ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್ ಗಳನ್ನ ಮಾತನಾಡುವುದಕ್ಕೆ ಬಳಸಿದರೆ ಹೆಚ್ಚು ತೊಂದರೆ ಇರುವುದಿಲ್ಲ ಆದರೆ ಇಂದಿನ ಕಾಲದಲ್ಲಿ ಜನರು ಇಂಟೆರ್ ನೆಟ್ ಮೂಲಕ ಆಟವಾಡಲು ಮತ್ತು ಸಾಮಾಜಿಕ ಜಾಲತಾಣವನ್ನ ಬಳಸಲು ಹೆಚ್ಚಿನ ಸಮಯವನ್ನ ಕೊಡುತ್ತಿದ್ದಾರೆ.

ಇನ್ನು ಜನರು ಹೆಚ್ಚಾಗಿ ಮೊಬೈಲ್ ಗಳನ್ನ ಬಳಕೆ ಮಾಡುತ್ತಿರುವುದರಿಂದ ನಾನಾ ರೀತಿಯ ಖಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಅನ್ನುವುದು ತುಂಬಾ ಬೇಸರದ ಸಂಗತಿ ಆಗಿದೆ. ದಿನದ 24 ಘಂಟೆಯಲ್ಲಿ ಹೆಚ್ಚಿನ ಜನರು 10 ಘಂಟೆಗಳನ್ನ ಮೊಬೈಲ್ ಬಳಕೆ ಮಾಡಲು ಸೀಮಿತವಾಗಿ ಇಡುತ್ತಿದ್ದಾರೆ ಅನ್ನುವುದು ವಿಷಾದದ ಸಂಗತಿಯಾಗಿದೆ. ಇನ್ನು ಕೆಲವರು ಬೆಳಿಗ್ಗೆ ಕಣ್ಣು ಬಿಟ್ಟ ಕೂಡಲೇ ಮೊಬೈಲ್ ಬಳಸಲು ಶುರು ಮಾಡುತ್ತಾರೆ ಮತ್ತು ಮಲಗುವಾಗ ಕೂಡ ತುಂಬಾ ಸಮಯ ಮೊಬೈಲ್ ಬಳಕೆ ಮಾಡುತ್ತಾರೆ, ಇನ್ನು ಕೆಲವರು ಕೆಲಸದ ವಿಷಯವಾಗಿ ಹೆಚ್ಚು ಸಮಯ ಮೊಬೈಲ್ ಬಳಸಿದರೆ ಇನ್ನೂ ಕೆಲವರು ಟೈಮ್ ಪಾಸ್ ಮಾಡುವ ಸಲುವಾಗಿ ಮೊಬೈಲ್ ಬಳಕೆ ಮಾಡುತ್ತಾರೆ.

ಹಾಗಾದರೆ ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಮನುಷ್ಯನ ದೇಹಕ್ಕೆ ಆಗುವ ತೊಂದರೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೊಬೈಲ್ ಫೋನ್ ಗಳನ್ನ ಹೆಚ್ಚಾಗಿ ಬಳಕೆ ಮಾಡುವುದರಿಂದ ಮನುಷ್ಯನ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ ಮತ್ತು ಯಾವುದೇ ಕೆಲಸವನ್ನ ಪೂರ್ತಿ ಮಾಡಲು ನಿಮಗೆ ಬಹಳ ಹೆಚ್ಚಿನ ಸಮಯ ಬೇಕಾಗುತ್ತದೆ. ಇನ್ನು ಮೊಬೈಲ್ ಫೋನ್ ಗಳನ್ನ ಜಾಸ್ತಿ ಬಳಕೆ ಮಾಡಿದರೆ ನಿಮ್ಮ ಕೆಲಸಕ್ಕಿಂತ ಜಾಸ್ತಿ ಬೆರೆ ಕಡೆ ನಮ್ಮ ಗಮನ ಹೆಚ್ಚಾಗಿ ಹೋಗುತ್ತದೆ, ಚಾರ್ಜ್ ಕಡಿಮೆ ಆಗಿ ಕೆಲವು ಸಮಯ ನಿಮಗೆ ಮೊಬೈಲ್ ಬಳಸಲು ಆಗಲಿಲ್ಲ ಅಂದರೆ ಹುಚ್ಚು ಹಿಡಿದ ಅನುಭವ ಆಗುತ್ತದೆ ಮತ್ತು ಇದರ ಪರಿಣಾಮ ಜೀವನದಲ್ಲಿ ಹತಾಶೆ ಜಾಸ್ತಿ ಆಗಿ ಯಾವುದೇ ಕೆಲಸದಲ್ಲಿ ಆಸಕ್ತಿ ಇರುವುದಿಲ್ಲ.

