ಸುದ್ದಿ

ಕೊರೋನಾ ವೈರಸ್ ಭಯದಲ್ಲಿದ್ದ ಜನರಿಗೆ ಮತ್ತೊಂದು ಶಾಕ್, ಬಂದಿದೆ ಇನ್ನೊಂದು ಖಾಯಿಲೆ!

170

ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು ವಿಶ್ವಸಂಸ್ಥೆ ಕೂಡ ಕೊರೋನಾ ಬಗ್ಗೆ ಭಾರಿ ಮಟ್ಟದಲ್ಲಿ ಕಳವಳ ವ್ಯಕ್ತ ಪಡಿಸಿದೆ, ಪ್ರಪಂಚದ 94 ರಾಷ್ಟ್ರಗಳು ಹಾಗು ಹಲವು ಭಾಗಗಳಲ್ಲಿ ಕೊರೋನಾ ಹರಡಿರುವ ಬಗ್ಗೆ ವರದಿಯಾಗಿದೆ.

ಚೀನಾದಲ್ಲಿ ಸಾವಿರಾರು ಮಂದಿಯ ಸಾವಿಗೆ ಕಾರಣವಾಗಿರುವ ಕೊರೋನಾ ವೈರಸ್ ಪ್ರಕರಣ ಕರ್ನಾಟಕದಲ್ಲಿ ಕೂಡ ವರದಿಯಾಗಿದೆ. ಮೊದಲಿಗೆ ಹೈದರಾಬಾದ್ ನ ಟೆಕ್ಕಿ ಗೆ ಕೊರೋನಾ ಸೋಂಕು ತಗುಲಿ ನಂತರ ಬೆಂಗಳೂರಿನಿಂದ ಆತ ತನ್ನ ಊರಿಗೆ ಪ್ರಯಾಣಿಸಿದ್ದಾನೆ ಎಂದು ವರದಿಯಾಗಿತ್ತು, ಇದಾದ ಬಳಿಕ ಬೆಂಗಳೂರಿನಲ್ಲಿ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. ಸದ್ಯಕ್ಕೆ ಒಂದೆಡೆ ಕೊರೋನಾ ಭೀತಿಯಿಂದ ಬದುಕುತ್ತಿರುವ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ, ಹೌದು ಸದ್ಯಕ್ಕೆ ಕರುನಾಡಿಗೆ ನೆರೆ ರಾಜ್ಯದಿಂದ ಬಂದಿರುವ ಆ ಒಂದು ಸುದ್ದಿ ಮತ್ತಷ್ಟು ಸಂಕಷ್ಟ ತರಿಸಿದೆ.

ಒಂದು ಕಡೆ ಕರೋನ ವೈರಸ್ ನಿಂದ ಭಯಭೀತರಾಗಿದ್ದಾರೆ ಇನ್ನೊಂದು ಕೇರಳದ ಕೋಳಿಕೋಡ್ ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಕೋಳಿ ಫಾರಂ ಹಾಗೂ ಖಾಸಗಿ ನರ್ಸರಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು ಕೂಡಲೇ ಕೇರಳ ಪಶುಸಂಗೋಪನಾ ಇಲಾಖೆ ತುರ್ತು ಸಭೆ ಕರೆದಿದೆ. ಪ್ರತಿ ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಕೋಳಿಗಳು ಸಾಯುತ್ತಿರುವುದರಿಂದ ಅನುಮಾನಗೊಂಡ ಕೋಳಿ ಸಾಕಾಣಿಕೆಗಾರರು ಕೋಳಿಗಳನ್ನ ಕಣ್ಣೂರು ಲ್ಯಾಬ್ ಮತ್ತು ಭೋಪಾಲ್ ಲ್ಯಾಬ್ ಗಳಿಗೆ ಕಳುಹಿಸಿದ್ದರು, ಇನ್ನು ಇನ್ನು ಲ್ಯಾಬ್ ಗೆ ಕಳುಹಿಸಲಾಗಿದ್ದ ಕೋಳಿಗಳನ್ನ ಪರಿಶೀಲನೆ ಮಾಡಿದಾಗ ಕೋಳಿಗಳಿಗೆ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ.

