ್ಟ್, ರಸ್ಕ್ ಮೊದಲಾದವುಗಳನ್ನೂ ಸೇವಿಸಬಹುದು. ಇವುಗಳಲ್ಲಿರುವ ಹಿಟ್ಟಿನ ಅಂಶ ಟೀ ಯಲ್ಲಿರುವ ಆಮ್ಲೀಯತೆಯನ್ನು ಹೀರಿಕೊಳ್ಳುವ ಕಾರಣ ಜೀರ್ಣರಸಗಳು ಹೆಚ್ಚು ಪ್ರಭಾವಕ್ಕೊಳಗಾಗುವುದಿಲ್ಲ. ಟೀ ಒಟ್ಟಿಗೆ ಸಿಹಿ ಅಥವಾ ಉಪ್ಪಿನ ಅಂಶವಿರುವ ತಿಂಡಿಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಸೋಡಿಯಂ ಅಂಶವನ್ನು ಪಡೆದುಕೊಂಡು ಹೊಟ್ಟೆಯ ಮತ್ತು ಕರುಳಿನ ಹುಣ್ಣು (ಅಲ್ಸರ್) ನಿಂದ ಪಾರಾಗಬಹುದು
ಟೀ ಕುಡಿಯುವುದರಲ್ಲಿ ಅತಿಕೆಟ್ಟ ಅಭ್ಯಾಸ
ಆಹಾರ ಸೇವನೆಯ ಬಳಿಕ ಟೀ ಕುಡಿಯುವುದು ಕೆಟ್ಟ ಅಭ್ಯಾಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…
ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…