ಮೊಬೈಲ್ ಬಳಕೆ ಹೆಚ್ಚು ಬಳಕೆ ಮಾಡುವವರಿಗೆ ಸಣ್ಣ ಸಣ್ಣ ವಿಚಾರಗಳಿಗೂ ಹೆಚ್ಚು ಕೋಪ ಬರುತ್ತದೆ ಮತ್ತು ಭಾವನೆಗಳ ಮೇಲೆ ನಿಯಂತ್ರಣ ಕಡಿಮೆ ಆಗುತ್ತದೆ ಮತ್ತು ಎದುರುಗಡೆ ಇರುವ ವ್ಯಕ್ತಿಯ ಭಾವನೆಗಳು ನಮಗೆ ಅರ್ಥ ಆಗುವುದಿಲ್ಲ. ಇನ್ನು ಇಷ್ಟು ಮಾತ್ರವಲ್ಲದೆ ಮೆದುಳಿನಲ್ಲಿನ ಡೊಫೋಮೈನ್ ರಿಸೆಪ್ಟರ್ಸ್ ಕಡಿಮೆ ಆಗಿ ಮಾನಸಿಕ ಖಿನ್ನತೆ ಅಥವಾ ಡಿಪ್ರೆಶನ್ ಉಂಟಾಗುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಸುವವರಿಗೆ ಪದೇ ಪದೇ ಕಾಫಿ ಬೇಕು, ಟೀ ಬೇಕು ಅಥವಾ ಎಣ್ಣೆ ಹೊಡಿಬೇಕು ಮತ್ತು ಹೋಗೆ ಎಳಿಬೇಕು ಅನಿಸುವುದು ಆಗುತ್ತದೆ ಮತ್ತು ಅದನ್ನ ನಿಯಂತ್ರಣಕ್ಕೆ ತರಲು ಆಗುವುದಿಲ್ಲ. ಇನ್ನು ಮೊಬೈಲ್ ಗಳಿಂದ ಬರುವ ವಿಕಿರಣಗಳಿಂದ ಕಣ್ಣಿನ ದೃಷ್ಟಿ ಕಡಿಮೆ ಆಗುತ್ತದೆ ಮತ್ತು ತಲೆ ನೋವು ಹಾಗೆ ಮೈಗ್ರೇನ್ ಪೇನ್ ಕೂಡ ಜಾಸ್ತಿ ಆಗುತ್ತದೆ.

ಮೊಬೈಲ್ ಹೆಚ್ಚು ಬಳಕೆ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶಗಳ ಸಂಗ್ರಹ ಜಾಸ್ತಿ ಆಗಿ ದೇಹ ದಪ್ಪ ಆಗುತ್ತದೆ, ಇನ್ನು ಇದರ ಜೊತೆಗೆ ಕುತ್ತಿಗೆ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಬರುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಕೆ ಮಾಡುವವರಿಗೆ ರಾತ್ರಿಯ ಸಮಯದಲ್ಲಿ ಹೆಚ್ಚಾಗಿ ನಿದ್ರೆ ಬರುವುದಿಲ್ಲ, ಸ್ನೇಹಿತರೆ ಮೊಬೈಲ್ ಗಳನ್ನ ಹೆಚ್ಚು ಬಳಕೆ ಮಾಡುವುದರಿಂದ ಹೀಗೆ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತದೆ. ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಪಬ್ ಜಿ ಆಟವನ್ನ ಆಡಲು ಹೆಚ್ಚಿನ ಸಮಯ ಹಾಳು ಮಾಡುತ್ತಿದ್ದು ಅದೂ ಅವರ ಆರೋಗ್ಯದ ಮೇಲೆ ತುಂಬಾ ಪ್ರಭಾವನ್ನ ಬೀರುತ್ತಿದೆ, ಸ್ನೇಹಿತರೆ ಇನ್ನಾದರೂ ಸ್ವಲ್ಪ ಎಚ್ಛೆತ್ತುಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…