ರೋಗವು ನಿಯಂತ್ರಣದಲ್ಲಿದೆ ಮತ್ತು ಅದರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಕೇರಳದ ಅರೋಗ್ಯ ಇಲಾಖೆ ತಿಳಿಸಿದೆ, ಆದರೆ ಅಧಿಕಾರಿಗಳು ರಾಜ್ಯದಲ್ಲಿ ಹೆಚ್ಚಿನ ಎಚ್ಚರಿಕೆ ನೀಡುವಂತೆ ಒತ್ತಾಯಿಸಿದ್ದಾರೆ. ಇದು 2016 ರ ನಂತರ ಏಕಾಏಕಿ ರಾಜ್ಯದಲ್ಲಿ ಬರ್ಡ್ ಫ್ಲೂ ಪ್ರಕರಣವಾಗಿದೆ, ಪ್ರತಿದಿನ ಇನ್ನೂರು ಕೋಳಿಗಳು ಸಾಯಲು ಪ್ರಾರಂಭಿಸಿದಾಗ ರೋಗಗಳ ಅನುಮಾನ ಹೊರಹೊಮ್ಮಿತು ಎಂದು ಇಲಾಖೆ ಸ್ಪಷ್ಟಪಡಿಸಿದೆ. ಹಕ್ಕಿಗಳ ಸಾವಿನ ಬಗ್ಗೆ ನಮಗೆ ಗುರುವಾರವಾಷ್ಟೇ ಮಾತ್ರ ಮಾಹಿತಿ ನೀಡಲಾಯಿತು, ಕೂಡಲೇ ನಾವು ಪರೀಕ್ಷಾ ಮಾದರಿಗಳನ್ನು ಕಣ್ಣೂರು ಪ್ರಯೋಗಾಲಯಕ್ಕೆ ಮತ್ತು ನಂತರ ಭೋಪಾಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ ಮತ್ತು ನಾವು ಇನ್ನೂ ಮುಖ್ಯ ಕಾರ್ಯದರ್ಶಿಯಿಂದ ಮಾರ್ಗಸೂಚಿಗಳನ್ನು ಸ್ವೀಕರಿಸಿಲ್ಲ ಎಂದು ಪಶುಸಂಗೋಪನಾ ಅಧಿಕಾರಿ ಕೆ ಸಿಂಧು ಹೇಳಿದರು.

ವರದಿಗಳ ಪ್ರಕಾರ ಭೋಪಾಲ್ ಪ್ರಯೋಗಾಲಯದಿಂದ ಹಕ್ಕಿ ಜ್ವರ ಧ್ರಡೀಕರಣವಾಗಿದೆ, ಹೀಗಾಗಿ ಗಡಿಭಾಗ ಆಗಿರುವುದರಿಂದ ಕರ್ನಾಟಕ ಕೂಡ ಮತ್ತಷ್ಟು ಎಚ್ಚರ ವಹಿಸಬೇಕಾಗಿದೆ, ಒಂದೆಡೆ ಕೊರೋನಾ ಇನ್ನೊಂದೆಡೆ ಹಕ್ಕಿ ಜ್ವರ ಇವೆರಡು ಈಗ ಕರ್ನಾಟಕಕ್ಕೆ ಸಂಕಷ್ಟ ತಂದಿದೆ ಎನ್ನಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರಿ ಯೋಜನೆಗಳು

    ಅಂತರ್ಜಾತಿ ಮದುವೆ ಆಗಿ, ಕೇಂದ್ರ ಸರ್ಕಾರದಿಂದ ಲಕ್ಷ ಲಕ್ಷ ಹಣ ಪಡೆಯಿರಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

  • ಕರ್ನಾಟಕ

    ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

    ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾರ್ಟ್ ಅಟ್ಯಾಕ್ ಆದ 5 ನಿಮಿಷದ ಒಳಗಡೆ ಈ ಕೆಲಸ ಮಾಡಿದ್ರೆ ಆ ವ್ಯಕ್ತಿ ಬದುಕುವ ಸಾಧ್ಯತೆ ಹೆಚ್ಚು…

    ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…

  • ಸುದ್ದಿ

    ಚಂದನ್ ಶೆಟ್ಟಿ ನಿವೇದಿತಾ ಗೌಡ ನಿಶ್ಚಿತಾರ್ಥ ಹೇಗಿದೆ ಗೊತ್ತ…?

    ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್​ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ  ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ  ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ.  ಸದ್ಯ ಕಲರ್​ ಫುಲ್​ ಫ್ಲವರ್​ ಮೂಲಕ  ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ.  ಮಧ್ಯಾಹ್ನ 12.30ಕ್ಕೆ ಪರಸ್ಪರ…

  • ಸುದ್ದಿ

    ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

    ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…

  • ಉಪಯುಕ್ತ ಮಾಹಿತಿ

    ಯುವತಿಯೊಬ್ಬಳು ಫೇಸ್‍ಬುಕ್ ನಲ್ಲಿ ಚಾಟ್ ಮಾಡಿ ವಾಟ್ಸಪ್ ನಲ್ಲಿ ಸ್ಪೆಷಲ್ ದೋಖಾ ಕೊಟ್ಟಳು..!ತಿಳಿಯಲು ಈ ಲೇಖನ ಓದಿ..

    ಆನ್‍ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್‍ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್‍ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.